AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸುಣ್ಣವಾದ ಶಾರುಖ್​ ಖಾನ್​ಗೆ ಸೋಲಿಲ್ಲದ ಸರದಾರನ ನಿರ್ದೇಶನ; ಇಲ್ಲಿದೆ ಹೊಸ ಅಪ್​ಡೇಟ್

ರಾಜ್​ಕುಮಾರ್​ ಹಿರಾನಿ ಅವರು ಬಾಲಿವುಡ್​ನಲ್ಲಿ ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ಪಡೆದುಕೊಂಡಿದ್ದಾರೆ. 2 ದಶಕಗಳಿಂದ ಚಿತ್ರರಂಗದಲ್ಲಿ ಇರುವ ಅವರು ಮಾಡಿದ್ದು ಕೇವಲ 5 ಸಿನಿಮಾ. ಅವೆಲ್ಲವೂ ಸೂಪರ್​ ಹಿಟ್.

ಸೋತು ಸುಣ್ಣವಾದ ಶಾರುಖ್​ ಖಾನ್​ಗೆ ಸೋಲಿಲ್ಲದ ಸರದಾರನ ನಿರ್ದೇಶನ; ಇಲ್ಲಿದೆ ಹೊಸ ಅಪ್​ಡೇಟ್
ಶಾರುಖ್​ ಖಾನ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 23, 2021 | 6:13 PM

Share

ಶಾರುಖ್​ ಖಾನ್​ ಇತ್ತೀಚಿನ ವರ್ಷಗಳಲ್ಲಿ ಮುಟ್ಟಿದ್ದೆಲ್ಲವೂ ಸೋಲು ಕಾಣುತ್ತಿದೆ. ಇತ್ತೀಚೆಗೆ ಅವರ ಸಿನಿಮಾ ಗೆದ್ದ ದಾಖಲೆಯೇ ಇಲ್ಲ. ಈ ಬಗ್ಗೆ ಶಾರುಖ್​ಗೂ ಸಾಕಷ್ಟು ಬೇಸರವಿದೆ. ಒಂದೊಳ್ಳೆಯ ಹಿಟ್​ ಸಿನಿಮಾ ನೀಡಬೇಕು ಎಂಬುದು ಅವರ ಆಸೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಖ್ಯಾತ ನಿರ್ದೇಶಕರ ಜತೆ ಕೈಜೋಡಿಸೋಕೆ ಶಾರುಖ್​ ಪ್ಲ್ಯಾನ್​ ಮಾಡುತ್ತಿದ್ದಾರೆ. ಈಗ ಅವರು ಜನಪ್ರಿಯ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಗಾಸಿಪ್​ ಹರಿದಾಡಿದೆ.

ರಾಜ್​ಕುಮಾರ್​ ಹಿರಾನಿ ಅವರು ಬಾಲಿವುಡ್​ನಲ್ಲಿ ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ಪಡೆದುಕೊಂಡಿದ್ದಾರೆ. 2 ದಶಕಗಳಿಂದ ಚಿತ್ರರಂಗದಲ್ಲಿ ಇರುವ ಅವರು ಮಾಡಿದ್ದು ಕೇವಲ 5 ಸಿನಿಮಾ. ಅವೆಲ್ಲವೂ ಸೂಪರ್​ ಹಿಟ್. ಪ್ರತಿ ಸಿನಿಮಾಗೆ 2-3 ವರ್ಷ ತೆಗೆದುಕೊಳ್ಳುವ ಅವರು ಪರ್ಫೆಕ್ಟ್​ ಆಗಿ ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ಅವರ ನಿರ್ದೇಶನದ ಎಲ್ಲಾ ಚಿತ್ರಗಳು ಹಿಟ್​ ಆಗಿವೆ. ಈಗ ಶಾರುಖ್​ ಜತೆ ಇದೇ ಮೊದಲ ಬಾರಿಗೆ ಹಿರಾನಿ ಕೈಜೋಡಿಸುತ್ತಿದ್ದಾರೆ.

2018ರಲ್ಲಿ ತೆರೆಗೆ ಬಂದ ‘ಸಂಜು’ ಚಿತ್ರವೇ ಕೊನೆ. ಇದಾದ ನಂತರದಲ್ಲಿ ರಾಜ್​ಕುಮಾರ್​ ಹಿರಾನಿ ಯಾವುದೇ ಸಿನಿಮಾ ಘೋಷಿಸಿಲ್ಲ. ಈ ಚಿತ್ರ ಸಂಜಯ್​ ದತ್​ ಅವರ ಬಯೋಪಿಕ್​ ಆಗಿತ್ತು. ಈಗ ಅವರು ಸೈಲೆಂಟ್​ ಆಗಿ ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಮೂಲಕ ಶಾರುಖ್​ ಅವರನ್ನು ಗೆಲ್ಲಿಸೋಕೆ ಸಿದ್ಧತೆ ನಡೆಸಿದ್ದಾರೆ.

ಮುನ್ನಾ ಭಾಯ್​ ಎಂ.ಬಿ.ಬಿ.ಎಸ್, ಲಗೇ ರಹೋ ಮುನ್ನಾ ಭಾಯ್​, 3 ಈಡಿಯಟ್ಸ್​, ಪಿಕೆ ಹಾಗೂ ಸಂಜು ಚಿತ್ರಗಳನ್ನು ರಾಜ್​ಕುಮಾರ್​ ಹಿರಾನಿ ನಿರ್ದೇಶಿಸಿದ್ದಾರೆ. ಇವರಿಗೆ ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ಕೂಡ ಇದೆ. ಈಗ ಅವರು ಶಾರುಖ್​ ಜತೆ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಂದಹಾಗೆ, ಈ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ.

ಶಾರುಖ್​ ಸದ್ಯ, ‘ಪಠಾಣ್​’ ಹಾಗೂ ಅಟ್ಲೀ ನಿರ್ದೇಶನದ ಇನ್ನೂ ಹೆಸರಿಡದ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ಡಿಸ್ನಿ+ ಹಾಟ್​​ಸ್ಟಾರ್​ ಜತೆ ಅವರು ಪ್ರಾಜೆಕ್ಟ್​ ಒಂದನ್ನು ಮಾಡುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಸಾಕಷ್ಟು ಜಾಹೀರಾತುಗಳನ್ನು ನೀಡಲಾಗುತ್ತಿದೆ.

ಇದನ್ನೂ ಓದಿ:  ಶಾರುಖ್​ ಮನೆ ಎದುರು ನಿಂತ ಅಭಿಮಾನಿಗಳು; ಬಾಲ್ಕನಿಯಿಂದ ಮೊಬೈಲ್​ ಎಸೆದ ಕಿಂಗ್​ ಖಾನ್​

ಡಿವೋರ್ಸ್​ ಪಡೆದರೆ ಸಮಂತಾಗೆ ಸಿಗುವ ಹಣ ಎಷ್ಟು? ಅಕ್ಕಿನೇನಿ ಸೊಸೆಯ ಬಹುಕೋಟಿ ಕಹಾನಿ

ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ