AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಚಿತ್ರಕ್ಕೆ ಭರ್ಜರಿ ಗೆಲುವು; ಶಾರುಖ್​ ಖಾನ್​ ಕೈಯಲ್ಲಿವೆ ಬಹುನಿರೀಕ್ಷಿತ ಇನ್ನೆರಡು ಸಿನಿಮಾಗಳು

‘ಜವಾನ್​’ ಮತ್ತು ‘ಡಂಕಿ’ ಸಿನಿಮಾಗಳ ಮೇಲೆ ನಿರೀಕ್ಷೆ ಜೋರಾಗಿದೆ. ಈ ಸಿನಿಮಾಗಳಿಗೆ ಘಟಾನುಘಟಿ ನಿರ್ದೇಶಕರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

Shah Rukh Khan: ‘ಪಠಾಣ್​’ ಚಿತ್ರಕ್ಕೆ ಭರ್ಜರಿ ಗೆಲುವು; ಶಾರುಖ್​ ಖಾನ್​ ಕೈಯಲ್ಲಿವೆ ಬಹುನಿರೀಕ್ಷಿತ ಇನ್ನೆರಡು ಸಿನಿಮಾಗಳು
ಶಾರುಖ್ ಖಾನ್ ಸಿನಿಮಾಗಳು
Follow us
ಮದನ್​ ಕುಮಾರ್​
|

Updated on: Jan 27, 2023 | 8:30 AM

ಹಿಂದಿ ಚಿತ್ರರಂಗದಲ್ಲಿ ಶಾರುಖ್​ ಖಾನ್​ (Shah Rukh Khan) ಅವರಿಗೆ ಇರುವ ಅನುಭವ ಅಪಾರ. ಕಿರುತೆರೆಯಿಂದ ಬಂದು ಸಿನಿಮಾದಲ್ಲಿ ಹೀರೋ ಆದ ಅವರು 30 ವರ್ಷಗಳ ಕಾಲ ಬಣ್ಣದ ಲೋಕದಲ್ಲಿ ಆಳ್ವಿಕೆ ನಡೆಸಿದ್ದಾರೆ. ಒಂದಷ್ಟು ವರ್ಷಗಳು ಅವರ ಟೈಮ್​ ಚೆನ್ನಾಗಿರಲಿಲ್ಲ. ಮಾಡಿದ ಚಿತ್ರಗಳೆಲ್ಲವೂ ಸೋಲುತ್ತಿದ್ದವು. ಆದರೆ ಆ ಸೋಲಿನ ಸುಳಿಯಿಂದ ಶಾರುಖ್​ ಖಾನ್​ ಈಗ ಹೊರಬಂದಿದ್ದಾರೆ. ಅವರ ಹೊಸ ಸಿನಿಮಾ ‘ಪಠಾಣ್​’ (Pathaan Movie) ಸೂಪರ್​ ಹಿಟ್​ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಮೋಡಿ ಮಾಡಿದೆ. ಮೊದಲ ದಿನ 55 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಚಿತ್ರದ ಬಳಿಕ ಶಾರುಖ್​ ಖಾನ್​ ಕೈಯಲ್ಲಿ ಇರುವ ಹೊಸ ಸಿನಿಮಾಗಳ (Shah Rukh Khan Upcoming Movies) ಬಗ್ಗೆ ಅಭಿಮಾನಿಗಳ ಕೌತುಕ ಹೆಚ್ಚಾಗಿದೆ.

ಶಾರುಖ್​ ಖಾನ್​ ಅವರ ಮುಂದಿನ ಸಿನಿಮಾಗಳು:

2018ರಲ್ಲಿ ‘ಜೀರೋ’ ಸಿನಿಮಾ ಸೋತ ಬಳಿಕ ಶಾರುಖ್​ ಖಾನ್​ ಅವರು ಹೊಸ ಪ್ರಾಜೆಕ್ಟ್​ ಒಪ್ಪಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಪ್ರತಿ ಸಿನಿಮಾ ಒಪ್ಪಿಕೊಳ್ಳುವುದಕ್ಕೂ ಮುನ್ನ ಅವರು ತುಂಬ ಆಲೋಚನೆ ಮಾಡಿದ್ದಾರೆ. ‘ಪಠಾಣ್​’ ಚಿತ್ರದ ವಿಚಾರದಲ್ಲಿ ಅವರ ಆಯ್ಕೆ ಸರಿಯಾಗಿದೆ. ಅದರ ಜೊತೆಗೆ ಅವರು ಒಪ್ಪಿಕೊಂಡ ಇನ್ನೆರಡು ಚಿತ್ರಗಳೆಂದರೆ ‘ಜವಾನ್​’ ಮತ್ತು ‘ಡಂಕಿ’. ಈ ಸಿನಿಮಾಗಳಿಗೆ ಘಟಾನುಘಟಿ ನಿರ್ದೇಶಕರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಇದನ್ನೂ ಓದಿ: Pathaan Beats KGF 2: ಮೊದಲ ದಿನ ‘ಕೆಜಿಎಫ್​ 2’ ದಾಖಲೆ ಮುರಿದ ‘ಪಠಾಣ್​’; ಶಾರುಖ್​ ಮತ್ತೆ ಬಾಕ್ಸ್​ ಆಫೀಸ್​ ಸುಲ್ತಾನ

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಅಟ್ಲಿ ನಿರ್ದೇಶನದ ‘ಜವಾನ್’​ ಸಿನಿಮಾ:

ಕಾಲಿವುಡ್​ನ ಖ್ಯಾತ ನಿರ್ದೇಶಕ ಅಟ್ಲಿ ಜೊತೆ ಶಾರುಖ್​ ಖಾನ್​ ಕೈ ಜೋಡಿಸಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಜವಾನ್​’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ‘ಜವಾನ್​’ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​​ ಗಮನ ಸೆಳೆದಿದೆ. ಈ ಚಿತ್ರ ಜೂನ್​ 2ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ

‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್​ ಹಿರಾನಿ ನಿರ್ದೇಶನ:

ವಿಶೇಷ ಕಥಾಹಂದರದ ಸಿನಿಮಾಗಳ ಮೂಲಕ ರಾಜ್​ಕುಮಾರ್​ ಹಿರಾನಿ ಅವರು ಗುರುತಿಸಿಕೊಂಡಿದ್ದಾರೆ. ‘ಪಿಕೆ’, ‘ಸಂಜು’, ‘ಮುನ್ನಾಭಾಯ್​ ಎಂಬಿಬಿಎಸ್​’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಖ್ಯಾತಿ ಅವರಿಗೆ ಸಲ್ಲುತ್ತದೆ. ಶಾರುಖ್​ ಖಾನ್​ ನಟನೆಯ ‘ಡಂಕಿ’ ಚಿತ್ರಕ್ಕೂ ರಾಜ್​ಕುಮಾರ್​ ಹಿರಾನಿ ನಿರ್ದೇಶನ ಮಾಡುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್​ ಬಗ್ಗೆ ಸಿನಿಪ್ರಿಯರಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಶಾರುಖ್​ ಖಾನ್​ ಪಾಲಿಗೆ 2023ರ ವರ್ಷ ಆಶಾದಾಯಶವಾಗಿ ಇರಲಿದೆ. ವರ್ಷದ ಆರಂಭದಲ್ಲಿಯೇ ಅವರು ‘ಪಠಾಣ್​’ ಚಿತ್ರದ ಮೂಲಕ ದೊಡ್ಡ ಗೆಲುವು ಪಡೆದಿದ್ದಾರೆ. ಅವರ ಬ್ಯಾಕ್ ಟು ಬ್ಯಾಕ್​ ಸಿನಿಮಾಗಳು ಈ ವರ್ಷ ಬಿಡುಗಡೆ ಆಗಲಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ