AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ

Aryan Khan: ಜಾಮೀನು ಸಿಗದೇ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್​ ಖಾನ್​ರನ್ನು ನೋಡಲು ಶಾರುಖ್ ಖಾನ್ ಜೈಲಿಗೆ ಆಗಮಿಸಿದ್ದಾರೆ. ಆರ್ಯನ್ ಬಂಧನದ ಬಳಿಕ ಮೊದಲ ಬಾರಿಗೆ ಶಾರುಖ್ ಮಗನನ್ನು ಭೇಟಿಯಾಗಿದ್ದಾರೆ.

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ
ಆರ್ಯನ್ ಖಾನ್, ಶಾರುಖ್ ಖಾನ್
TV9 Web
| Edited By: |

Updated on:Oct 21, 2021 | 10:21 AM

Share

ಮುಂಬೈ: ಪುತ್ರ ಆರ್ಯನ್ ಖಾನ್ ಬಂಧನದ ನಂತರ ತಮ್ಮ ನಿವಾಸ ‘ಮನ್ನತ್’ನಿಂದ ಹೊರಬಂದಿರದ ಶಾರುಖ್ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮುಂಬೈನ ಆರ್ಥರ್ ರೋಡ್ ಜೈಲಿಗೆ ತೆರಳಿ ಅವರು ಆರ್ಯನ್​ ಖಾನ್​ರನ್ನು ಭೇಟಿಯಾಗಿದ್ದಾರೆ. ಕ್ರೂಸ್ ಶಿಪ್​ನಲ್ಲಿ ನಡೆದಿದ್ದ ಡ್ರಗ್ ಪಾರ್ಟಿಯಲ್ಲಿ ಭಾಗಿಯಾದ ಆರೋಪದ ಮೇಲೆ ಆರ್ಯನ್​ ಖಾನ್​ ಬಂಧನಕ್ಕೊಳಗಾಗಿದ್ಇಂದರು. ಪ್ರಸ್ತುತ ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್​ರನ್ನು ನೋಡಲು, ಶಾರುಖ್ ತೆರಳಿದ್ಧಾರೆ. ಆರ್ಯನ್ ಬಂಧನದ ಬಳಿಕ ಮೊದಲ ಬಾರಿಗೆ ಶಾರುಖ್ ಹಾಗೂ ಆರ್ಯನ್​ ಪರಸ್ಪರ ಭೇಟಿಯಾಗಿದ್ದಾರೆ.

ನಟ ಶಾರುಖ್ ಖಾನ್ ಪುತ್ರ ಆರ್ಯನ್ ಬಂಧನದ ನಂತರ ಇದುವರೆಗೆ ತಮ್ಮ ಮನೆಯಿಂದ ಹೊರಬಂದಿರಲಿಲ್ಲ. ನಿನ್ನೆ (ಅಕ್ಟೋಬರ್ 20) ನಡೆದ ಜಾಮೀನು ಅರ್ಜಿಯ ತೀರ್ಪಿನಲ್ಲಿ, ಆರ್ಯನ್​ಗೆ ಬೇಲ್ ಸಿಗುವ ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಬಂಧನದ ಬಳಿಕ ಮೊದಲ ಬಾರಿಗೆ ಪುತ್ರನನ್ನು ನೋಡಲು ಶಾರುಖ್ ಜೈಲಿಗೆ ಆಗಮಿಸಿ, ಒಂದು ಸಣ್ಣ ಭೇಟಿಯ ನಂತರ ನಿರ್ಗಮಿಸಿದ್ದಾರೆ. ಈ ವೇಳೆ ಅವರು ಮಾಧ್ಯಮಗಳಿಂದ ಅಂತರ ಕಾಪಾಡಿಕೊಂಡಿದ್ದಾರೆ.

ಶಾರುಖ್ ಜೈಲಿನಿಂದ ಮರಳುತ್ತಿರುವುದರ ಕುರಿತು ಎಎನ್​ಐ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಆರ್ಯನ್ ಜಾಮೀನಿಗಾಗಿ ಹೈಕೋರ್ಟ್​ನಲ್ಲಿ ಅರ್ಜಿ: ಆರ್ಯನ್ ಖಾನ್ ಪರ ವಕೀಲರು ಎನ್​ಡಿಪಿಎಸ್ ನ್ಯಾಯಾಲಯದಲ್ಲಿ ಜಾಮೀನು ಸಿಗದ ಕಾರಣ, ಹೈಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ. ಈ ಕುರಿತ ವಿಚಾರಣೆಗಳು ಇನ್ನಷ್ಟೇ ನಡೆಯಬೇಕಿದೆ. ಆರ್ಯನ್ ಪರ ಖ್ಯಾತ ವಕೀಲರಾದ ಸತೀಶ್ ಮಾನೆಶಿಂಧೆ ಹಾಗೂ ಅಮಿತ್ ದೇಸಾಯಿ ವಾದ ಮಂಡಿಸಿದ್ದರು. ಎನ್​ಸಿಬಿ ಪರ ವಕೀಲರು ಆರ್ಯನ್ ಹೈಪ್ರೊಫೈಲ್ ಕುಟುಂಬದ ವ್ಯಕ್ತಿಯಾಗಿರುವ ಕಾರಣ, ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಆತಂಕ ವ್ಯಕ್ತಪಡಿಸಿದ್ದರು. ಜೊತೆಗೆ ಆರ್ಯನ್ ವಾಟ್ಸಾಪ್ ಚಾಟ್​ಗಳನ್ನು ಹಾಜರುಪಡಿಸಿ, ಪ್ರಕರಣದಲ್ಲಿ ಆರ್ಯನ್ ಸಂಬಂಧವನ್ನು ವಿವರಿಸಿದ್ದರು. ನ್ಯಾಯಾಲಯ ಇದನ್ನು ಪರಿಗಣಿಸಿ ಜಾಮೀನು ನೀಡಿರಲಿಲ್ಲ.

ಇದನ್ನೂ ಓದಿ:

ಆರ್ಯನ್​ಗೆ ಜಾಮೀನು ನೀಡೋಕೆ ಸಾಧ್ಯವೇ ಇಲ್ಲ ಎಂದ ಎನ್​ಡಿಪಿಎಸ್​ ಕೋರ್ಟ್​

Donald Trump: ಟ್ವಿಟರ್​, ಫೇಸ್​ಬುಕ್​ಗೆ ಸಡ್ಡು ಹೊಡೆಯಲು ಮುಂದಾದ ಟ್ರಂಪ್; ಸ್ವಂತ ಸಾಮಾಜಿಕ ಜಾಲತಾಣ ಘೋಷಣೆ

Published On - 10:16 am, Thu, 21 October 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ