AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್ ಚಿತ್ರದಲ್ಲಿ ಶಾರುಖ್ ಖಾನ್; ಸಿಕ್ತು ಬಿಗ್ ಅಪ್​ಡೇಟ್

ಯಶ್ ರಾಜ್ ಫಿಲ್ಮ್ಸ್​ ಸಂಸ್ಥೆ ‘ವಾರ್ 2’ ಚಿತ್ರಕ್ಕೆ ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಆ್ಯಕ್ಷನ್ ದೃಶ್ಯಗಳನ್ನು ಮುಂಬೈನಲ್ಲಿ ಶೂಟ್ ಮಾಡಲಾಗುತ್ತಿದೆ. 40ಕ್ಕೂ ಅಧಿಕ ಮಂದಿಯ ಜೊತೆ ಜೂನಿಯರ್ ಎನ್​ಟಿಆರ್ ಫೈಟ್ ಮಾಡುವ ದೃಶ್ಯ ಇರಲಿದೆ.  

ಜೂನಿಯರ್​ ಎನ್​ಟಿಆರ್ ಚಿತ್ರದಲ್ಲಿ ಶಾರುಖ್ ಖಾನ್; ಸಿಕ್ತು ಬಿಗ್ ಅಪ್​ಡೇಟ್
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: Oct 22, 2024 | 10:49 AM

Share

‘ವಾರ್’ ಸಿನಿಮಾ ಗೆಲುವಿನ ಬಳಿಕ ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ‘ವಾರ್ 2’ ಸಿನಿಮಾ ಶೂಟ್​ನಲ್ಲಿ ತೊಡಗಿಕೊಂಡಿದೆ. ಈ ಚಿತ್ರದಲ್ಲಿ ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್​ ಹಾಗೂ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಅಯಾನ್ ಮುಖರ್ಜಿ ನಿರ್ದೇಶನ ಮಾಡುತ್ತಿದ್ದು, ಆ್ಯಕ್ಷನ್​ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಈಗ ಸದ್ಯ ಮುಂಬೈನಲ್ಲಿ ಈ ಸಿನಿಮಾದ ಶೂಟ್ ನಡೆಯುತ್ತಿದೆ. ಈ ಚಿತ್ರದಲ್ಲಿ ಹೃತಿಕ್ ಅತಿಥಿ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ.

ಯಶ್ ರಾಜ್ ಫಿಲ್ಮ್ಸ್​ ಸಂಸ್ಥೆ ‘ವಾರ್ 2’ ಚಿತ್ರಕ್ಕೆ ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಆ್ಯಕ್ಷನ್ ದೃಶ್ಯಗಳನ್ನು ಮುಂಬೈನಲ್ಲಿ ಶೂಟ್ ಮಾಡಲಾಗುತ್ತಿದೆ. 40ಕ್ಕೂ ಅಧಿಕ ಮಂದಿಯ ಜೊತೆ ಜೂನಿಯರ್ ಎನ್​ಟಿಆರ್ ಫೈಟ್ ಮಾಡುವ ದೃಶ್ಯ ಇರಲಿದೆ.

‘ವಾರ್’ ಚಿತ್ರದಲ್ಲಿ ಈಗಾಗಲೇ ಹೃತಿಕ್ ಪಾತ್ರ ಹೈಲೈಟ್ ಆಗಿದೆ. ಹೀಗಾಗಿ, ‘ವಾರ್ 2’ ಚಿತ್ರದಲ್ಲಿ ಮತ್ತೆ ಆರಂಭದಿಂದ ಅವರ ಪಾತ್ರಕ್ಕೆ ಬಿಲ್ಡಪ್ ಕೊಡಬೇಕು ಎಂಬುದಿಲ್ಲ. ಆದರೆ, ಜೂನಿಯರ್ ಎನ್​ಟಿಆರ್ ಪಾತ್ರಕ್ಕೆ ಹಾಗಲ್ಲ. ಅವರ ಪಾತ್ರವನ್ನು ಹೆಚ್ಚು ಹೈಲೈಟ್ ಮಾಡುವುದು ಅನಿವಾರ್ಯ ಆಗಿದೆ. ಈ ಕಾರಣದಿಂದಲೇ ಅಯಾನ್ ಮುಖರ್ಜಿ ಅವರು ಹೆಚ್ಚು ರಾ ಆಗಿ ತಾರಕ್ ಪಾತ್ರವನ್ನು ತೋರಿಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಮೂರು ದಿನಗಳ ಕಾಲ ಶೂಟ್ ನಡೆಯಲಿದ್ದು, ಇದರಲ್ಲಿ ಸಂಪೂರ್ಣವಾಗಿ ಬಿಲ್ಡಪ್​ ದೃಶ್ಯಗಳ ಶೂಟ್ ಇರಲಿದೆ.

‘ಯಶ್ ರಾಜ್ ಫಿಲ್ಮ್ಸ್​’ ಸ್ಪೈ ಯೂನಿವರ್ಸ್ ಮಾಡಿದೆ. ಇದರ ಅಡಿಯಲ್ಲೇ ‘ವಾರ್’, ‘ಪಠಾಣ್’, ‘ಟೈಗರ್’ ಸಿನಿಮಾಗಳು ಬರುತ್ತವೆ. ಹೀಗಾಗಿ, ‘ವಾರ್ 2’ ಚಿತ್ರದಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರ ಮಾಡಬಹುದು ಎಂದು ಊಹಿಸಲಾಗಿದೆ.

ಇದನ್ನೂ ಓದಿ: ಕುಳಿತಲ್ಲೇ ನಿದ್ರಿಸುತ್ತಾರೆ ಸಂಜಯ್ ದತ್; ಅನಿವಾರ್ಯವಾಗಿ ಜೈಲಿನಲ್ಲಿ ಕಲಿತ ತಂತ್ರವಿದು  

‘ವಾರ್ 2’ ಶೂಟ್ ಭರದಿಂದ ಸಾಗುತ್ತಿದೆ. ಮುಂದಿನ ವರ್ಷದ ಮೇ ಅಂತ್ಯದಲ್ಲಿ ಶೂಟಿಂಗ್ ಪೂರ್ಣಗೊಳಿಸುವ ಆಲೋಚನೆ ಅವರಿಗೆ ಇದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 2025ರಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರವು ಹಲವು ಭಾಷೆಗೆ ಡಬ್ ಆಗಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು