AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ

Aryan Khan: ಜಾಮೀನು ಸಿಗದೇ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್​ ಖಾನ್​ರನ್ನು ನೋಡಲು ಶಾರುಖ್ ಖಾನ್ ಜೈಲಿಗೆ ಆಗಮಿಸಿದ್ದಾರೆ. ಆರ್ಯನ್ ಬಂಧನದ ಬಳಿಕ ಮೊದಲ ಬಾರಿಗೆ ಶಾರುಖ್ ಮಗನನ್ನು ಭೇಟಿಯಾಗಿದ್ದಾರೆ.

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ
ಆರ್ಯನ್ ಖಾನ್, ಶಾರುಖ್ ಖಾನ್
Follow us
TV9 Web
| Updated By: shivaprasad.hs

Updated on:Oct 21, 2021 | 10:21 AM

ಮುಂಬೈ: ಪುತ್ರ ಆರ್ಯನ್ ಖಾನ್ ಬಂಧನದ ನಂತರ ತಮ್ಮ ನಿವಾಸ ‘ಮನ್ನತ್’ನಿಂದ ಹೊರಬಂದಿರದ ಶಾರುಖ್ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮುಂಬೈನ ಆರ್ಥರ್ ರೋಡ್ ಜೈಲಿಗೆ ತೆರಳಿ ಅವರು ಆರ್ಯನ್​ ಖಾನ್​ರನ್ನು ಭೇಟಿಯಾಗಿದ್ದಾರೆ. ಕ್ರೂಸ್ ಶಿಪ್​ನಲ್ಲಿ ನಡೆದಿದ್ದ ಡ್ರಗ್ ಪಾರ್ಟಿಯಲ್ಲಿ ಭಾಗಿಯಾದ ಆರೋಪದ ಮೇಲೆ ಆರ್ಯನ್​ ಖಾನ್​ ಬಂಧನಕ್ಕೊಳಗಾಗಿದ್ಇಂದರು. ಪ್ರಸ್ತುತ ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್​ರನ್ನು ನೋಡಲು, ಶಾರುಖ್ ತೆರಳಿದ್ಧಾರೆ. ಆರ್ಯನ್ ಬಂಧನದ ಬಳಿಕ ಮೊದಲ ಬಾರಿಗೆ ಶಾರುಖ್ ಹಾಗೂ ಆರ್ಯನ್​ ಪರಸ್ಪರ ಭೇಟಿಯಾಗಿದ್ದಾರೆ.

ನಟ ಶಾರುಖ್ ಖಾನ್ ಪುತ್ರ ಆರ್ಯನ್ ಬಂಧನದ ನಂತರ ಇದುವರೆಗೆ ತಮ್ಮ ಮನೆಯಿಂದ ಹೊರಬಂದಿರಲಿಲ್ಲ. ನಿನ್ನೆ (ಅಕ್ಟೋಬರ್ 20) ನಡೆದ ಜಾಮೀನು ಅರ್ಜಿಯ ತೀರ್ಪಿನಲ್ಲಿ, ಆರ್ಯನ್​ಗೆ ಬೇಲ್ ಸಿಗುವ ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಬಂಧನದ ಬಳಿಕ ಮೊದಲ ಬಾರಿಗೆ ಪುತ್ರನನ್ನು ನೋಡಲು ಶಾರುಖ್ ಜೈಲಿಗೆ ಆಗಮಿಸಿ, ಒಂದು ಸಣ್ಣ ಭೇಟಿಯ ನಂತರ ನಿರ್ಗಮಿಸಿದ್ದಾರೆ. ಈ ವೇಳೆ ಅವರು ಮಾಧ್ಯಮಗಳಿಂದ ಅಂತರ ಕಾಪಾಡಿಕೊಂಡಿದ್ದಾರೆ.

ಶಾರುಖ್ ಜೈಲಿನಿಂದ ಮರಳುತ್ತಿರುವುದರ ಕುರಿತು ಎಎನ್​ಐ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಆರ್ಯನ್ ಜಾಮೀನಿಗಾಗಿ ಹೈಕೋರ್ಟ್​ನಲ್ಲಿ ಅರ್ಜಿ: ಆರ್ಯನ್ ಖಾನ್ ಪರ ವಕೀಲರು ಎನ್​ಡಿಪಿಎಸ್ ನ್ಯಾಯಾಲಯದಲ್ಲಿ ಜಾಮೀನು ಸಿಗದ ಕಾರಣ, ಹೈಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ. ಈ ಕುರಿತ ವಿಚಾರಣೆಗಳು ಇನ್ನಷ್ಟೇ ನಡೆಯಬೇಕಿದೆ. ಆರ್ಯನ್ ಪರ ಖ್ಯಾತ ವಕೀಲರಾದ ಸತೀಶ್ ಮಾನೆಶಿಂಧೆ ಹಾಗೂ ಅಮಿತ್ ದೇಸಾಯಿ ವಾದ ಮಂಡಿಸಿದ್ದರು. ಎನ್​ಸಿಬಿ ಪರ ವಕೀಲರು ಆರ್ಯನ್ ಹೈಪ್ರೊಫೈಲ್ ಕುಟುಂಬದ ವ್ಯಕ್ತಿಯಾಗಿರುವ ಕಾರಣ, ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಆತಂಕ ವ್ಯಕ್ತಪಡಿಸಿದ್ದರು. ಜೊತೆಗೆ ಆರ್ಯನ್ ವಾಟ್ಸಾಪ್ ಚಾಟ್​ಗಳನ್ನು ಹಾಜರುಪಡಿಸಿ, ಪ್ರಕರಣದಲ್ಲಿ ಆರ್ಯನ್ ಸಂಬಂಧವನ್ನು ವಿವರಿಸಿದ್ದರು. ನ್ಯಾಯಾಲಯ ಇದನ್ನು ಪರಿಗಣಿಸಿ ಜಾಮೀನು ನೀಡಿರಲಿಲ್ಲ.

ಇದನ್ನೂ ಓದಿ:

ಆರ್ಯನ್​ಗೆ ಜಾಮೀನು ನೀಡೋಕೆ ಸಾಧ್ಯವೇ ಇಲ್ಲ ಎಂದ ಎನ್​ಡಿಪಿಎಸ್​ ಕೋರ್ಟ್​

Donald Trump: ಟ್ವಿಟರ್​, ಫೇಸ್​ಬುಕ್​ಗೆ ಸಡ್ಡು ಹೊಡೆಯಲು ಮುಂದಾದ ಟ್ರಂಪ್; ಸ್ವಂತ ಸಾಮಾಜಿಕ ಜಾಲತಾಣ ಘೋಷಣೆ

Published On - 10:16 am, Thu, 21 October 21

ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ