AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

Pathaan Movie | Censor Certificate: ‘ಬೇಷರಂ ರಂಗ್​..’ ಹಾಡಿನ ಮೂರು ಕಡೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ದೀಪಿಕಾ ಪಡುಕೋಣೆ ಅವರ ಕೆಲವು ಕ್ಲೋಸಪ್​ ಶಾಟ್​ಗಳನ್ನು ತೆಗೆದುಹಾಕಲಾಗಿದೆ.

Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ
ಶಾರುಖ್ ಖಾನ್, ದೀಪಿಕಾ ಪಡುಕೋಣೆ
TV9 Web
| Updated By: ಮದನ್​ ಕುಮಾರ್​|

Updated on: Jan 05, 2023 | 4:32 PM

Share

ಬಹುನಿರೀಕ್ಷಿತ ‘ಪಠಾಣ್​’ ಸಿನಿಮಾ (Pathaan Movie) ಕುರಿತಂತೆ ಅನೇಕ ಇಂಟರೆಸ್ಟಿಂಗ್​ ಸುದ್ದಿಗಳು ಕೇಳಿಬರುತ್ತಿದೆ. ಒಂದು ವರ್ಗದ ಜನರು ಈ ಸಿನಿಮಾಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ‘ಪಠಾಣ್​’ ಚಿತ್ರದಲ್ಲಿ ಹಲವು ಬದಲಾವಣೆಗಳನ್ನು ಮಾಡುವಂತೆ ಸೆನ್ಸಾರ್​ ಮಂಡಳಿ ಅಧಿಕಾರಿಗಳು ಸೂಚಿಸಿದ ಬಗ್ಗೆಯೂ ಇತ್ತೀಚೆಗೆ ಸುದ್ದಿ ಆಗಿತ್ತು. ಈಗ ಈ ಸಿನಿಮಾಗೆ ಸೆನ್ಸಾರ್​ ಮಂಡಳಿಯಿಂದ ‘ಯು/ಎ’ ಪ್ರಮಾಣಪತ್ರ ಸಿಕ್ಕಿದೆ. ಶಾರುಖ್​ ಖಾನ್​ (Shah Rukh Khan) ಅಭಿಮಾನಿಗಳಿಗೆ ಇದರಿಂದ ಖುಷಿ ಆಗಿದೆ. ಆದರೆ ಹಲವು ಕಡೆಗಳಲ್ಲಿ ಕತ್ತರಿ ಹಾಕಲಾಗಿದೆ. ಅಚ್ಚರಿ ಏನೆಂದರೆ ‘ಪಠಾಣ್​’ ಚಿತ್ರದಲ್ಲಿ ಬರುವ ‘ಪ್ರಧಾನ ಮಂತ್ರಿ’ (Prime Minister) ಎಂಬ ಪದವನ್ನು ಅಧ್ಯಕ್ಷ ಅಥವಾ ಮಂತ್ರಿ ಎಂದು ಬದಲಿಸಲಾಗಿದೆ. ಈ ಕುರಿತು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

‘ಪಠಾಣ್​’ ಚಿತ್ರದ ‘ಬೇಷರಂ ರಂಗ್​..’ ಹಾಡು ರಿಲೀಸ್​ ಆದಾಗಿನಿಂದ ಇಲ್ಲಿಯತನಕ ಅನೇಕ ವಿವಾದಗಳು ಹುಟ್ಟಿಕೊಂಡಿವೆ. ಹಾಗಾಗಿ ಬಹಳ ಕಟ್ಟುನಿಟ್ಟಾಗಿ ಸೆನ್ಸಾರ್​ ಮಂಡಳಿ ಸದಸ್ಯರು ಕತ್ತರಿ ಪ್ರಯೋಗ ಮಾಡಿದ್ದಾರೆ. ‘ಪ್ರಧಾನ ಮಂತ್ರಿ ಕಚೇರಿ’ ಎಂಬ ಪದವನ್ನು ತೆಗೆದು ಹಾಕಲಾಗಿದೆ. 13 ಕಡೆಗಳಲ್ಲಿ ಪ್ರಧಾನಿ ಮಂತ್ರಿ ಬದಲಿಗೆ ಬೇರೆ ಪದವನ್ನು ಹಾಕಲಾಗಿದೆ.

ಇದನ್ನೂ ಓದಿ: Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ವಿವಾದ ಹುಟ್ಟುಹಾಕಿರುವ ‘ಬೇಷರಂ ರಂಗ್​..’ ಹಾಡಿನ ಮೂರು ಕಡೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ದೀಪಿಕಾ ಪಡುಕೋಣೆ ಅವರ ಕೆಲವು ಕ್ಲೋಸಪ್​ ಶಾಟ್​ಗಳನ್ನು ತೆಗೆದುಹಾಕಲಾಗಿದೆ. ಕೇಸರಿ ಬಿಕಿನಿಗೆ ಸಂಬಂಧಿಸಿದಂತೆ ಯಾವ ಬದಲಾವಣೆ ಮಾಡಲಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಜನವರಿ 25ರಂದು ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ. ಚಿತ್ರದ ಒಟ್ಟು ಅವಧಿ 2 ಗಂಟೆ 26 ನಿಮಿಷ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Bajrang Dal: ‘ಪಠಾಣ್​’ ಚಿತ್ರದ ಪ್ರಚಾರಕ್ಕೆ ಭಜರಂಗ ದಳ ಅಡ್ಡಿ; ಚಿತ್ರಮಂದಿರಕ್ಕೆ ನುಗ್ಗಿ ದಾಂಧಲೆ

ನಿಯಮಾವಳಿಗಳ ಪ್ರಕಾರವೇ ಸೆನ್ಸಾರ್​ ಪ್ರಕ್ರಿಯೆ ಮಾಡಲಾಗಿದೆ ಎಂದು ಸೆನ್ಸಾರ್​ ಮಂಡಳಿ ಅಧ್ಯಕ್ಷ ಪ್ರಸೂನ್​ ಜೋಶಿ ಹೇಳಿದ್ದಾರೆ. ‘ಪಠಾಣ್​’ ಚಿತ್ರದ ಶೀರ್ಷಿಕೆ ಬದಲಾಗಬೇಕು ಎಂದು ಕೆಲವರು ಒತ್ತಾಯ ಹೇರಿದ್ದರು. ಆದರೆ ಶೀರ್ಷಿಕೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಜನವರಿ 25ರಂದು ಅದ್ದೂರಿಯಾಗಿ ಈ ಸಿನಿಮಾ ರಿಲೀಸ್​ ಆಗಲಿದೆ.

‘ಪಠಾಣ್​’ ಚಿತ್ರಕ್ಕೆ ಭಜರಂಗ ದಳದ ವಿರೋಧ:

ಭಜರಂಗ ದಳ ಕಾರ್ಯಕರ್ತರು ‘ಪಠಾಣ್​’ ಪ್ರಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಗುಜರಾತ್​ನಲ್ಲಿ ನಡೆದಿದೆ. ಚಿತ್ರಮಂದಿರವೊಂದರಲ್ಲಿ ಈ ಚಿತ್ರದ ಪೋಸ್ಟರ್​ ಮತ್ತು ಸ್ಟ್ಯಾಂಡಿಗಳನ್ನು ಹಾಕಲಾಗಿತ್ತು. ಅದನ್ನು ಕಿತ್ತು ಹಾಕುವ ಮೂಲಕ ಭಜರಂಗ ದಳದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ