Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಶಾರುಖ್​ ಖಾನ್​

ಸಿನಿಮಾ ಬಿಡುಗಡೆಗೂ ಮುನ್ನ ಸೆಲೆಬ್ರಿಟಿಗಳು ದೇವರ ಮೊರೆ ಹೋಗುವುದು ಕಾಮನ್​. ಶಾರುಖ್ ಖಾನ್​ ಕೂಡ ಇದಕ್ಕೆ ಹೊರತಲ್ಲ. ‘ಡಂಕಿ’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಿಡುಗಡೆಗೆ ಇನ್ನು ಕೆಲವೇ ದಿನಗಳ ಬಾಕಿ ಇದ್ದು, ಅನೇಕ ದೇವಸ್ಥಾನಗಳಿಗೆ ಶಾರುಖ್​ ಖಾನ್​ ತೆರಳುತ್ತಿದ್ದಾರೆ.

ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಶಾರುಖ್​ ಖಾನ್​
ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on: Dec 15, 2023 | 6:35 PM

ನಟ ಶಾರುಖ್​ ಖಾನ್​ (Shah Rukh Khan) ಅವರು ಎಲ್ಲ ಧರ್ಮದ ಮೇಲೆ ನಂಬಿಕೆ ಹೊಂದಿದ್ದಾರೆ. ಇತ್ತೀಚೆಗಷ್ಟೇ ಅವರು ವೈಷ್ಣೋ ದೇವಿ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದಿದ್ದರು. ಈಗ ಶಿರಡಿ ಸಾಯಿ ಬಾಬಾ (Shirdi Sai Baba) ಮಂದಿರಕ್ಕೆ ಭೇಟಿ ನೀಡಿದ್ದಾರೆ. ಅವರ ಜೊತೆ ಪುತ್ರಿ ಸುಹಾನಾ ಖಾನ್​ ಕೂಡ ಬಂದಿದ್ದಾರೆ. ‘ಡಂಕಿ’ ಸಿನಿಮಾ (Dunki Movie) ಬಿಡುಗಡೆಗೂ ಮುನ್ನ ಶಾರುಖ್​ ಖಾನ್​ ಅವರು ಶಿರಡಿ ಸಾಯಿ ಬಾಬಾನ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗಿವೆ. ‘ಡಂಕಿ’ ಸಿನಿಮಾ ಡಿಸೆಂಬರ್​ 21ರಂದು ಬಿಡುಗಡೆ ಆಗಲಿದೆ.

ಸಿನಿಮಾ ಬಿಡುಗಡೆಗೂ ಮುನ್ನ ಸೆಲೆಬ್ರಿಟಿಗಳು ದೇವರ ಮೊರೆ ಹೋಗುವುದು ಕಾಮನ್​. ಶಾರುಖ್ ಖಾನ್​ ಕೂಡ ಇದಕ್ಕೆ ಹೊರತಲ್ಲ. ‘ಡಂಕಿ’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೂಪರ್​ ಹಿಟ್​ ಆದರೆ ಶಾರುಖ್​ ಖಾನ್​ ಅವರಿಗೆ 2023ರಲ್ಲಿ ಹ್ಯಾಟ್ರಿಕ್​ ಗೆಲುವು ಸಿಕ್ಕಂತೆ ಆಗಲಿದೆ. ಈ ವರ್ಷ ತೆರೆಕಂಡ ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾಗಳು ಬ್ಲಾಕ್​ ಬಸ್ಟರ್​ ಹಿಟ್​ ಆಗಿವೆ.

SRK visits Shirdi Sai Baba temple with Suhana byu/Legitimate-Display27 inBollyBlindsNGossip

ಶಾರುಖ್​ ಖಾನ್​ ರೀತಿಯೇ ಅವರ ಮಗಳು ಸುಹಾನಾ ಖಾನ್​ ಕೂಡ ಹಿಂದೂ ಮತ್ತು ಮುಸ್ಲಿಂ ಧರ್ಮವನ್ನು ಪಾಲಿಸುತ್ತಾರೆ. ಇತ್ತೀಚೆಗೆ ಅವರು ನಟಿಸಿದ ಮೊದಲ ಸಿನಿಮಾ ‘ದಿ ಆರ್ಚೀಸ್​’ ಬಿಡುಗಡೆ ಆಯಿತು. ಆ ಸಿನಿಮಾ ನೇರವಾಗಿ ‘ನೆಟ್​ಫ್ಲಿಕ್ಸ್​’ ಒಟಿಟಿ ಮೂಲಕ ರಿಲೀಸ್​ ಆಯಿತು. ಸುಹಾನಾ ಖಾನ್​ ಅವರು ಚಿತ್ರರಂಗದಲ್ಲಿ ಉತ್ತಮ ನಟಿಯಾಗಿ ಗುರುತಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಅವರಿಗೆ ಈಗಾಗಲೇ ಅನೇಕ ಅವಕಾಶಗಳು ಬರುತ್ತಿವೆ.

ಇದನ್ನೂ ಓದಿ: ‘ಡಂಕಿ’ ಚಿತ್ರದ ರಿಲೀಸ್​ ಟೆನ್ಷನ್​ ಮರೆತು ಮಾಲ್ಡೀವ್ಸ್​ಗೆ ತೆರಳಿದ ತಾಪ್ಸಿ ಪನ್ನು

ಹಲವು ಕಾರಣಗಳಿಂದ ‘ಡಂಕಿ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ತಾಪ್ಸಿ ಪನ್ನು ಅವರು ಶಾರುಖ್​ ಖಾನ್​ಗೆ ಜೋಡಿಯಾಗಿ ನಟಿಸಿದ್ದಾರೆ. ವಿಕ್ಕಿ ಕೌಶಲ್​, ಬೋಮನ್​ ಇರಾನಿ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ‘ಡಂಕಿ’ ತೆರೆಕಂಡ ಮರುದಿನ, ಅಂದರೆ ಡಿಸೆಂಬರ್​ 22ರಂದು ‘ಸಲಾರ್​’ ರಿಲೀಸ್​ ಆಗಲಿರುವುದರಿಂದ ಗಲ್ಲಾಪೆಟ್ಟಿಗೆಯಲ್ಲಿ ಸ್ಪರ್ಧೆ ಏರ್ಪಡಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ