AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸೆಲೆಬ್ರಿಟಿಗಳ ಮನೆ ಎಷ್ಟು ಕೋಟಿ ರೂಪಾಯಿ ಬೆಲೆ ಬಾಳುತ್ತೆ ಗೊತ್ತಾ? ಇಲ್ಲಿದೆ ವಿವರ

ಶಾರುಖ್ ಖಾನ್ ಅವರ ಮನ್ನತ್​ ಅಂತೂ ಅಭಿಮಾನಿಗಳ ಫೇವರಿಟ್ ಜಾಗಗಳಲ್ಲಿ ಒಂದು. ಈ ರೀತಿ ಐಷಾರಾಮಿ ಮನೆ ಹೊಂದಿರುವ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಈ ಸೆಲೆಬ್ರಿಟಿಗಳ ಮನೆ ಎಷ್ಟು ಕೋಟಿ ರೂಪಾಯಿ ಬೆಲೆ ಬಾಳುತ್ತೆ ಗೊತ್ತಾ? ಇಲ್ಲಿದೆ ವಿವರ
ಶಾರುಖ್​-ಅಮಿತಾಭ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 04, 2024 | 8:54 AM

Share

ಬಾಲಿವುಡ್​ನಲ್ಲಿ ಹಲವು ಸೂಪರ್ ಸ್ಟಾರ್​ಗಳಿದ್ದಾರೆ. ಅನೇಕ ಸೆಲೆಬ್ರಿಟಿಗಳು ಮುಂಬೈನಲ್ಲಿ ಐಷಾರಾಮಿ ಮನೆ ಹೊಂದಿದ್ದಾರೆ. ತಮಗೆ ಬೇಕಾದ ರೀತಿಯಲ್ಲಿ ಸೆಲೆಬ್ರಿಟಿಗಳು ಮನೆ ಡಿಸೈನ್ ಮಾಡಿಕೊಂಡಿದ್ದಾರೆ. ದೇಶ ವಿದೇಶದಿಂದ ಮನೆಯ ಪಿಠೋಪಕರಣ ತರಿಸಿದ್ದಾರೆ. ಶಾರುಖ್ ಖಾನ್ (Shah RukhKhan) ಅವರ ಮನ್ನತ್​ ಅಂತೂ ಅಭಿಮಾನಿಗಳ ಫೇವರಿಟ್ ಜಾಗಗಳಲ್ಲಿ ಒಂದು. ಈ ರೀತಿ ಐಷಾರಾಮಿ ಮನೆ ಹೊಂದಿರುವ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಅಜಯ್ ದೇವಗನ್

ಇತ್ತೀಗೆ ಅಜಯ್ ದೇವಗನ್ ಹಾಗೂ ಕಾಜೋಲ್ ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿದ್ದಾರೆ. 5310 ಚದರ ಅಡಿ ವಿಸ್ತಾರವನ್ನು ಈ ಮನೆ ಹೊಂದಿದೆ. ಈ ಮನೆಗೆ ಶಿವಶಕ್ತಿ ಎಂದು ಹೆಸರು ಇಡಲಾಗಿದೆ. ಈ ಮನೆ 60 ಕೋಟಿ ರೂಪಾಯಿ ಬೆಲೆ ಬಾಳುತ್ತದೆ.

ಶಿಲ್ಪಾ ಶೆಟ್ಟಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮುಂಬೈನಲ್ಲಿ ಐಷಾರಾಮಿ ಮನೆ ಹೊಂದಿದ್ದಾರೆ. ವಿಶಾಲ ಗಾರ್ಡನ್, ಸ್ವಿಮ್ಮಿಂಗ್ ಪೂಲ್​ ಮೊದಲಾದ ವ್ಯವಸ್ಥೆಗಳನ್ನು ಇದು ಹೊಂದಿದೆ. ಈ ಮನೆಯ ಬೆಲೆ 100 ಕೋಟಿ ರೂಪಾಯಿ ಎನ್ನಲಾಗಿದೆ. ವಾಸ್ತು ಪ್ರಕಾರ ಈ ಮನೆಯನ್ನು ಡಿಸೈನ್ ಮಾಡಲಾಗಿದೆ. ಯೋಗಾಸನ ಮಾಡುವ ಸಂದರ್ಭದಲ್ಲಿ ಅವರು ಮನೆಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಶಾಹಿದ್ ಕಪೂರ್

ಶಾಹಿದ್ ಕಪೂರ್ ಅವರು ಮುಂಬೈನಲ್ಲಿ ಡುಪ್ಲೆಕ್ಸ್ ಅಪಾರ್ಟ್​ಮೆಂಟ್ ಹೊಂದಿದ್ದಾರೆ. 43ನೇ ಫ್ಲೋರ್​ನಲ್ಲಿ ಈ ಮನೆ ಇದೆ. ಈ ಮನೆ 56 ಕೋಟಿ ರೂಪಾಯಿ ಬೆಲೆ ಬಾಳುತ್ತದೆ.

ಅಮಿತಾಭ್ ಬಚ್ಚನ್

ನಟ ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಹಾಗೂ ಆರಾಧ್ಯ ಒಂದೇ ಮನೆಯಲ್ಲಿದ್ದಾರೆ. ಈ ಮನೆ 10 ಸಾವಿರ ಚದರ ಅಡಿ ಇದೆ. ಸಮುದ್ರದ ಸಮೀಪ ಇರುವ ಈ ಮನೆಯ ಬೆಲೆ 100-120 ಕೋಟಿ ರೂಪಾಯಿ ಇದೆ ಎನ್ನಲಾಗಿದೆ. ಇತ್ತೀಚೆಗೆ ಐಶ್ವರ್ಯಾ ರೈ ಅವರು ಈ ಮನೆಯಲ್ಲಿ ವಾಸ ಮಾಡುತ್ತಿಲ್ಲ ಎನ್ನಲಾಗಿದೆ.

ಶಾರುಖ್ ಖಾನ್

ಶಾರುಖ್ ಖಾನ್ ಅವರ ಮನೆಗೆ ‘ಮನ್ನತ್’ ಎಂದು ಹೆಸರು ಇಡಲಾಗಿದೆ. ಈ ಮನೆ ಒಂದು ರೀತಿಯಲ್ಲಿ ಅಭಿಮಾನಿಗಳಿಗೆ ದೇವಾಲಯ ಇದ್ದಂತೆ. ದಿನಂ ಪ್ರತಿ ಇಲ್ಲಿ ಜನರು ನೆರೆಯುತ್ತಾರೆ. ಈ ಮನೆ 27 ಸಾವಿರ ಚದರ ಅಡಿ ಇದೆ. ಈ ಮನೆಯಲ್ಲಿ ಲೈಬ್ರರಿ, ಜಿಮ್, ಥಿಯೇಟರ್ ಸೇರಿದಂತೆ ಹಲವು ವ್ಯವಸ್ಥೆ ಹೊಂದಿದೆ. ವಿಶಾಲವಾದ ಪಾರ್ಕಿಂಗ್ ಜಾಗ ಕೂಡ ಇದೆ. ಆರು ಅಂತಸ್ತಿನ ಈ ಕಟ್ಟಡ 200 ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಇದನ್ನು ಅವರ ಪತ್ನಿ ಗೌರಿ ಖಾನ್ ಡಿಸೈನ್ ಮಾಡಿದ್ದಾರೆ.

ಜಾನ್ ಅಬ್ರಹಾಂ

ಜಾನ್ ಅಬ್ರಾಹಂ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅವರು ಮುಂಬೈನಲ್ಲಿ ಮನೆ ಹೊಂದಿದ್ದಾರೆ. ಇದನ್ನು ಅವರ ಸಹೋದರ ಅಲಾನ್ ಡಿಸೈನ್ ಮಾಡಿದ್ದಾರೆ ಎನ್ನಲಾಗಿದೆ. ಈ ಮನೆಯ ಬೆಲೆ 70 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಮನೆ ಸಾಕಷ್ಟು ವಿಶಾಲವಾಗಿದೆ.

ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು ಜೊತೆಯಾಗಿ ಮನೆ ಹೊಂದಿದ್ದಾರೆ. ಬಾಂದ್ರಾದಲ್ಲಿರುವ ಸಾಗರ್ ರೇಷಂ ಅಪಾರ್ಟ್​ಮೆಂಟ್​ನಲ್ಲಿ 16, 17, 18 ಹಾಗೂ 19 ಅಂತಸ್ತಿನ ಮನೆ ದೀಪಿಕಾ ಹೆಸರಲ್ಲಿದೆ. ಇದರ ಬೆಲೆ 119 ಕೋಟಿ ರೂಪಾಯಿ ಎನ್ನಲಾಗಿದೆ.

 ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಅವರು ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಜುಹುನ ಪ್ರೈಮ್ ಬೀಚ್​​ನಲ್ಲಿ ಮನೆ ಹೊಂದಿದ್ದಾರೆ. ಈ ಮನೆಯನ್ನು ಟ್ವಿಂಕಲ್ ಖನ್ನಾ ಡಿಸೈನ್ ಮಾಡಿದ್ದಾರೆ. ಈ ಮನೆ ಕೋಟ್ಯಂತರ ರೂಪಾಯಿ ಬೆಲೆ ಬಾಳುತ್ತದೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು

ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರು ಸದ್ಯ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಅವರು ಮುಂಬೈನಲ್ಲಿರುವ ಹಲವು ಪ್ರಾಪರ್ಟಿಗಳನ್ನು ಮಾರಾಟ ಮಾಡಿದ್ದಾರೆ. ಅವರು ಲಾಸ್ ಏಂಜಲೀಸ್​ನಲ್ಲಿ ವಾಸವಾಗಿದ್ದಾರೆ. ಇಲ್ಲಿ 20 ಸಾವಿರ ಚದರ ಅಡಿಯ ಮನೆಯಲ್ಲಿ ವಾಸವಾಗಿದ್ದಾರೆ.

ಹೃತಿಕ್ ರೋಷನ್

ಬಾಲಿವುಡ್​ನ ಸ್ಟಾರ್ ಹೀರೋ ಹೃತಿಕ್ ರೋಷನ್ ಅವರು ‘ಫೈಟರ್’ ಸಿನಿಮಾ ರಿಲೀಸ್​ಗಾಗಿ ಕಾದಿದ್ದಾರೆ. ಜುಹು ಹಾಗೂ ವರ್ಸೋವಾ ಲಿಂಕ್ ರೋಡ್ನಲ್ಲಿ ಇವರು ಮನೆ ಹೊಂದಿದ್ದಾರೆ. ಅವರು ಅಪರೂಪಕ್ಕೊಮ್ಮೆ ಮನೆಯ ಫೋಟೋ ಹಂಚಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!