ಶಾರುಖ್ ಖಾನ್ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

Shah Rukh Khan: ಬಾಲಿವುಡ್ ಬಾದ್​ಶಾ ಶಾರುಖ್ ಖಾನ್ ನಟನೆಯ ಮುಂದಿನ ಸಿನಿಮಾ ಜವಾನ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಶಾರುಖ್ ಖಾನ್ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ
ಜವಾನ್
Follow us
|

Updated on: Apr 26, 2023 | 8:00 AM

ಪಠಾಣ್ (Pathaan) ಸಿನಿಮಾ ಮೂಲಕ 1000 ಕೋಟಿ ಕ್ಲಬ್ ಸೇರಿರುವ ಶಾರುಖ್ ಖಾನ್ (Shah Rukh Khan), ತಾವೇಕೆ ಬಾಲಿವುಡ್​ನ (Bollywood) ಬಾದ್​ಶಾ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕಳೆದ ಆರೇಳು ವರ್ಷಗಳಿಂದ ಹಿಟ್ ಇಲ್ಲದೆ ಬಸವಳಿದಿದ್ದ ಶಾರುಖ್ ಖಾನ್​ಗೂ ಸಹ ಪಠಾಣ್ (Pathaan) ನಿರಾಳತೆ ಮೂಡಿಸಿರುವ ಜೊತೆಗೆ ಏಕಾಏಕಿ ಶಾರುಖ್ ಖಾನ್ ಅನ್ನು ಗ್ಲೋಬಲ್ ಸ್ಟಾರ್ ಅನ್ನಾಗಿಸಿದೆ. ಪಠಾಣ್ ಸೂಪರ್-ಡೂಪರ್ ಹಿಟ್ ಆಗಿರುವ ಬೆನ್ನಲ್ಲೆ ಅವರ ಮುಂದಿನ ಸಿನಿಮಾಗಳ ಬಗ್ಗೆ ಭಾರಿ ನಿರೀಕ್ಷೆಗಳು ಗರಿಗೆದರಿವೆ.

ಪಠಾಣ್ ಚಿತ್ರೀಕರಣ ನಡೆಯುತ್ತಿರುವಾಗಲೇ ಶಾರುಖ್ ಖಾನ್, ಆಕ್ಷನ್-ಮಾಸ್ ಎಂಟರ್ಟ್ರೈನ್​ಮೆಂಟ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದರು. ಅದುವೇ ಜವಾನ್. ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ನಿರ್ದೇಶಿಸುತ್ತಿರುವ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಜೊತೆಗೆ ಸಿನಿಮಾದ ಪ್ರಚಾರ ಯಾವಾಗಿನಿಂದ ಪ್ರಾರಂಭವಾಗಲಿದೆ ಎಂಬುದನ್ನೂ ಸಹ ಘೋಷಣೆ ಮಾಡಲಾಗಿದೆ.

ಪಕ್ಕಾ ಆಕ್ಷನ್ ಸಿನಿಮಾ ಆಗಿರುವ ಜವಾನ್ ಜೂನ್ 2ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯವನ್ನು ಮೇ ತಿಂಗಳ ಮೊದಲ ವಾರದಿಂದ ಶಾರುಖ್ ಖಾನ್ ಹಾಗೂ ತಂಡ ಪ್ರಾರಂಭಿಸಲಿದೆ. ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಸಹ ಅಂತಿಮ ಹಂತದಲ್ಲಿವೆ. ಇವುಗಳು ಮುಗಿದ ಬಳಿಕ ಸಿನಿಮಾ ತಂಡವು ಪ್ರಚಾರಕ್ಕಾಗಿ ಹೊರಟುನಿಲ್ಲಲಿದೆ.

ಜವಾನ್ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆಗೆ ದಕ್ಷಿಣದ ಸ್ಟಾರ್ ನಟಿ ನಯನತಾರಾ ನಾಯಕಿಯಾಗಿ ನಟಿಸಿದ್ದಾರೆ. ಹಾಸ್ಯನಟ ಯೋಗಿ ಬಾಬು ಹಾಗೂ ಇನ್ನಿತರೆ ಕೆಲವು ತಮಿಳಿನ ನಟರು ಸಹ ಜವಾನ್ ಸಿನಿಮಾದಲ್ಲಿದ್ದಾರೆ. ಇವುಗಳೆಲ್ಲದರ ಜೊತೆಗೆ ತಮಿಳಿನ ಸ್ಟಾರ್ ನಟ ವಿಜಯ್ ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ಹಾಗೂ ಶಾರುಖ್ ಖಾನ್ ಒಟ್ಟಿಗೆ ದುಷ್ಟರ ವಿರುದ್ಧ ಫೈಟ್ ಮಾಡುವ ದೃಶ್ಯಗಳನ್ನು ಅಟ್ಲಿ ಸೆರೆಹಿಡಿದಿದ್ದಾರೆ.

ಜವಾನ್ ಸಿನಿಮಾದ ಚಿತ್ರೀಕರಣ ಮುಗಿಸಿರುವ ಶಾರುಖ್ ಖಾನ್ ಇದೀಗ ಡಂಕಿ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಡಂಕಿ ಸಿನಿಮಾವನ್ನು ಸೋಲೆ ಕಾಣದ ನಿರ್ದೇಶಕ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡುತ್ತಿದ್ದಾರೆ. ವೀಸಾ, ಪಾಸ್​ಪೋರ್ಟ್​ಗಳಿಲ್ಲದೆ ಅಕ್ರಮವಾಗಿ ವಿದೇಶಕ್ಕೆ ವಲಸೆ ಹೋಗುವವರ ಕುರಿತಾದ ಕತೆಯುಳ್ಳ ಸಿನಿಮಾ ಇದಾಗಿದ್ದು ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆಗೆ ತಾಪ್ಸಿ ಪನ್ನು ನಾಯಕಿಯಾಗಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ