AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Beats KGF 2: ಹಿಂದಿಯಲ್ಲಿ ‘ಕೆಜಿಎಫ್​ 2’ ಚಿತ್ರದ ದಾಖಲೆ ಮುರಿದ ‘ಪಠಾಣ್​’; ಇನ್ನೂ ತಗ್ಗಿಲ್ಲ ಶಾರುಖ್​ ಸಿನಿಮಾ ಹವಾ

Shah Rukh Khan | Pathaan Total Collection: ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಹಿಂದಿ ವರ್ಷನ್​ ಗಳಿಕೆಯನ್ನು ‘ಪಠಾಣ್​’ ಸಿನಿಮಾ ಬೀಟ್​ ಮಾಡಿದೆ. ಬಿಡುಗಡೆಯಾಗಿ 15 ದಿನ ಕಳೆದರೂ ಈ ಚಿತ್ರದ ಹವಾ ಕಡಿಮೆ ಆಗಿಲ್ಲ.

Pathaan Beats KGF 2: ಹಿಂದಿಯಲ್ಲಿ ‘ಕೆಜಿಎಫ್​ 2’ ಚಿತ್ರದ ದಾಖಲೆ ಮುರಿದ ‘ಪಠಾಣ್​’; ಇನ್ನೂ ತಗ್ಗಿಲ್ಲ ಶಾರುಖ್​ ಸಿನಿಮಾ ಹವಾ
ಶಾರುಖ್​ ಖಾನ್​, ಯಶ್​
ಮದನ್​ ಕುಮಾರ್​
|

Updated on: Feb 08, 2023 | 8:59 PM

Share

ನಟ ಶಾರುಖ್​ ಖಾನ್​ (Shah Rukh Khan) ಅಭಿನಯದ ‘ಪಠಾಣ್​’ ಸಿನಿಮಾ ಗೆಲ್ಲಲಿ ಎಂಬುದು ಅಭಿಮಾನಿಗಳ ಬಯಕೆ ಮತ್ತು ಹಾರೈಕೆ ಆಗಿತ್ತು. ಈ ಸಿನಿಮಾ ಗೆದ್ದಿರುವುದು ಮಾತ್ರವಲ್ಲದೇ ಅನೇಕ ದಾಖಲೆಗಳನ್ನು ಕೂಡ ಬರೆಯುತ್ತಿದೆ. ಹಿಂದಿಯಲ್ಲಿ ಯಶ್​ ನಟನೆಯ ‘ಕೆಜಿಎಫ್​ 2’ ಸಿನಿಮಾ ಮಾಡಿದ್ದ ದಾಖಲೆಯನ್ನು ಕೂಡ ‘ಪಠಾಣ್​’ (Pathaan Movie) ಚಿತ್ರ ಮುರಿದಿದೆ. ಆ ಮೂಲಕ ಬಾಲಿವುಡ್​ ಬಾಕ್ಸ್​ ಆಫೀಸ್​ನಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಎರಡನೇ ಸಿನಿಮಾ ಎಂಬ ಖ್ಯಾತಿಗೆ ‘ಪಠಾಣ್’ ಚಿತ್ರ ಪಾತ್ರವಾಗಿದೆ. ಮೊದಲ ಸ್ಥಾನದಲ್ಲಿ ‘ಬಾಹುಬಲಿ 2’ (ಹಿಂದಿ ಡಬ್ಬಿಂಗ್​​) ಸಿನಿಮಾ ಇದೆ. ‘ಕೆಜಿಎಫ್​: ಚಾಪ್ಟರ್​ 2’ (KGF: Chapter 2) ಸಿನಿಮಾ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಪ್ರಶಾಂತ್ ನೀಲ್​ ನಿರ್ದೇಶನದ ‘ಕೆಜಿಎಫ್​ 2’ ಸಿನಿಮಾ 2022ರ ಏಪ್ರಿಲ್​ 14ರಂದು ಬಿಡುಗಡೆ ಆಯಿತು. ಹಿಂದಿಗೆ ಡಬ್​ ಆಗಿದ್ದ ಆ ಚಿತ್ರ ಬಾಲಿವುಡ್​ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ ಒಟ್ಟು ಹಣ 434.70 ಕೋಟಿ ರೂಪಾಯಿ. ಈ ದಾಖಲೆಯನ್ನು ಮುರಿಯುವಲ್ಲಿ ‘ಪಠಾಣ್​’ ಸಿನಿಮಾ ಯಶಸ್ವಿ ಆಗಿದೆ. ಮಂಗಳವಾರವೇ (ಫೆ.7) ಈ ಸಿನಿಮಾದ ಗಳಿಕೆ 430.25 ಕೋಟಿ ರೂಪಾಯಿ ಆಗಿತ್ತು. ಬುಧವಾರ ಕೂಡ ಹಲವು ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಂಡಿರುವುದರಿಂದ ಅನಾಯಾಸವಾಗಿ ‘ಕೆಜಿಎಫ್​ 2’ ಚಿತ್ರವನ್ನು ಇದು ಹಿಂದಿಕ್ಕಿದೆ ಎಂದು ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಜನವರಿ 25ರಂದು ‘ಪಠಾಣ್​’ ಸಿನಿಮಾ ಬಿಡುಗಡೆ ಆಯಿತು. 15 ದಿನ ಕಳೆದಿದ್ದರೂ ಕೂಡ ಈ ಚಿತ್ರದ ಅಬ್ಬರ ಮುಗಿದಿಲ್ಲ. ಇಂದಿಗೂ ಹಲವು ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಶ್ವಾದ್ಯಂತ ಈ ಚಿತ್ರಕ್ಕೆ 740 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ. ಅಂತಿಮವಾಗಿ ‘ಪಠಾಣ್​’ ಎಷ್ಟು ಹಣ ಬಾಚಿಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

Pathaan Movie: ಪಾಕಿಸ್ತಾನದಲ್ಲಿ ‘ಪಠಾಣ್​’ ಚಿತ್ರದ ಅಕ್ರಮ ಪ್ರದರ್ಶನ; ಕಾನೂನು ಕ್ರಮ ಕೈಗೊಂಡ ಸೆನ್ಸಾರ್​ ಮಂಡಳಿ

ಟಿಕೆಟ್​ ಬೆಲೆ ತಗ್ಗಿಸಿದ ‘ಪಠಾಣ್​’ ನಿರ್ಮಾಪಕರು:

ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಜೋಡಿಯಾಗಿ ನಟಿಸಿರುವ ‘ಪಠಾಣ್​’ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. ಈ ಸಿನಿಮಾದಿಂದ ನಿರ್ಮಾಪಕರಿಗೆ ಭರ್ಜರಿ ಲಾಭ ಆಗಿದೆ. ವಾರಾಂತ್ಯದ ಶೋಗಳನ್ನು ಹೊರತುಪಡಿಸಿ, ಇನ್ನುಳಿದ ದಿನಗಳಲ್ಲಿ ಟಿಕೆಟ್​ ಬೆಲೆ ತಗ್ಗಿಸಲಾಗಿದೆ. ಇದರಿಂದ ಇನ್ನೂ ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ‘ಪಠಾಣ್​’ ಕಲೆಕ್ಷನ್​ ಹೆಚ್ಚಲು ಇದು ಕೂಡ ಸಹಕಾರಿ ಆಗಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದು, ಅವರ ಚಾರ್ಮ್​ ಕೂಡ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ