AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣವಲ್ಲ, ಶಾರುಖ್ ಖಾನ್ ಈ ಸೂತ್ರ ನಿಮ್ಮ ಜೀವನದಲ್ಲೂ ಅಳವಡಿಸಿಕೊಂಡರೆ ಲೈಫ್ ಖುಷ್

ಶಾರುಖ್ ಖಾನ್ ಜೀವನದ ಕಷ್ಟಗಳ ನಡುವೆಯೂ ಸಂತೋಷದಿಂದ ಇರಲು ಒಂದು ವಿಶಿಷ್ಟ ಸೂತ್ರವನ್ನು ಹಂಚಿಕೊಂಡಿದ್ದಾರೆ. 99.999% ಜನರ ಬಗ್ಗೆ ಯೋಚಿಸದೆ, ಕೇವಲ ಕುಟುಂಬ ಮತ್ತು ಆತ್ಮೀಯ ಗೆಳೆಯರ ಮೇಲೆ ಗಮನ ಹರಿಸುವುದು ಅವರ ಮಂತ್ರ. ಈ ಸರಳ ತಂತ್ರವನ್ನು ಅಳವಡಿಸಿಕೊಂಡರೆ ಯಾರಾದರೂ ಖುಷಿಯಿಂದ ಇರಬಹುದು ಎಂದು SRK ಹೇಳುತ್ತಾರೆ.

ಹಣವಲ್ಲ, ಶಾರುಖ್ ಖಾನ್ ಈ ಸೂತ್ರ ನಿಮ್ಮ ಜೀವನದಲ್ಲೂ ಅಳವಡಿಸಿಕೊಂಡರೆ ಲೈಫ್ ಖುಷ್
ಶಾರುಖ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 04, 2025 | 11:39 AM

Share

ಶಾರುಖ್ ಖಾನ್ (Shah Rukh Khan) ಅವರು ಹಲವು ಏರುಪೇರುಗಳನ್ನು ಕಂಡವರು. ಅವರು ಈಗ ದೊಡ್ಡ ಹಂತಕ್ಕೆ ಬಂದು ತಲುಪಿದ್ದಾರೆ. ಅವರು ಜೀವನದಲ್ಲಿ ಕಷ್ಟಗಳನ್ನು ನೋಡಿದ್ದಾರೆ. ಅವರು ತಮ್ಮ ಅನುಭವದಲ್ಲಿ ಸಾಕಷ್ಟು ವಿಚಾರಗಳನ್ನು ಕಲಿತುಕೊಂಡಿದ್ದಾರೆ. ಇದನ್ನು ಅನೇಕ ಬಾರಿ ಹೇಳಿದ್ದಾರೆ. ಈ ಪೈಕಿ ಹೆಚ್ಚು ಗಮನ ಸೆಳೆದು ವಿಡಿಯೋ ಒಂದಿದೆ. ಅವರು ತಮ್ಮ ಜೀವನ ಖುಷಿಯಿಂದ ಇರಲು ಒಂದು ಕಾರಣ ವಿವರಿಸಿದ್ದರು. ಅದನ್ನು ಎಲ್ಲರೂ ಅಳವಡಿಸಿಕೊಂಡರೆ ಜೀವನ ಸಖತ್ ಖುಷಿಯಿಂದ ಇರಲಿದೆ.

ಶಾರುಖ್ ಖಾನ್ ಬಳಿ ಹಣ ಇದೆ. ಹಾಗಂತ ಹಣ ಇದ್ದವರೆಲ್ಲ ಖುಷಿಯಾಗಿ ಇರೋಕೆ ಸಾಧ್ಯವಿಲ್ಲ. ಎಷ್ಟೋ ಮಂದಿ ಹಣ ಇದ್ದ ಹೊರತಾಗಿಯೂ ಖುಷಿಯಿಂದ ಇರಲು ಸಾಧ್ಯವಾಗಿಲ್ಲ. ಇದಕ್ಕೆ ಶಾರುಖ್ ಖಾನ್ ಅವರು ಒಂದು ಸುಲಭ ಟೆಕ್ನಿಕ್ ಹೇಳಿಕೊಟ್ಟಿದ್ದಾರೆ. ಹಳೆಯ ವಿಡಿಯೋ ಒಂದರಲ್ಲಿ ಈ ವಿಚಾರ ರಿವೀಲ್ ಮಾಡಿದ್ದರು.

‘ನನ್ನ ಫ್ರೆಂಡ್ ಒಬ್ಬರು ಇದ್ದಾರೆ, ದೊಡ್ಡ ನಿರ್ದೇಶಕ ಹಾಗೂ ನಿರ್ಮಾಪಕ. ನಾನು ಅವರ ಹೆಸರನ್ನು ತೆಗೆದುಕೊಳ್ಳುವುದಿಲ್ಲ. ಅವರು ಕರೆ ಮಾಡಿ, ನಿಮ್ಮ ಸಿನಿಮಾ ಬಂದರೆ ನನ್ನ ಸಿನಿಮಾ ಬರ್ಬಾದ್ ಆಗುತ್ತದೆ ಎಂದರು. ಏನು ಬೇಕು ಎಂದು ಕೇಳಿದೆ. ನನ್ನ ಸಿನಿಮಾ ರಿಲೀಸ್ ಟೈಮ್​ಗೆ ನಿನ್ನ ಸಿನಿಮಾ ರಿಲೀಸ್ ಮಾಡಬೇಡ ಎಂದರು. ನಾನು ಓಕೆ ಎಂದೆ. ಇದನ್ನು ಹೇಳಲು ಏಕೆ ಇಷ್ಟು ವಿಚಲಿತಗೊಂಡಿದ್ದೀರಿ ಎಂದು ಕೇಳಿದೆ’ ಎಂದಿದ್ದರು ಶಾರುಖ್.

ಇದನ್ನೂ ಓದಿ
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
Image
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

‘ನೀನು ನನ್ನ ಹೇಟ್ ಮಾಡ್ತೀಯಾ ಎಂದರು. ನಾನು ಅವರಿಗೆ ನೇರವಾಗಿ ಹೇಳಿದೆ. ನಿಮಗೆ ನಾನು ಒಳ್ಳೆಯದನ್ನೂ ಯೋಚನೆ ಮಾಡಲ್ಲ, ಕೆಟ್ಟದನ್ನೂ ಯೋಚಿಸಲ್ಲ. ನಾನು ನಿಮ್ಮ ಬಗ್ಗೆ ಯೋಚಿಸೋದೇ ಇಲ್ಲ. 99.999 ಪರ್ಸೆಂಟ್ ಜನರ ಬಗ್ಗೆ ನಾನು ಯೋಚಿಸೋದಿಲ್ಲ. ನನ್ನ ಕುಟುಂಬ, ಗೆಳೆಯರ ಬಗ್ಗೆ ಮಾತ್ರ ಯೋಚಿಸೋದು. ಎಲ್ಲರೂ ಹೀಗೆ ಮಾಡಿದರೆ ಜೀವನ ಚೆನ್ನಾಗಿರುತ್ತದೆ’ ಎಂದಿದ್ದರು ಶಾರುಖ್ ಖಾನ್. ಈ ಸೂತ್ರ ಅನೇಕರಿಗೆ ಹೌದು ಎನಿಸಿದೆ.

ಇದನ್ನೂ ಓದಿ: ಎಲ್ಲವೂ ಶಾರುಖ್ ಖಾನ್ ಅವರಂತೆ; ಆರ್ಯನ್​ಗೆ ತಂದೆಯ ಎಷ್ಟೆಲ್ಲ ವಿಚಾರ ಹೋಲುತ್ತೆ ನೋಡಿ

ಶಾರುಖ್ ಖಾನ್ ಅವರು ಸದ್ಯ ‘ಕಿಂಗ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಅವರ ಮಗ ಆರ್ಯನ್ ಖಾನ್ ಅವರು ‘ಬ್ಯಾಡ್ ಆಫ್ ಬಾಲಿವುಡ್’ ಸಿನಿಮಾ ಮೂಲಕ ನಿರ್ದೇಶನಕ್ಕೆ ಇಳಿದಿದ್ದು, ಗೆಲುವು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:38 am, Sat, 4 October 25

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ