AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shahid Kapoor: ಫಿಲ್ಮ್​ ಫೆಸ್ಟಿವಲ್​ ವೇದಿಕೆಯಲ್ಲಿ ಡ್ಯಾನ್ಸ್​ ಮಾಡುವಾಗ ಜಾರಿ ಬಿದ್ದ ನಟ ಶಾಹಿದ್​ ಕಪೂರ್​

ಶಾಹಿದ್​ ಕಪೂರ್​ ಅವರು ಕೆಳಗೆ ಬಿದ್ದಾಗ ಜನರೆಲ್ಲರೂ ಜೋರಾಗಿ ಕಿರುಚಿದರು. ಅವರಿಗೆ ಏನಾಯಿತೋ ಏನೋ ಎಂದು ಒಂದು ಕ್ಷಣ ಆತಂಕ ಆಗಿದ್ದು ನಿಜ. ಆದರೆ ಕೂಡಲೇ ಅವರು ಎದ್ದು ನಿಂತಿದ್ದು ನೋಡಿ ಎಲ್ಲರೂ ನಿಟ್ಟುಸಿರು ಬಿಟ್ಟರು. ಡ್ಯಾನ್ಸ್​ ಮುಗಿದ ಬಳಿಕ ತಾವು ಬಿದ್ದ ಜಾಗವನ್ನು ಶಾಹಿದ್​ ಕಪೂರ್​ ಮತ್ತೊಮ್ಮೆ ಪರಿಶೀಲಿಸಿದರು.

Shahid Kapoor: ಫಿಲ್ಮ್​ ಫೆಸ್ಟಿವಲ್​ ವೇದಿಕೆಯಲ್ಲಿ ಡ್ಯಾನ್ಸ್​ ಮಾಡುವಾಗ ಜಾರಿ ಬಿದ್ದ ನಟ ಶಾಹಿದ್​ ಕಪೂರ್​
ಶಾಹಿದ್ ಕಪೂರ್​
ಮದನ್​ ಕುಮಾರ್​
|

Updated on: Nov 21, 2023 | 7:25 PM

Share

54ನೇ ‘ಭಾರತೀಯ ಅಂತಾರಾಷ್ಟ್ರೀಯ ಸಿನಿಮೋತ್ಸವ’ (IFFI) ಗೋವಾದಲ್ಲಿ ಸೋಮವಾರ (ನವೆಂಬರ್​ 20) ಆರಂಭ ಆಗಿದೆ. ಉದ್ಘಾಟನಾ ಸಮಾರಂಭ ಸಖತ್​ ಕಲರ್​ಫುಲ್​ ಆಗಿತ್ತು. ಈ ವೇಳೆ ಕೆಲವು ಸೆಲೆಬ್ರಿಟಿಗಳು ವೇದಿಕೆ ಮೇಲೆ ಮನರಂಜನಾ ಕಾರ್ಯಕ್ರಮ ನೀಡಿದ್ದಾರೆ. ಖ್ಯಾತ ಬಾಲಿವುಡ್​ ನಟ ಶಾಹಿದ್​ ಕಪೂರ್ (Shahid Kapoor) ಅವರು ಡ್ಯಾನ್ಸ್​ ಮಾಡಿದ್ದಾರೆ. ಬಹಳ ಉತ್ಸಾಹದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಅವರು ಬ್ಯಾಲೆನ್ಸ್​ ತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ (Shahid Kapoor Viral Video) ವೈರಲ್​ ಆಗಿದೆ. ಅದನ್ನು ನೋಡಿ ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಕಪ್ಪು ಬಣ್ಣದ ಸ್ಲೀವ್​ಲೆಸ್​ ಶರ್ಟ್​, ಪ್ಯಾಂಟ್​ ಮತ್ತು ಸನ್​ಗ್ಲಾಸ್​ ಧರಿಸಿ ಶಾಹಿದ್​ ಕಪೂರ್​ ಅವರು ಡ್ಯಾನ್ಸ್​ ಮಾಡುತ್ತಿದ್ದರು. ಅವರ ಜೊತೆ ಇನ್ನುಳಿದ ಡ್ಯಾನ್ಸರ್​ಗಳು ಕೂಡ ಇದ್ದರು. ಎಲ್ಲರಿಗಿಂತ ಮುಂದಿನ ಸಾಲಿನಲ್ಲಿ ಶಾಹಿದ್​ ಕಪೂರ್​ ಇದ್ದರು. ಇನ್ನೇನು ಡ್ಯಾನ್ಸ್​ ಪೂರ್ಣಗೊಳ್ಳಬೇಕು ಎಂಬಷ್ಟರಲ್ಲಿ ಶಾಹಿದ್​ ಕಪೂರ್​ ಅವರು ಆಯ ತಪ್ಪಿ ಕೆಳಗೆ ಬಿದ್ದರು. ಆ ಕ್ಷಣದಲ್ಲಿ ಅವರು ಆತಂಕಕ್ಕೆ ಒಳಗಾಗಲಿಲ್ಲ. ಕೂಡಲೇ ಎದ್ದು ನಿಂತು ಇನ್ನುಳಿದ ಡ್ಯಾನ್ಸರ್​ಗಳ ಜೊತೆ ಸೇರಿಕೊಂಡು ನೃತ್ಯ ಪೂರ್ಣಗೊಳಿಸಿದರು.

ಇದನ್ನೂ ಓದಿ: ‘ಟೈಗರ್​ 3’ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡದಿದ್ದರೂ ‘ಟೈಗರ್​ 4’ ಬಗ್ಗೆ ಕನಸು ಕಂಡ ಸಲ್ಮಾನ್​ ಖಾನ್​

ಶಾಹಿದ್​ ಕಪೂರ್​ ಅವರು ಕೆಳಗೆ ಬಿದ್ದಾಗ ಜನರೆಲ್ಲರೂ ಜೋರಾಗಿ ಕಿರುಚಿದರು. ಅವರಿಗೆ ಏನಾಯಿತೋ ಏನೋ ಎಂದು ಒಂದು ಕ್ಷಣ ಆತಂಕ ಆಗಿದ್ದು ನಿಜ. ಆದರೆ ಕೂಡಲೇ ಶಾಹಿದ್​ ಕಪೂರ್​ ಅವರು ಎದ್ದು ನಿಂತಿದ್ದು ನೋಡಿ ಎಲ್ಲರೂ ನಿಟ್ಟುಸಿರು ಬಿಟ್ಟರು. ಡ್ಯಾನ್ಸ್​ ಮುಗಿದ ಬಳಿಕ ಶಾಹಿದ್​ ಕಪೂರ್ ಅವರು ತಾವು ಬಿದ್ದ ಜಾಗವನ್ನು ಮತ್ತೊಮ್ಮೆ ಪರಿಶೀಲಿಸಿದರು. ಜಾರಿ ಬೀಳಲು ಕಾರಣ ಏನಿರಬಹುದು ಎಂದು ಅವರು ಗಮನಿಸಿದರು. ತಮ್ಮನ್ನು ಹುರಿದುಂಬಿಸುತ್ತಿದ್ದ ಅಭಿಮಾನಿಗಳ ಕಡೆಗೆ ನೋಡಿ ಅವರು ನಗು ಚೆಲ್ಲಿದರು. ಅಲ್ಲದೇ, ಗಾಳಿಯಲ್ಲಿ ಮುತ್ತು ನೀಡಿದರು.

ಇದನ್ನೂ ಓದಿ: ಬಟ್ಟೆ ಧರಿಸದೇ ರಸ್ತೆಗೆ ಬಂದ್ರಾ ಶಾಹಿದ್​ ಕಪೂರ್​ ಪತ್ನಿ ಮೀರಾ ರಜಪೂತ್​? ನೆಟ್ಟಿಗರಿಂದ ವ್ಯಂಗ್ಯದ ಪ್ರಶ್ನೆ

‘ಪದ್ಮಾವತ್​’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಶಾಹಿದ್​ ಕಪೂರ್​ ಅವರು ಫೇಮಸ್​ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೇ ವೆಬ್​ ಸಿರೀಸ್​ಗಳಲ್ಲೂ ಅವರು ಜನಪ್ರಿಯತೆ ಗಳಿಸಿದ್ದಾರೆ. ಈಗ ಅವರು ‘ದೇವ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ಪೊಲೀಸ್​ ಅಧಿಕಾರಿಯ ಪಾತ್ರ ಇರಲಿದೆ. ಸದ್ಯಕ್ಕೆ ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿದ್ದು, 2024ರ ಅಕ್ಟೋಬರ್​ 11ರಂದು ಬಿಡುಗಡೆ ಆಗಲಿದೆ. ಇದೇ ಸಿನಿಮಾದಲ್ಲಿ ಪೂಜಾ ಹೆಗ್ಡೆ ಕೂಡ ನಟಿಸುತ್ತಿದ್ದಾರೆ. ಇದಲ್ಲದೇ ಕೃತಿ ಸನೋನ್​ ನಟನೆಯ ಇನ್ನೊಂದು ಸಿನಿಮಾದಲ್ಲೂ ಶಾಹಿದ್ ಕಪೂರ್​ ಅಭಿನಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​