AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ತ್ರೀ 2’ ನಿರ್ದೇಶಕನ ಹಿಂದೆ ಬಿದ್ದ ಶಾರುಖ್ ಖಾನ್? ಅಡ್ವೆಂಚರ್ ಸಿನಿಮಾಗೆ ಸಹಿ

ಕೆಲವು ವರದಿಗಳ ಪ್ರಕಾರ ಶಾರುಖ್ ಖಾನ್ ಅವರು ನಿರ್ದೇಶಕ ಅಮರ್ ಕೌಶಿಕ್ ಜೊತೆ ಮಾತುಕತೆ ನಡೆಸುತ್ತಿದ್ದಾರಂತೆ. ಅಮರ್ ಕೌಶಿಕ್ ಅವರು ‘ಸ್ತ್ರೀ 2’ ನಿರ್ದೇಶನ ಮಾಡಿ ಫೇಮಸ್ ಆಗಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ಸ್ತ್ರೀ 2’ ನಿರ್ದೇಶಕನ ಹಿಂದೆ ಬಿದ್ದ ಶಾರುಖ್ ಖಾನ್? ಅಡ್ವೆಂಚರ್ ಸಿನಿಮಾಗೆ ಸಹಿ
ಶಾರುಖ್
ರಾಜೇಶ್ ದುಗ್ಗುಮನೆ
|

Updated on: Oct 04, 2024 | 12:51 PM

Share

ಶಾರುಖ್ ಖಾನ್ ನಟನೆಯ ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾದಿಂದ ಆಗಿರೋ ಬಿಸ್ನೆಸ್ ಬರೋಬ್ಬರಿ 2,500 ಕೋಟಿ ರೂಪಾಯಿ. ಇದಾದ ಬಳಿಕ ಅವರ ನಟನೆಯ ಯಾವುದೇ ಹೊಸ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಹಾಗಂದ ಮಾತ್ರಕ್ಕೆ ಅವರು ಸಿನಿಮಾ ಕಥೆನ ಕೇಳುತ್ತಲೇ ಇಲ್ಲ ಎಂದಲ್ಲ. ಅವರು ಕೆಲವು ಕಥೆಗಳನ್ನು ಕೇಳಿ ಫೈನಲ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾರುಖ್ ಖಾನ್ ಅವರು ‘ಕಿಂಗ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾನ ಸುಜಯ್ ಘೋಷ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಇದರ ಜೊತೆಗೆ ‘ಪಠಾಣ್ 2’ ಚಿತ್ರದಲ್ಲೂ ನಟಿಸುತ್ತಿದ್ದು ಯಶ್ ರಾಜ್ ಫಿಲ್ಮ್ಸ್ ಇದನ್ನು ನಿರ್ಮಾಣ ಮಾಡುತ್ತಿದೆ. ಇದಕ್ಕೆ ಇನ್ನೂ ನಿರ್ದೇಶಕರು ಫೈನಲ್​ ಆಗಿಲ್ಲ. ‘ಕಿಂಗ್’ ಆರಂಭಕ್ಕೂ ಮೊದಲು ಅವರು ಮೂರು ಸಿನಿಮಾಗಳನ್ನು ಫೈನಲ್ ಮಾಡಿಕೊಳ್ಳುವ ಆಲೋಚನೆಯಲ್ಲಿ ಇದ್ದಾರೆ.

ಕೆಲವು ವರದಿಗಳ ಪ್ರಕಾರ ಶಾರುಖ್ ಖಾನ್ ಅವರು ನಿರ್ದೇಶಕ ಅಮರ್ ಕೌಶಿಕ್ ಜೊತೆ ಮಾತುಕತೆ ನಡೆಸುತ್ತಿದ್ದಾರಂತೆ. ಅಮರ್ ಕೌಶಿಕ್ ಅವರು ‘ಸ್ತ್ರೀ 2’ ನಿರ್ದೇಶನ ಮಾಡಿ ಫೇಮಸ್ ಆಗಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಮರ್ ಕೌಶಿಕ್ ಅವರು ಶಾರುಖ್​ಗಾಗಿ ಅಡ್ವೆಂಚರ್ ಫಿಲ್ಮ್ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಹಾಗಾದರೆ ಈ ಸಿನಿಮಾ ‘ಸ್ತ್ರೀ’ ಯೂನಿವರ್ಸ್​ಗೆ ಕನೆಕ್ಷನ್ ಹೊಂದಿರುತ್ತದೆಯೇ? ಖಂಡಿತವಾಗಿಯೂ ಇಲ್ಲ. ‘ಸ್ತ್ರೀ’ ಯೂನಿವರ್ಸ್​ಗೂ ಇದಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ಸದ್ಯ ಶಾರಖ್ ಹಾಗೂ ಅಮರ್ ಕೌಶಿಕ್ ಮಧ್ಯೆ ಮಾತುಕತೆ ನಡೆದಿದ್ದು, ಇನ್ನು ಯಾವುದೂ ಫೈನಲ್ ಆಗಿಲ್ಲ.

ಇದನ್ನೂ ಓದಿ: ‘ಪುಷ್ಪ ನಾನು ಮಾಡಬೇಕಿತ್ತು, ಅಲ್ಲು ಅರ್ಜುನ್ ಸರ್ ಗ್ರೇಟ್ ಬಿಡಿ’: ಶಾರುಖ್ ಖಾನ್

ಶಾರುಖ್ ಖಾನ್ ಅವರು ರಾಜ್ ಮತ್ತು ಡಿಕೆ ಜೊತೆ ಸಿನಿಮಾ ಮಾಡುವ ಉದ್ದೇಶ ಹೊಂದಿದ್ದಾರೆ. ಕಾಮಿಡಿ ಆ್ಯಕ್ಷನ್ ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾ ಫೈನಲ್ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ರಾಜ್ ಮತ್ತು ಡಿಕೆ ಒಳ್ಳೆಯ ಕಸುಬುದಾರಿಕೆ ಹೊಂದಿದ್ದಾರೆ. ಅವರ ಜೊತೆ ಶಾರುಖ್ ಸಿನಿಮಾ ಮಾಡಿದರೆ ನಿಜಕ್ಕೂ ಸಿನಿಮಾ ಉತ್ತಮವಾಗಿ ಮೂಡಿ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ