AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ತ್ರೀ 2’ ನಿರ್ದೇಶಕನ ಹಿಂದೆ ಬಿದ್ದ ಶಾರುಖ್ ಖಾನ್? ಅಡ್ವೆಂಚರ್ ಸಿನಿಮಾಗೆ ಸಹಿ

ಕೆಲವು ವರದಿಗಳ ಪ್ರಕಾರ ಶಾರುಖ್ ಖಾನ್ ಅವರು ನಿರ್ದೇಶಕ ಅಮರ್ ಕೌಶಿಕ್ ಜೊತೆ ಮಾತುಕತೆ ನಡೆಸುತ್ತಿದ್ದಾರಂತೆ. ಅಮರ್ ಕೌಶಿಕ್ ಅವರು ‘ಸ್ತ್ರೀ 2’ ನಿರ್ದೇಶನ ಮಾಡಿ ಫೇಮಸ್ ಆಗಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ಸ್ತ್ರೀ 2’ ನಿರ್ದೇಶಕನ ಹಿಂದೆ ಬಿದ್ದ ಶಾರುಖ್ ಖಾನ್? ಅಡ್ವೆಂಚರ್ ಸಿನಿಮಾಗೆ ಸಹಿ
ಶಾರುಖ್
ರಾಜೇಶ್ ದುಗ್ಗುಮನೆ
|

Updated on: Oct 04, 2024 | 12:51 PM

Share

ಶಾರುಖ್ ಖಾನ್ ನಟನೆಯ ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾದಿಂದ ಆಗಿರೋ ಬಿಸ್ನೆಸ್ ಬರೋಬ್ಬರಿ 2,500 ಕೋಟಿ ರೂಪಾಯಿ. ಇದಾದ ಬಳಿಕ ಅವರ ನಟನೆಯ ಯಾವುದೇ ಹೊಸ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಹಾಗಂದ ಮಾತ್ರಕ್ಕೆ ಅವರು ಸಿನಿಮಾ ಕಥೆನ ಕೇಳುತ್ತಲೇ ಇಲ್ಲ ಎಂದಲ್ಲ. ಅವರು ಕೆಲವು ಕಥೆಗಳನ್ನು ಕೇಳಿ ಫೈನಲ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾರುಖ್ ಖಾನ್ ಅವರು ‘ಕಿಂಗ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾನ ಸುಜಯ್ ಘೋಷ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಇದರ ಜೊತೆಗೆ ‘ಪಠಾಣ್ 2’ ಚಿತ್ರದಲ್ಲೂ ನಟಿಸುತ್ತಿದ್ದು ಯಶ್ ರಾಜ್ ಫಿಲ್ಮ್ಸ್ ಇದನ್ನು ನಿರ್ಮಾಣ ಮಾಡುತ್ತಿದೆ. ಇದಕ್ಕೆ ಇನ್ನೂ ನಿರ್ದೇಶಕರು ಫೈನಲ್​ ಆಗಿಲ್ಲ. ‘ಕಿಂಗ್’ ಆರಂಭಕ್ಕೂ ಮೊದಲು ಅವರು ಮೂರು ಸಿನಿಮಾಗಳನ್ನು ಫೈನಲ್ ಮಾಡಿಕೊಳ್ಳುವ ಆಲೋಚನೆಯಲ್ಲಿ ಇದ್ದಾರೆ.

ಕೆಲವು ವರದಿಗಳ ಪ್ರಕಾರ ಶಾರುಖ್ ಖಾನ್ ಅವರು ನಿರ್ದೇಶಕ ಅಮರ್ ಕೌಶಿಕ್ ಜೊತೆ ಮಾತುಕತೆ ನಡೆಸುತ್ತಿದ್ದಾರಂತೆ. ಅಮರ್ ಕೌಶಿಕ್ ಅವರು ‘ಸ್ತ್ರೀ 2’ ನಿರ್ದೇಶನ ಮಾಡಿ ಫೇಮಸ್ ಆಗಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಮರ್ ಕೌಶಿಕ್ ಅವರು ಶಾರುಖ್​ಗಾಗಿ ಅಡ್ವೆಂಚರ್ ಫಿಲ್ಮ್ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಹಾಗಾದರೆ ಈ ಸಿನಿಮಾ ‘ಸ್ತ್ರೀ’ ಯೂನಿವರ್ಸ್​ಗೆ ಕನೆಕ್ಷನ್ ಹೊಂದಿರುತ್ತದೆಯೇ? ಖಂಡಿತವಾಗಿಯೂ ಇಲ್ಲ. ‘ಸ್ತ್ರೀ’ ಯೂನಿವರ್ಸ್​ಗೂ ಇದಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ಸದ್ಯ ಶಾರಖ್ ಹಾಗೂ ಅಮರ್ ಕೌಶಿಕ್ ಮಧ್ಯೆ ಮಾತುಕತೆ ನಡೆದಿದ್ದು, ಇನ್ನು ಯಾವುದೂ ಫೈನಲ್ ಆಗಿಲ್ಲ.

ಇದನ್ನೂ ಓದಿ: ‘ಪುಷ್ಪ ನಾನು ಮಾಡಬೇಕಿತ್ತು, ಅಲ್ಲು ಅರ್ಜುನ್ ಸರ್ ಗ್ರೇಟ್ ಬಿಡಿ’: ಶಾರುಖ್ ಖಾನ್

ಶಾರುಖ್ ಖಾನ್ ಅವರು ರಾಜ್ ಮತ್ತು ಡಿಕೆ ಜೊತೆ ಸಿನಿಮಾ ಮಾಡುವ ಉದ್ದೇಶ ಹೊಂದಿದ್ದಾರೆ. ಕಾಮಿಡಿ ಆ್ಯಕ್ಷನ್ ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾ ಫೈನಲ್ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ರಾಜ್ ಮತ್ತು ಡಿಕೆ ಒಳ್ಳೆಯ ಕಸುಬುದಾರಿಕೆ ಹೊಂದಿದ್ದಾರೆ. ಅವರ ಜೊತೆ ಶಾರುಖ್ ಸಿನಿಮಾ ಮಾಡಿದರೆ ನಿಜಕ್ಕೂ ಸಿನಿಮಾ ಉತ್ತಮವಾಗಿ ಮೂಡಿ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?