AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

Shah Rukh Khan: ಬಾಲಿವುಡ್ ಬಾದ್​ಶಾ ಶಾರುಖ್ ಖಾನ್ ನಟನೆಯ ಮುಂದಿನ ಸಿನಿಮಾ ಜವಾನ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಶಾರುಖ್ ಖಾನ್ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ
ಜವಾನ್
ಮಂಜುನಾಥ ಸಿ.
|

Updated on: Apr 26, 2023 | 8:00 AM

Share

ಪಠಾಣ್ (Pathaan) ಸಿನಿಮಾ ಮೂಲಕ 1000 ಕೋಟಿ ಕ್ಲಬ್ ಸೇರಿರುವ ಶಾರುಖ್ ಖಾನ್ (Shah Rukh Khan), ತಾವೇಕೆ ಬಾಲಿವುಡ್​ನ (Bollywood) ಬಾದ್​ಶಾ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕಳೆದ ಆರೇಳು ವರ್ಷಗಳಿಂದ ಹಿಟ್ ಇಲ್ಲದೆ ಬಸವಳಿದಿದ್ದ ಶಾರುಖ್ ಖಾನ್​ಗೂ ಸಹ ಪಠಾಣ್ (Pathaan) ನಿರಾಳತೆ ಮೂಡಿಸಿರುವ ಜೊತೆಗೆ ಏಕಾಏಕಿ ಶಾರುಖ್ ಖಾನ್ ಅನ್ನು ಗ್ಲೋಬಲ್ ಸ್ಟಾರ್ ಅನ್ನಾಗಿಸಿದೆ. ಪಠಾಣ್ ಸೂಪರ್-ಡೂಪರ್ ಹಿಟ್ ಆಗಿರುವ ಬೆನ್ನಲ್ಲೆ ಅವರ ಮುಂದಿನ ಸಿನಿಮಾಗಳ ಬಗ್ಗೆ ಭಾರಿ ನಿರೀಕ್ಷೆಗಳು ಗರಿಗೆದರಿವೆ.

ಪಠಾಣ್ ಚಿತ್ರೀಕರಣ ನಡೆಯುತ್ತಿರುವಾಗಲೇ ಶಾರುಖ್ ಖಾನ್, ಆಕ್ಷನ್-ಮಾಸ್ ಎಂಟರ್ಟ್ರೈನ್​ಮೆಂಟ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದರು. ಅದುವೇ ಜವಾನ್. ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ನಿರ್ದೇಶಿಸುತ್ತಿರುವ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಜೊತೆಗೆ ಸಿನಿಮಾದ ಪ್ರಚಾರ ಯಾವಾಗಿನಿಂದ ಪ್ರಾರಂಭವಾಗಲಿದೆ ಎಂಬುದನ್ನೂ ಸಹ ಘೋಷಣೆ ಮಾಡಲಾಗಿದೆ.

ಪಕ್ಕಾ ಆಕ್ಷನ್ ಸಿನಿಮಾ ಆಗಿರುವ ಜವಾನ್ ಜೂನ್ 2ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯವನ್ನು ಮೇ ತಿಂಗಳ ಮೊದಲ ವಾರದಿಂದ ಶಾರುಖ್ ಖಾನ್ ಹಾಗೂ ತಂಡ ಪ್ರಾರಂಭಿಸಲಿದೆ. ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಸಹ ಅಂತಿಮ ಹಂತದಲ್ಲಿವೆ. ಇವುಗಳು ಮುಗಿದ ಬಳಿಕ ಸಿನಿಮಾ ತಂಡವು ಪ್ರಚಾರಕ್ಕಾಗಿ ಹೊರಟುನಿಲ್ಲಲಿದೆ.

ಜವಾನ್ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆಗೆ ದಕ್ಷಿಣದ ಸ್ಟಾರ್ ನಟಿ ನಯನತಾರಾ ನಾಯಕಿಯಾಗಿ ನಟಿಸಿದ್ದಾರೆ. ಹಾಸ್ಯನಟ ಯೋಗಿ ಬಾಬು ಹಾಗೂ ಇನ್ನಿತರೆ ಕೆಲವು ತಮಿಳಿನ ನಟರು ಸಹ ಜವಾನ್ ಸಿನಿಮಾದಲ್ಲಿದ್ದಾರೆ. ಇವುಗಳೆಲ್ಲದರ ಜೊತೆಗೆ ತಮಿಳಿನ ಸ್ಟಾರ್ ನಟ ವಿಜಯ್ ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ಹಾಗೂ ಶಾರುಖ್ ಖಾನ್ ಒಟ್ಟಿಗೆ ದುಷ್ಟರ ವಿರುದ್ಧ ಫೈಟ್ ಮಾಡುವ ದೃಶ್ಯಗಳನ್ನು ಅಟ್ಲಿ ಸೆರೆಹಿಡಿದಿದ್ದಾರೆ.

ಜವಾನ್ ಸಿನಿಮಾದ ಚಿತ್ರೀಕರಣ ಮುಗಿಸಿರುವ ಶಾರುಖ್ ಖಾನ್ ಇದೀಗ ಡಂಕಿ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಡಂಕಿ ಸಿನಿಮಾವನ್ನು ಸೋಲೆ ಕಾಣದ ನಿರ್ದೇಶಕ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡುತ್ತಿದ್ದಾರೆ. ವೀಸಾ, ಪಾಸ್​ಪೋರ್ಟ್​ಗಳಿಲ್ಲದೆ ಅಕ್ರಮವಾಗಿ ವಿದೇಶಕ್ಕೆ ವಲಸೆ ಹೋಗುವವರ ಕುರಿತಾದ ಕತೆಯುಳ್ಳ ಸಿನಿಮಾ ಇದಾಗಿದ್ದು ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆಗೆ ತಾಪ್ಸಿ ಪನ್ನು ನಾಯಕಿಯಾಗಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!