AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಕಲೆಕ್ಷನ್​ ಇಷ್ಟೇನಾ ಅಂತ ಕೇಳಿದವರಿಗೆ ಸಾವಿರಾರು ಕೋಟಿ ಲೆಕ್ಕ ನೀಡಿದ ಶಾರುಖ್​ ಖಾನ್​

Pathaan Movie Total Collection: ‘ಪಠಾಣ್​ ಚಿತ್ರದ ಕಲೆಕ್ಷನ್ ಇಷ್ಟೇನಾ’ ಎಂದು ರಾಜ್​ ಶ್ರೀವಾಸ್ತವ ಎಂಬ ವ್ಯಕ್ತಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಶಾರುಖ್​ ಖಾನ್​ ಅವರು ಊಹಿಸಲಾಗದಂತಹ ಉತ್ತರ ನೀಡಿದ್ದಾರೆ.

Shah Rukh Khan: ‘ಪಠಾಣ್​’ ಕಲೆಕ್ಷನ್​ ಇಷ್ಟೇನಾ ಅಂತ ಕೇಳಿದವರಿಗೆ ಸಾವಿರಾರು ಕೋಟಿ ಲೆಕ್ಕ ನೀಡಿದ ಶಾರುಖ್​ ಖಾನ್​
ಶಾರುಖ್ ಖಾನ್
ಮದನ್​ ಕುಮಾರ್​
|

Updated on: Feb 05, 2023 | 11:13 AM

Share

ಬಿಡುಗಡೆಯಾಗಿ 10 ದಿನ ಕಳೆದಿದ್ದರೂ ‘ಪಠಾಣ್​’ (Pathan Movie) ಸಿನಿಮಾದ ಅಬ್ಬರ ಕಡಿಮೆ ಆಗಿಲ್ಲ. ಪ್ರೇಕ್ಷಕರು ಈ ಚಿತ್ರಕ್ಕೆ ಫಿದಾ ಆಗಿದ್ದಾರೆ. ಎರಡನೇ ವೀಕೆಂಡ್​ನಲ್ಲೂ ಜನರು ಮುಗಿಬಿದ್ದು ‘ಪಠಾಣ್​’ ನೋಡುತ್ತಿದ್ದಾರೆ. ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಶೀಘ್ರದಲ್ಲೇ 400 ಕೋಟಿ ರೂಪಾಯಿ ಕಲೆಕ್ಷನ್​ (Pathan Movie Box Office Collection) ಮಾಡಲಿದೆ. ವಿಶ್ವಾದ್ಯಂತ 700 ಕೋಟಿ ರೂಪಾಯಿ ಹರಿದುಬಂದಿದೆ. ಇದರಿಂದಾಗಿ ನಟ ಶಾರುಖ್​ ಖಾನ್​ ಅವರ ವೃತ್ತಿಜೀವನಕ್ಕೆ ದೊಡ್ಡ ಬೂಸ್ಟ್​ ಸಿಕ್ಕಂತೆ ಆಗಿದೆ. ಈ ಚಿತ್ರದ ಗೆಲುವಿನ ಖುಷಿಯಲ್ಲಿರುವ ಶಾರುಖ್​ ಖಾನ್​ (Shah Rukh Khan) ಅವರು ಅಭಿಮಾನಿಗಳ ಜೊತೆ ಟ್ವಿಟರ್​​ನಲ್ಲಿ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಪಠಾಣ್​ ಸಿನಿಮಾದ ನಿಜವಾದ ಕಲೆಕ್ಷನ್​ ಬಗ್ಗೆ ವ್ಯಕ್ತಿಯೊಬ್ಬರು ಪ್ರಶ್ನೆ ಎತ್ತಿದ್ದಾರೆ. ಅದಕ್ಕೆ ಶಾರುಖ್ ಖಾನ್​ ನೀಡಿದ ಉತ್ತರ ಎಲ್ಲರ ಗಮನ ಸೆಳೆದಿದೆ.

‘ಪಠಾಣ್​ ಸಿನಿಮಾದ ಕಲೆಕ್ಷನ್ ಇಷ್ಟೇನಾ’ ಎಂದು ರಾಜ್​ ಶ್ರೀವಾಸ್ತವ ಎಂಬ ವ್ಯಕ್ತಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಶಾರುಖ್​ ಖಾನ್​ ಅವರು ಊಹಿಸಲಾಗದಂತಹ ಉತ್ತರ ನೀಡಿದ್ದಾರೆ. ‘5 ಸಾವಿರ ಕೋಟಿ ಪ್ರೀತಿ. 3 ಸಾವಿರ ಕೋಟಿ ಮೆಚ್ಚುಗೆ. 3250 ಕೋಟಿ ಅಪ್ಪುಗೆ. 2 ಬಿಲಿಯನ್​ ನಗು.. ಇನ್ನೂ ಎಣಿಸಲಾಗುತ್ತಿದೆ. ನಿನ್ನ ಅಕೌಂಟೆಂಟ್​ ಏನು ಹೇಳುತ್ತಿದ್ದಾರೆ?’ ಎಂದು ಶಾರುಖ್​ ಖಾನ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: Shah Rukh Khan: ‘ಪಠಾಣ್​’ ನೋಡಲು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಶಾರುಖ್​ ಖಾನ್​ ಅಭಿಮಾನಿಗಳು

‘ಪಠಾಣ್​’ ಸಿನಿಮಾದಲ್ಲಿ ಶಾರುಖ್​ ಖಾನ್​ಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಅವರಿಬ್ಬರು ಒಟ್ಟಾಗಿ ನಟಿಸಿದ 4ನೇ ಸಿನಿಮಾ ಇದು. ಈ ಹಿಂದೆ ‘ಓಂ ಶಾಂತಿ ಓಂ’, ‘ಹ್ಯಾಪಿ ನ್ಯೂ ಇಯರ್​’, ‘ಚೆನ್ನೈ ಎಕ್ಸ್​ಪ್ರೆಸ್​’ ಸಿನಿಮಾಗಳು ಹಿಟ್​ ಆಗಿದ್ದವು. ಈಗ ಈ ಜೋಡಿಯ ‘ಪಠಾಣ್​’ ಸಿನಿಮಾ ಕೂಡ ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದು, ಅವರ ಡಿಮ್ಯಾಂಡ್​ ಕೂಡ ಹೆಚ್ಚಾಗಿದೆ.

ಶಾರುಖ್​ ಖಾನ್ ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಜೋರಾಗಿದೆ. ಕಾಲಿವುಡ್​ನ ಖ್ಯಾತ ನಿರ್ದೇಶಕ ಅಟ್ಲಿ ಜೊತೆ ಶಾರುಖ್​​ ಕೈ ಜೋಡಿಸಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಜವಾನ್​’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​​ ಗಮನ ಸೆಳೆದಿದೆ. ಈ ಚಿತ್ರ ಜೂನ್​ 2ರಂದು ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ನಟನೆಯ ‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್​ ಹಿರಾನಿ ನಿರ್ದೇಶನ ಮಾಡುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್​ ಬಗ್ಗೆ ಸಿನಿಪ್ರಿಯರಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್