AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್ ಚಿತ್ರದಲ್ಲಿ ಶಾರುಖ್ ಖಾನ್; ಸಿಕ್ತು ಬಿಗ್ ಅಪ್​ಡೇಟ್

ಯಶ್ ರಾಜ್ ಫಿಲ್ಮ್ಸ್​ ಸಂಸ್ಥೆ ‘ವಾರ್ 2’ ಚಿತ್ರಕ್ಕೆ ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಆ್ಯಕ್ಷನ್ ದೃಶ್ಯಗಳನ್ನು ಮುಂಬೈನಲ್ಲಿ ಶೂಟ್ ಮಾಡಲಾಗುತ್ತಿದೆ. 40ಕ್ಕೂ ಅಧಿಕ ಮಂದಿಯ ಜೊತೆ ಜೂನಿಯರ್ ಎನ್​ಟಿಆರ್ ಫೈಟ್ ಮಾಡುವ ದೃಶ್ಯ ಇರಲಿದೆ.  

ಜೂನಿಯರ್​ ಎನ್​ಟಿಆರ್ ಚಿತ್ರದಲ್ಲಿ ಶಾರುಖ್ ಖಾನ್; ಸಿಕ್ತು ಬಿಗ್ ಅಪ್​ಡೇಟ್
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: Oct 22, 2024 | 10:49 AM

Share

‘ವಾರ್’ ಸಿನಿಮಾ ಗೆಲುವಿನ ಬಳಿಕ ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ‘ವಾರ್ 2’ ಸಿನಿಮಾ ಶೂಟ್​ನಲ್ಲಿ ತೊಡಗಿಕೊಂಡಿದೆ. ಈ ಚಿತ್ರದಲ್ಲಿ ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್​ ಹಾಗೂ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಅಯಾನ್ ಮುಖರ್ಜಿ ನಿರ್ದೇಶನ ಮಾಡುತ್ತಿದ್ದು, ಆ್ಯಕ್ಷನ್​ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಈಗ ಸದ್ಯ ಮುಂಬೈನಲ್ಲಿ ಈ ಸಿನಿಮಾದ ಶೂಟ್ ನಡೆಯುತ್ತಿದೆ. ಈ ಚಿತ್ರದಲ್ಲಿ ಹೃತಿಕ್ ಅತಿಥಿ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ.

ಯಶ್ ರಾಜ್ ಫಿಲ್ಮ್ಸ್​ ಸಂಸ್ಥೆ ‘ವಾರ್ 2’ ಚಿತ್ರಕ್ಕೆ ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಆ್ಯಕ್ಷನ್ ದೃಶ್ಯಗಳನ್ನು ಮುಂಬೈನಲ್ಲಿ ಶೂಟ್ ಮಾಡಲಾಗುತ್ತಿದೆ. 40ಕ್ಕೂ ಅಧಿಕ ಮಂದಿಯ ಜೊತೆ ಜೂನಿಯರ್ ಎನ್​ಟಿಆರ್ ಫೈಟ್ ಮಾಡುವ ದೃಶ್ಯ ಇರಲಿದೆ.

‘ವಾರ್’ ಚಿತ್ರದಲ್ಲಿ ಈಗಾಗಲೇ ಹೃತಿಕ್ ಪಾತ್ರ ಹೈಲೈಟ್ ಆಗಿದೆ. ಹೀಗಾಗಿ, ‘ವಾರ್ 2’ ಚಿತ್ರದಲ್ಲಿ ಮತ್ತೆ ಆರಂಭದಿಂದ ಅವರ ಪಾತ್ರಕ್ಕೆ ಬಿಲ್ಡಪ್ ಕೊಡಬೇಕು ಎಂಬುದಿಲ್ಲ. ಆದರೆ, ಜೂನಿಯರ್ ಎನ್​ಟಿಆರ್ ಪಾತ್ರಕ್ಕೆ ಹಾಗಲ್ಲ. ಅವರ ಪಾತ್ರವನ್ನು ಹೆಚ್ಚು ಹೈಲೈಟ್ ಮಾಡುವುದು ಅನಿವಾರ್ಯ ಆಗಿದೆ. ಈ ಕಾರಣದಿಂದಲೇ ಅಯಾನ್ ಮುಖರ್ಜಿ ಅವರು ಹೆಚ್ಚು ರಾ ಆಗಿ ತಾರಕ್ ಪಾತ್ರವನ್ನು ತೋರಿಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಮೂರು ದಿನಗಳ ಕಾಲ ಶೂಟ್ ನಡೆಯಲಿದ್ದು, ಇದರಲ್ಲಿ ಸಂಪೂರ್ಣವಾಗಿ ಬಿಲ್ಡಪ್​ ದೃಶ್ಯಗಳ ಶೂಟ್ ಇರಲಿದೆ.

‘ಯಶ್ ರಾಜ್ ಫಿಲ್ಮ್ಸ್​’ ಸ್ಪೈ ಯೂನಿವರ್ಸ್ ಮಾಡಿದೆ. ಇದರ ಅಡಿಯಲ್ಲೇ ‘ವಾರ್’, ‘ಪಠಾಣ್’, ‘ಟೈಗರ್’ ಸಿನಿಮಾಗಳು ಬರುತ್ತವೆ. ಹೀಗಾಗಿ, ‘ವಾರ್ 2’ ಚಿತ್ರದಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರ ಮಾಡಬಹುದು ಎಂದು ಊಹಿಸಲಾಗಿದೆ.

ಇದನ್ನೂ ಓದಿ: ಕುಳಿತಲ್ಲೇ ನಿದ್ರಿಸುತ್ತಾರೆ ಸಂಜಯ್ ದತ್; ಅನಿವಾರ್ಯವಾಗಿ ಜೈಲಿನಲ್ಲಿ ಕಲಿತ ತಂತ್ರವಿದು  

‘ವಾರ್ 2’ ಶೂಟ್ ಭರದಿಂದ ಸಾಗುತ್ತಿದೆ. ಮುಂದಿನ ವರ್ಷದ ಮೇ ಅಂತ್ಯದಲ್ಲಿ ಶೂಟಿಂಗ್ ಪೂರ್ಣಗೊಳಿಸುವ ಆಲೋಚನೆ ಅವರಿಗೆ ಇದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 2025ರಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರವು ಹಲವು ಭಾಷೆಗೆ ಡಬ್ ಆಗಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?