AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಿತ್ರಕ್ಕೆ ಸಹಿ ಹಾಕಿದ ಶಾರುಖ್ ಖಾನ್? ಈ ಬಾರಿ ಮತ್ತೊಂದು ಪ್ರಯೋಗ

ಶಾರುಖ್ ಖಾನ್ ಅವರು ಬ್ಯಾಕ್ ಟು ಬ್ಯಾಕ್ ಮೂರು ಹಿಟ್ ಚಿತ್ರಗಳನ್ನು ನೀಡಿರುವುದರಿಂದ ಸಹಜವಾಗಿಯೇ ಅವರ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ‘ಡಂಕಿ’ ಬಳಿಕ ಅವರು ವಿಶಾಲ್ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಹೊಸ ಚಿತ್ರಕ್ಕೆ ಸಹಿ ಹಾಕಿದ ಶಾರುಖ್ ಖಾನ್? ಈ ಬಾರಿ ಮತ್ತೊಂದು ಪ್ರಯೋಗ
ಶಾರುಖ್-ವಿಶಾಲ್ ಭಾರದ್ವಾಜ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jan 09, 2024 | 3:09 PM

Share

ಶಾರುಖ್ ಖಾನ್ (Shah Rukh Khan) ಅವರು 2023ರಲ್ಲಿ ದಾಖಲೆ ಬರೆದಿದ್ದಾರೆ. ಅವರ ನಟನೆಯ ಮೂರು ಸಿನಿಮಾಗಳ ಕಳೆದ ವರ್ಷ ರಿಲೀಸ್ ಆಗಿದ್ದು, ಮೂರೂ ಸಿನಿಮಾಗಳು ಹಿಟ್ ಆಗಿವೆ. ಇದರಿಂದ ಒಂದೇ ವರ್ಷ ಶಾರುಖ್ ಖಾನ್ ಅವರು ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಮೂಡಿದೆ. ಕೆಲವು ವರದಿಗಳ ಪ್ರಕಾರ ಶಾರುಖ್ ಖಾನ್ ಮುಂದಿನ ಚಿತ್ರಕ್ಕಾಗಿ ನಿರ್ದೇಶಕ ವಿಶಾಲ್ ಭಾರದ್ವಾಜ್ ಜೊತೆ ಕೈ ಜೋಡಿಸುತ್ತಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಶಾರುಖ್ ಖಾನ್ ಅವರು ಬ್ಯಾಕ್ ಟು ಬ್ಯಾಕ್ ಮೂರು ಹಿಟ್ ಚಿತ್ರಗಳನ್ನು ನೀಡಿರುವುದರಿಂದ ಸಹಜವಾಗಿಯೇ ಅವರ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ‘ಡಂಕಿ’ ಬಳಿಕ ಅವರು ವಿಶಾಲ್ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಮ್ಮ ಸಿನಿಮಾ ಆಯ್ಕೆ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್ ನೀಡುವ ಆಲೋಚನೆಯಲ್ಲಿ ಶಾರುಖ್ ಖಾನ್ ಇದ್ದಾರೆ ಎಂದು ವರದಿ ಆಗಿದೆ.

ವಿಶಾಲ್ ಭಾರದ್ವಾಜ್ ಅವರು ಭಿನ್ನವಾದ ಸಿನಿಮಾಗಳನ್ನು ನೀಡಿದ್ದಾರೆ. ಈಗ ಶಾರುಖ್ ಖಾನ್ ಮಾಡಲಿರುವ ಸಿನಿಮಾ ಟಿಪಿಕಲ್ ವಿಶಾಲ್ ಭಾರದ್ವಾಜ್ ಚಿತ್ರದ ರೀತಿ ಇರಲಿದೆಯಂತೆ. ಶಾರುಖ್ ಈವರೆಗೂ ಮಾಡದೇ ಇರುವ ಪಾತ್ರ ಇದಾಗಿದೆ. ಶಾರುಖ್ ಖಾನ್ ಅವರು ಚಿತ್ರದ ಸ್ಕ್ರಿಪ್ಟ್ ಇಷ್ಟಪಟ್ಟಿದ್ದಾರೆ. ಸದ್ಯ ಮಾತುಕತೆ ಪ್ರಗತಿಯಲ್ಲಿವೆ.

ಶಾರುಖ್ ಖಾನ್ ಅವರು ‘ಪಠಾಣ್’ ಚಿತ್ರದಿಂದ 2023ನೇ ವರ್ಷವನ್ನು ಆರಂಭಿಸಿದರು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಸಿದ್ದಾರ್ಥ್ ಆನಂದ್. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಇದಾದ ಬಳಿಕ ‘ಜವಾನ್’ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರಕ್ಕೆ ತಮಿಳು ನಿರ್ದೇಶಕ ‘ಅಟ್ಲಿ’ ಆ್ಯಕ್ಷನ್ ಕಟ್ ಹೇಳಿದ್ದರು. ಇದು ಕೂಡ ಆ್ಯಕ್ಷನ್​ನಿಂದ ಕೂಡಿತ್ತು. ಈ ಚಿತ್ರ ಕೂಡ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿತ್ತು.

ಇದನ್ನೂ ಓದಿ: ವಿಶ್ವಾದ್ಯಂತ 444 ಕೋಟಿ ರೂಪಾಯಿ ಗಳಿಸಿದ ‘ಡಂಕಿ’; ಶಾರುಖ್​ಗೆ ಹ್ಯಾಟ್ರಿಕ್ ಗೆಲುವು

‘ಡಂಕಿ’ ಚಿತ್ರದಲ್ಲಿ ಶಾರುಖ್ ಖಾನ್ ಅವರು ಭಿನ್ನ ಪಾತ್ರ ಆಯ್ಕೆ ಮಾಡಿಕೊಂಡಿದ್ದರು. ಕ್ಲಾಸ್ ಶೈಲಿಯಲ್ಲಿ ‘ಡಂಕಿ’ ಮೂಡಿ ಬಂದಿತ್ತು. ಈ ಸಿನಿಮಾ ವಿಶ್ವಾದ್ಯಂತ 444 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಯೋಗಾತ್ಮಕ ಪಾತ್ರಗಳನ್ನು ಮಾಡಲು ಅವರು ಆಸಕ್ತಿ ತೋರಿಸುತ್ತಿದ್ದಾರೆ.

ವಿಶಾಲ್ ಭಾರದ್ವಾಜ್ ಬಗ್ಗೆ

ವಿಶಾಲ್ ಭಾರದ್ವಾಜ್ ಉತ್ತರ ಪ್ರದೇಶದವರು. ಅವರು ಸದ್ಯ, ಮುಂಬೈನಲ್ಲಿ ಸೆಟ್ಲ್ ಆಗಿದ್ದಾರೆ. ಅವರು ಚಿತ್ರರಂಗದಲ್ಲಿ ಸಂಗೀತ ಸಂಯೋಜಕರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. 1995ರಲ್ಲಿ ಸಂಗೀತ ನಿರ್ದೇಶಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. 2002ರಲ್ಲಿ ‘ಮಕ್ಡೀ’ ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದರು. ಆ ಬಳಿಕ ಹಲವು ಸಿನಿಮಾ ನಿರ್ದೇಶನ ಮಾಡಿದರು. ಇದಲ್ಲದೆ, ನಿರ್ಮಾಪಕರಾಗಿ ಹಾಗೂ ಚಿತ್ರಕಥೆ ಬರಹಗಾರನಾಗಿಯೂ ವಿಶಾಲ್ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಭಾರತಕ್ಕೆ ಬರಲಿದೆ ಬೋಟ್ಸ್‌ವಾನಾದ 8 ಚೀತಾ
ಭಾರತಕ್ಕೆ ಬರಲಿದೆ ಬೋಟ್ಸ್‌ವಾನಾದ 8 ಚೀತಾ