AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ದಿನ ಏಪ್ರಿಲ್​ 14ಕ್ಕೂ ಮೊದಲೇ ಶಾಹಿದ್ ಕಪೂರ್ ಮನೆಗೆ ಬಂತು 3 ಕೋಟಿ ರೂ. ಕಾರು

ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಐಷಾರಾಮಿ ಕಾರು ಖರೀದಿ ಮಾಡೋಕೆ ಇಷ್ಟಪಡುತ್ತಾರೆ. ಹಲವು ಸೆಲೆಬ್ರಿಟಿಗಳ ಬಳಿ ದೊಡ್ಡ ಕಾರ್​ ಕಲೆಕ್ಷನ್ ಇದೆ. ಇದಕ್ಕೆ ಶಾಹಿದ್​ ಕೂಡ ಹೊರತಾಗಿಲ್ಲ.

ವಿಶೇಷ ದಿನ ಏಪ್ರಿಲ್​ 14ಕ್ಕೂ ಮೊದಲೇ ಶಾಹಿದ್ ಕಪೂರ್ ಮನೆಗೆ ಬಂತು 3 ಕೋಟಿ ರೂ. ಕಾರು
TV9 Web
| Edited By: |

Updated on: Apr 02, 2022 | 5:01 PM

Share

ಶಾಹಿದ್ ಕಪೂರ್ (Shahid Kapoor)  ಅವರಿಗೆ ಏಪ್ರಿಲ್​ 14 ವಿಶೇಷ ದಿನ. ಅದಕ್ಕೆ ಕಾರಣ ‘ಜೆರ್ಸಿ’ ಸಿನಿಮಾ (Jersey Movie). ಅವರ ನಟನೆಯ ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್ ಆಗೋಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಅದಕ್ಕೂ ಮೊದಲೇ ಶಾಹಿದ್ ಕಪೂರ್ ಮನೆಗೆ ಐಷಾರಾಮಿ ಕಾರು (Laxury car) ಬಂದಿದೆ. ಇದರ ಬೆಲೆ 3 ಕೋಟಿ ರೂಪಾಯಿ. ಈ ವಿಡಿಯೋವನ್ನು ಶಾಹಿದ್ ಕಪೂರ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ವಿಡಿಯೋ ನೋಡಿ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಐಷಾರಾಮಿ ಕಾರು ಖರೀದಿ ಮಾಡೋಕೆ ಇಷ್ಟಪಡುತ್ತಾರೆ. ಹಲವು ಸೆಲೆಬ್ರಿಟಿಗಳ ಬಳಿ ದೊಡ್ಡ ಕಾರ್​ ಕಲೆಕ್ಷನ್ ಇದೆ. ಇದಕ್ಕೆ ಶಾಹಿದ್​ ಕೂಡ ಹೊರತಾಗಿಲ್ಲ. ಅವರ ಬಳಿ ಈಗಾಗಲೇ ಹಲವು ಐಷಾರಾಮಿ ಕಾರುಗಳಿವೆ. ಇದಕ್ಕೆ ಈಗ ಹೊಸ ಸೇರ್ಪಡೆ ಆಗಿದೆ. ಅವರು ಮರ್ಸಿಡಿಸ್-ಮೇಬ್ಯಾಕ್ ಎಸ್​580 ಕಾರನ್ನು ಖರೀದಿ ಮಾಡಿದ್ದಾರೆ. ಈ ಕಾರಿನ ಎಕ್ಸ್​ ಶೋರೂಂ ಬೆಲೆ 2.79 ಕೋಟಿ ರೂಪಾಯಿ. ಆನ್​ರೋಡ್​ ಬೆಲೆ 3 ಕೋಟಿ ರೂಪಾಯಿ ದಾಟಲಿದೆ.

ಶಾಹಿದ್ ಅವರು ಕಾರಿನ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕ ಅಭಿಮಾನಿಗಳು ಶಾಹಿದ್​ಗೆ ಶುಭಾಶಯ ತಿಳಿಸಿದ್ದಾರೆ. ಇನ್ನೂ ಕೆಲವರು ಶಾಹಿದ್ ಕಪೂರ್ ಅವರ ಸಿನಿಮಾ ‘ಜೆರ್ಸಿ’ಗಾಗಿ ಕಾಯುತ್ತಿರುವ ಬಗ್ಗೆ ಹೇಳಿಕೊಂಡಿದ್ದಾರೆ.

ತೆಲುಗಿನ ‘ಜೆರ್ಸಿ’ ಸಿನಿಮಾ ಅದೇ ಹೆಸರಿನಲ್ಲಿ ಹಿಂದಿಗೆ ರಿಮೇಕ್ ಆಗಿದೆ. ಶಾಹಿದ್ ಅವರು ಕ್ರಿಕೆಟರ್ ಆಗಿ ಕಾಣಿಸಿಕೊಂಡಿದ್ದಾರೆ. ತೆಲುಗಿನಲ್ಲಿ ನಾನಿ ಮಾಡಿದ್ದ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ರಿಲೀಸ್ ಆಗುತ್ತಿದೆ. ಇದೇ ದಿನ ಕನ್ನಡದ ‘ಕೆಜಿಎಫ್​ 2’ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ಎರಡೂ ಸಿನಿಮಾಗಳ ನಡುವೆ ಭರ್ಜರಿ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಟ್ಟೆ ಧರಿಸದೇ ರಸ್ತೆಗೆ ಬಂದ್ರಾ ಶಾಹಿದ್​ ಕಪೂರ್​ ಪತ್ನಿ ಮೀರಾ ರಜಪೂತ್​? ನೆಟ್ಟಿಗರಿಂದ ವ್ಯಂಗ್ಯದ ಪ್ರಶ್ನೆ

ಕೊರೊನಾ ಮಧ್ಯೆಯೂ ಹೊಸ ಪ್ರಯೋಗಕ್ಕೆ ಮುಂದಾದ ಶಾಹಿದ್ ಕಪೂರ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್