AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಚಿತ್ರಕ್ಕೆ ಭರ್ಜರಿ ಗೆಲುವು; ಶಾರುಖ್​ ಖಾನ್​ ಕೈಯಲ್ಲಿವೆ ಬಹುನಿರೀಕ್ಷಿತ ಇನ್ನೆರಡು ಸಿನಿಮಾಗಳು

‘ಜವಾನ್​’ ಮತ್ತು ‘ಡಂಕಿ’ ಸಿನಿಮಾಗಳ ಮೇಲೆ ನಿರೀಕ್ಷೆ ಜೋರಾಗಿದೆ. ಈ ಸಿನಿಮಾಗಳಿಗೆ ಘಟಾನುಘಟಿ ನಿರ್ದೇಶಕರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

Shah Rukh Khan: ‘ಪಠಾಣ್​’ ಚಿತ್ರಕ್ಕೆ ಭರ್ಜರಿ ಗೆಲುವು; ಶಾರುಖ್​ ಖಾನ್​ ಕೈಯಲ್ಲಿವೆ ಬಹುನಿರೀಕ್ಷಿತ ಇನ್ನೆರಡು ಸಿನಿಮಾಗಳು
ಶಾರುಖ್ ಖಾನ್ ಸಿನಿಮಾಗಳು
ಮದನ್​ ಕುಮಾರ್​
|

Updated on: Jan 27, 2023 | 8:30 AM

Share

ಹಿಂದಿ ಚಿತ್ರರಂಗದಲ್ಲಿ ಶಾರುಖ್​ ಖಾನ್​ (Shah Rukh Khan) ಅವರಿಗೆ ಇರುವ ಅನುಭವ ಅಪಾರ. ಕಿರುತೆರೆಯಿಂದ ಬಂದು ಸಿನಿಮಾದಲ್ಲಿ ಹೀರೋ ಆದ ಅವರು 30 ವರ್ಷಗಳ ಕಾಲ ಬಣ್ಣದ ಲೋಕದಲ್ಲಿ ಆಳ್ವಿಕೆ ನಡೆಸಿದ್ದಾರೆ. ಒಂದಷ್ಟು ವರ್ಷಗಳು ಅವರ ಟೈಮ್​ ಚೆನ್ನಾಗಿರಲಿಲ್ಲ. ಮಾಡಿದ ಚಿತ್ರಗಳೆಲ್ಲವೂ ಸೋಲುತ್ತಿದ್ದವು. ಆದರೆ ಆ ಸೋಲಿನ ಸುಳಿಯಿಂದ ಶಾರುಖ್​ ಖಾನ್​ ಈಗ ಹೊರಬಂದಿದ್ದಾರೆ. ಅವರ ಹೊಸ ಸಿನಿಮಾ ‘ಪಠಾಣ್​’ (Pathaan Movie) ಸೂಪರ್​ ಹಿಟ್​ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಮೋಡಿ ಮಾಡಿದೆ. ಮೊದಲ ದಿನ 55 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಚಿತ್ರದ ಬಳಿಕ ಶಾರುಖ್​ ಖಾನ್​ ಕೈಯಲ್ಲಿ ಇರುವ ಹೊಸ ಸಿನಿಮಾಗಳ (Shah Rukh Khan Upcoming Movies) ಬಗ್ಗೆ ಅಭಿಮಾನಿಗಳ ಕೌತುಕ ಹೆಚ್ಚಾಗಿದೆ.

ಶಾರುಖ್​ ಖಾನ್​ ಅವರ ಮುಂದಿನ ಸಿನಿಮಾಗಳು:

2018ರಲ್ಲಿ ‘ಜೀರೋ’ ಸಿನಿಮಾ ಸೋತ ಬಳಿಕ ಶಾರುಖ್​ ಖಾನ್​ ಅವರು ಹೊಸ ಪ್ರಾಜೆಕ್ಟ್​ ಒಪ್ಪಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಪ್ರತಿ ಸಿನಿಮಾ ಒಪ್ಪಿಕೊಳ್ಳುವುದಕ್ಕೂ ಮುನ್ನ ಅವರು ತುಂಬ ಆಲೋಚನೆ ಮಾಡಿದ್ದಾರೆ. ‘ಪಠಾಣ್​’ ಚಿತ್ರದ ವಿಚಾರದಲ್ಲಿ ಅವರ ಆಯ್ಕೆ ಸರಿಯಾಗಿದೆ. ಅದರ ಜೊತೆಗೆ ಅವರು ಒಪ್ಪಿಕೊಂಡ ಇನ್ನೆರಡು ಚಿತ್ರಗಳೆಂದರೆ ‘ಜವಾನ್​’ ಮತ್ತು ‘ಡಂಕಿ’. ಈ ಸಿನಿಮಾಗಳಿಗೆ ಘಟಾನುಘಟಿ ನಿರ್ದೇಶಕರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಇದನ್ನೂ ಓದಿ: Pathaan Beats KGF 2: ಮೊದಲ ದಿನ ‘ಕೆಜಿಎಫ್​ 2’ ದಾಖಲೆ ಮುರಿದ ‘ಪಠಾಣ್​’; ಶಾರುಖ್​ ಮತ್ತೆ ಬಾಕ್ಸ್​ ಆಫೀಸ್​ ಸುಲ್ತಾನ

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಅಟ್ಲಿ ನಿರ್ದೇಶನದ ‘ಜವಾನ್’​ ಸಿನಿಮಾ:

ಕಾಲಿವುಡ್​ನ ಖ್ಯಾತ ನಿರ್ದೇಶಕ ಅಟ್ಲಿ ಜೊತೆ ಶಾರುಖ್​ ಖಾನ್​ ಕೈ ಜೋಡಿಸಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಜವಾನ್​’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ‘ಜವಾನ್​’ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​​ ಗಮನ ಸೆಳೆದಿದೆ. ಈ ಚಿತ್ರ ಜೂನ್​ 2ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ

‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್​ ಹಿರಾನಿ ನಿರ್ದೇಶನ:

ವಿಶೇಷ ಕಥಾಹಂದರದ ಸಿನಿಮಾಗಳ ಮೂಲಕ ರಾಜ್​ಕುಮಾರ್​ ಹಿರಾನಿ ಅವರು ಗುರುತಿಸಿಕೊಂಡಿದ್ದಾರೆ. ‘ಪಿಕೆ’, ‘ಸಂಜು’, ‘ಮುನ್ನಾಭಾಯ್​ ಎಂಬಿಬಿಎಸ್​’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಖ್ಯಾತಿ ಅವರಿಗೆ ಸಲ್ಲುತ್ತದೆ. ಶಾರುಖ್​ ಖಾನ್​ ನಟನೆಯ ‘ಡಂಕಿ’ ಚಿತ್ರಕ್ಕೂ ರಾಜ್​ಕುಮಾರ್​ ಹಿರಾನಿ ನಿರ್ದೇಶನ ಮಾಡುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್​ ಬಗ್ಗೆ ಸಿನಿಪ್ರಿಯರಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಶಾರುಖ್​ ಖಾನ್​ ಪಾಲಿಗೆ 2023ರ ವರ್ಷ ಆಶಾದಾಯಶವಾಗಿ ಇರಲಿದೆ. ವರ್ಷದ ಆರಂಭದಲ್ಲಿಯೇ ಅವರು ‘ಪಠಾಣ್​’ ಚಿತ್ರದ ಮೂಲಕ ದೊಡ್ಡ ಗೆಲುವು ಪಡೆದಿದ್ದಾರೆ. ಅವರ ಬ್ಯಾಕ್ ಟು ಬ್ಯಾಕ್​ ಸಿನಿಮಾಗಳು ಈ ವರ್ಷ ಬಿಡುಗಡೆ ಆಗಲಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್