AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್​ಗೆ ವೀಕೆಂಡ್​ನಲ್ಲಿ ಡಬಲ್ ಸೆಲೆಬ್ರೇಷನ್; ಬೆಳಕಿನಿಂದ ಅಲಂಕೃತಗೊಂಡ ಮನ್ನತ್

Shah Rukh Khan: ಶಾರುಖ್ ಖಾನ್ ಮನೆ ಮನ್ನತ್ ಮುಂಬೈನ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತದೆ. ಇದೀಗ ದೀಪಾವಳಿ ಹಬ್ಬಕ್ಕೆ ಶಾರುಖ್ ಖಾನ್ ತಮ್ಮ ಮನೆಯನ್ನು ದೀಪಗಳಿಂದ ಅಲಂಕರಿಸಿದ್ದಾರೆ.

ಶಾರುಖ್ ಖಾನ್​ಗೆ ವೀಕೆಂಡ್​ನಲ್ಲಿ ಡಬಲ್ ಸೆಲೆಬ್ರೇಷನ್; ಬೆಳಕಿನಿಂದ ಅಲಂಕೃತಗೊಂಡ ಮನ್ನತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 30, 2024 | 7:14 PM

Share

ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಈ ಬಾರಿ ಮನೆಯಲ್ಲಿ ಒಟ್ಟೊಟ್ಟಿಗೆ ಎರಡೆರಡು ಸಂಭ್ರಮ. ಶಾರುಖ್ ಖಾನ್ ಅವರು ಮುಸ್ಲಿಂ ಸಮುದಾಯದವರಾದರೂ ಹಿಂದೂ ಹಬ್ಬಗಳನ್ನು ಆಚರಿಸುತ್ತಾರೆ. ಈಗ ಸದ್ಯ ಅವರು ದೀಪಾವಳಿ ಸಂಭ್ರಮದಲ್ಲಿ ಇದ್ದಾರೆ. ಇದರ ಜೊತೆಗೆ ನವೆಂಬರ್ 2 ಅವರ ಜನ್ಮದಿನ. ಎರಡೆರಡು ಒಟ್ಟೊಟ್ಟಿಗೆ ಬಂದಿವೆ. ಹೀಗಾಗಿ, ಅವರಿಗೆ ಡಬಲ್ ಸೆಲೆಬ್ರೇಷನ್. ಇದು ಅವರಿಗೆ 59ನೇ ವರ್ಷದ ಜನ್ಮದಿನ. ಹೀಗಾಗಿ ಇಡೀ ಮನೆಯನ್ನು ಬೆಳಕಿನಿಂದ ಅಲಂಕರಿಸಲಾಗಿದೆ.

ಸದ್ಯ ಶಾರುಖ್ ಖಾನ್ ಅವರ ಮನ್ನತ್ ಮನೆಯ ವಿಡಿಯೋ ವೈರಲ್ ಆಗಿದೆ. ಎಎನ್ಐ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಮನ್ನತ್ ಮನೆಗೆ ಲೈಟ್ ಹಾಕಿ ಅಲಂಕರಿಸಲಾಗಿದೆ. ಅಭಿಮಾನಿಗಳು ಮನ್ನತ್ ಎದುರು ನಿಂತು ಫೋಟೋ ಕ್ಲಿಕ್ ಮಾಡಿಕೊಳ್ಳುತ್ತಾ ಇದ್ದಾರೆ.

ಶಾರುಖ್ ಖಾನ್ ಮನೆ ಅವರ ಅಭಿಮಾನಿಗಳ ನೆಚ್ಚಿನ ತಾಣಗಳಲ್ಲಿ ಒಂದು. ಈ ಮನೆಯ ಎದುರು ಜನರು ಯಾವಾಗಲೂ ನೆರೆಯುತ್ತಾರೆ. ಫ್ಯಾನ್ಸ್ ಶಾರುಖ್ ಖಾನ್ ಅವರನ್ನು ನೋಡಲು ಕಾಯುತ್ತಾ ಇರುತ್ತಾರೆ. ಅವರಿಗೆ ಪೊಲೀಸ್ ರಕ್ಷಣೆ ಇದ್ದರೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ನವೆಂಬರ್ 2ರಂದು ಮುಂಬೈನಲ್ಲಿ ಅವರ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆಯಲಿದ್ದಾರೆ.

ಇದನ್ನೂ ಓದಿ:ದುಬೈನಲ್ಲಿ ಶಾರುಖ್ ಖಾನ್ ಭೇಟಿಯಾದ ಅಫ್ಘಾನ್ ಆಟಗಾರ

ಶಾರುಖ್ ಖಾನ್ ಅವರು ಬರ್ತ್ಡೇ ದಿನ ಮನೆಯ ಎದುರು ಬಂದು ಅಭಿಮಾನಿಗಳಿಗೆ ದರ್ಶನ ಕೊಡುತ್ತಾರೆ. ಫ್ಯಾನ್ಸ್ ಕಡೆ ಕೈ ಬೀಸಿ ಸಂಭ್ರಮಿಸುತ್ತಾರೆ. ಇದು ಅವರು ಮೊದಲಿನಿಂದಲೂ ನಡೆಸಿಕೊಂಡು ಬಂದ ಸಂಪ್ರದಾಯ. ಈ ಬಾರಿಯೂ ಹಾಗೆಯೇ ಆಗಬಹುದು ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಶಾರುಖ್ ಖಾನ್ ಅವರು ಇತ್ತೀಚೆಗೆ ದುಬೈನಲ್ಲಿ ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಕುಟುಂಬದ ಜೊತೆ ಅವರು ದುಬೈ ತೆರಳಿದ್ದರು. ಅಲ್ಲಿ ಆರ್ಯನ್ ಖಾನ್ ಅವರ ಬಟ್ಟೆ ಬ್ರ್ಯಾಂಡ್ ಕಡೆಯಿಂದ ವಿಶೇಷ ಈವೆಂಟ್ ಆಯೋಜನೆ ಮಾಡಲಾಗಿತ್ತು. ಆ ಬಳಿಕ ಪಾರ್ಟಿ ಕೂಡ ಇತ್ತು.

ಶಾರುಖ್ ಖಾನ್ ಅವರು ‘ಕಿಂಗ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಇನ್ನೂ ಕೆಲವು ಸಿನಿಮಾಗಳು ಲೈನ್ನಲ್ಲಿ ಇವೆ. ಈ ಬಗ್ಗೆ ನವೆಂಬರ್ 2ರಂದು ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರದ ಕುರಿತು ಅಧಿಕೃತ ಮಾಹಿತಿ ಅಂದೇ ಸಿಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Wed, 30 October 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ