Shah Rukh Khan: 2000 ರೂಪಾಯಿ ಮೀರಿತು ‘ಪಠಾಣ್​’ ಟಿಕೆಟ್​ ದರ; ಮುಗಿಬಿದ್ದು ಬುಕ್​ ಮಾಡಿದ ಅಪ್ಪಟ ಅಭಿಮಾನಿಗಳು

Pathaan Movie Ticket: ‘ಪಠಾಣ್​’ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಲು ಫ್ಯಾನ್ಸ್​ ಸಜ್ಜಾಗಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು ಮತ್ತು ತಮಿಳು ವರ್ಷನ್​ನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ.

Shah Rukh Khan: 2000 ರೂಪಾಯಿ ಮೀರಿತು ‘ಪಠಾಣ್​’ ಟಿಕೆಟ್​ ದರ; ಮುಗಿಬಿದ್ದು ಬುಕ್​ ಮಾಡಿದ ಅಪ್ಪಟ ಅಭಿಮಾನಿಗಳು
‘ಪಠಾಣ್’ ಸಿನಿಮಾ ಪೋಸ್ಟರ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 20, 2023 | 7:12 AM

ಬಾಲಿವುಡ್​ನ ಖ್ಯಾತ ನಟ ಶಾರುಖ್​ ಖಾನ್​ (Shah Rukh Khan) ಅವರನ್ನು ಕೆಲವು ಮಂದಿ ವಿರೋಧಿಸುತ್ತಾರೆ. ಆದರೆ ಅವರನ್ನು ಪ್ರೀತಿಸುವ ಅಭಿಮಾನಿ ಬಳಗ ದೊಡ್ಡದಿದೆ. ಬರೋಬ್ಬರಿ ನಾಲ್ಕು ವರ್ಷದ ಬಳಿಕ ಶಾರುಖ್​ ಖಾನ್​ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಅವರು ನಟಿಸಿರುವ ಬಹುನಿರೀಕ್ಷಿತ ‘ಪಠಾಣ್​’ ಸಿನಿಮಾ (Pathaan Movie) ಜನವರಿ 25ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಈಗಾಗಲೇ ಈ ಚಿತ್ರಕ್ಕೆ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಓಪನ್​ ಆಗಿದೆ. ಇದು ಹೈವೋಲ್ಟೇಜ್​ ಸಿನಿಮಾ ಆದ್ದರಿಂದ ಟಿಕೆಟ್​ ದರ ಕೂಡ ಜಾಸ್ತಿ ಆಗಿದೆ. ದೆಹಲಿ, ಮುಂಬೈನ ಕೆಲವು ಚಿತ್ರಮಂದಿರಗಳಲ್ಲಿ ‘ಪಠಾಣ್​’ ಟಿಕೆಟ್​ ಬೆಲೆ (Pathaan Movie Ticket Price) 2 ಸಾವಿರ ರೂಪಾಯಿ ದಾಟಿದೆ. ಆದರೂ ಕೂಡ ಅಪ್ಪಟ ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಬುಕ್​ ಮಾಡಿದ್ದಾರೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ.

ಶಾರುಖ್​ ಖಾನ್​ ಅವರಿಗೆ ಈ ಸಿನಿಮಾದ ಗೆಲುವು ಬಹಳ ಮುಖ್ಯವಾಗಲಿದೆ. ಈ ಹಿಂದೆ ಅವರು ನಟಿಸಿದ್ದ ‘ಜೀರೋ’ ಚಿತ್ರ  ಹೀನಾಯವಾಗಿ ಸೋತಿತ್ತು. ಆ ಬಳಿಕ ಅವರು ನಾಲ್ಕು ವರ್ಷ ಗ್ಯಾಪ್​ ತೆಗೆದುಕೊಂಡರು. ಈಗ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡುತ್ತಿದ್ದಾರೆ. ‘ಪಠಾಣ್​’ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಲು ಫ್ಯಾನ್ಸ್​ ಸಜ್ಜಾಗಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು ಮತ್ತು ತಮಿಳು ವರ್ಷನ್​ನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ.

ಇದನ್ನೂ ಓದಿ: Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ

ಇದನ್ನೂ ಓದಿ
Image
Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ
Image
Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
Image
Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ
Image
Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

ದೆಹಲಿಯ ಕೆಲವು ಐಮ್ಯಾಕ್ಸ್​ ಸ್ಕ್ರೀನ್​ಗಳಲ್ಲಿ ‘ಪಠಾಣ್​’ ಚಿತ್ರದ ಟಿಕೆಟ್​ ಬೆಲೆ 2,200 ರೂಪಾಯಿ ಇದೆ. ಆದರೂ ಕೂಡ ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. 1000 ರೂಪಾಯಿ ಟಿಕೆಟ್​ಗಳನ್ನು ಕೂಡ ಜನರು ಮುಗಿಬಿದ್ದು ಬುಕ್​ ಮಾಡುತ್ತಿದ್ದಾರೆ. ಮುಂಬೈನಲ್ಲೂ ಕ್ರೇಜ್​ ಜೋರಾಗಿದ್ದು, ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಟಿಕೆಟ್​ಗಳು ಭರ್ಜರಿಯಾಗಿ ಮಾರಾಟವಾಗುತ್ತಿವೆ.

ಇದನ್ನೂ ಓದಿ: Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​

ಬೆಂಗಳೂರಿನಲ್ಲೂ ಶಾರುಖ್​ ಖಾನ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇಲ್ಲಿಯೂ ಕೂಡ 900 ರೂಪಾಯಿ ಬೆಲೆಯ ಟಿಕೆಟ್​ಗಳು ಸೋಲ್ಡ್​ ಔಟ್​ ಆಗುತ್ತಿವೆ. ಮೊದಲ ದಿನ ಈ ಸಿನಿಮಾಗೆ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ

‘ಪಠಾಣ್​’ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಜಾನ್​ ಅಬ್ರಾಹಂ ಅವರಿಗೆ ಈ ಚಿತ್ರದಲ್ಲಿ ವಿಲನ್​ ಪಾತ್ರವಿದೆ. ಈ ಸಿನಿಮಾದ ಟ್ರೇಲರ್​ ಧೂಳೆಬ್ಬಿಸಿದೆ. ‘ಬೇಷರಂ ರಂಗ್​..’ ಹಾಗೂ ‘ಜೂಮೇ ಜೋ ಪಠಾಣ್​..’ ಹಾಡುಗಳು ಶಾರುಖ್​ ಅಭಿಮಾನಿಗಳ ಮನ ಗೆದ್ದಿವೆ. ಸಿನಿಮಾವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Fri, 20 January 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ