AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡಗೆ ಕಿಸ್ ಮಾಡಿ ಥ್ಯಾಂಕ್ಸ್ ಹೇಳಿದ ಶಾಹಿದ್ ಕಪೂರ್

‘ಅಮೇಜಾನ್ ಪ್ರೈಮ್ ವಿಡಿಯೋ’ ಮಂಗಳವಾರ (ಮಾರ್ಚ್ 19) ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ವೇಳೆ ಮುಂಬರುವ ಸೀರಿಸ್ ಹಾಗೂ ಸಿನಿಮಾಗಳ ಅನಾವರಣ ಮಾಡಲಾಗಿದೆ. ಆಗ ಶಾಹಿದ್ ಹಾಗೂ ವಿಜಯ್ ಒಂದೇ ವೇದಿಕೆ ಏರುವ ಅವಕಾಶ ಸಿಕ್ಕಿತ್ತು. ಶಾಹಿದ್ ಅವರು ವಿಜಯ್​ನ ಹಗ್ ಮಾಡಿದ್ದಾರೆ. 

ವಿಜಯ್ ದೇವರಕೊಂಡಗೆ ಕಿಸ್ ಮಾಡಿ ಥ್ಯಾಂಕ್ಸ್ ಹೇಳಿದ ಶಾಹಿದ್ ಕಪೂರ್
ಶಾಹಿದ್-ವಿಜಯ್
ರಾಜೇಶ್ ದುಗ್ಗುಮನೆ
|

Updated on: Mar 20, 2024 | 10:34 AM

Share

ಶಾಹಿದ್ ಕಪೂರ್ (Shahid Kapoor) ಬಾಲಿವುಡ್​ನ ಸ್ಟಾರ್ ನಟ. ವಿಜಯ್ ದೇವರಕೊಂಡ ಅವರು ಟಾಲಿವುಡ್​ನಲ್ಲಿ ಫೇಮಸ್ ಆಗಿದ್ದಾರೆ. ಇಬ್ಬರ ಮಧ್ಯೆ ಒಂದು ಲಿಂಕ್ ಇದೆ. ಇದಕ್ಕೆ ಕಾರಣ ಆಗಿರೋದು ‘ಅರ್ಜುನ್ ರೆಡ್ಡಿ’ ಹಾಗೂ ‘ಕಬೀರ್ ಸಿಂಗ್’ ಸಿನಿಮಾ. ತೆಲುಗಿನಲ್ಲಿ ವಿಜಯ್ ದೇವರಕೊಂಡ ನಟಿಸಿದ ‘ಅರ್ಜುನ್ ರೆಡ್ಡಿ’ ಚಿತ್ರವನ್ನು ಹಿಂದಿಗೆ ‘ಕಬೀರ್ ಸಿಂಗ್’ ಆಗಿ ರಿಮೇಕ್ ಮಾಡಲಾಯಿತು. ಸತತ ಸೋಲು ಕಾಣುತ್ತಿದ್ದ ಶಾಹಿದ್​ಗೆ ದೊಡ್ಡ ಗೆಲುವು ತಂದುಕೊಟ್ಟಿದೆ ಈ ಚಿತ್ರ. ಹೀಗಾಗಿ ಶಾಹಿದ್ ಅವರು ವಿಜಯ್​ಗೆ ಕಿಸ್ ಮಾಡಿ ಧನ್ಯವಾದ ಹೇಳಿದ್ದಾರೆ.

‘ಅಮೇಜಾನ್ ಪ್ರೈಮ್ ವಿಡಿಯೋ’ ಮಂಗಳವಾರ (ಮಾರ್ಚ್ 19) ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ವೇಳೆ ಮುಂಬರುವ ಸೀರಿಸ್ ಹಾಗೂ ಸಿನಿಮಾಗಳ ಅನಾವರಣ ಮಾಡಲಾಗಿದೆ. ಆಗ ಶಾಹಿದ್ ಹಾಗೂ ವಿಜಯ್ ಒಂದೇ ವೇದಿಕೆ ಏರುವ ಅವಕಾಶ ಸಿಕ್ಕಿತ್ತು. ಶಾಹಿದ್ ಅವರು ವಿಜಯ್​ನ ಹಗ್ ಮಾಡಿದ್ದಾರೆ.  ‘ನಾನು ನಿಮಗೆ ಸಾಕಷ್ಟು ಪ್ರೀತಿ ಕೋಡಬೇಕು. ಅರ್ಜುನ್ ರೆಡ್ಡಿ ಇಲ್ಲದಿದ್ದರೆ ಕಬೀರ್ ಸಿಂಗ್ ಹುಟ್ಟುತ್ತಲೇ ಇರಲಿಲ್ಲ. ಧನ್ಯವಾದ ವಿಜಯ್’ ಎಂದಿದ್ದಾರೆ ಶಾಹಿದ್.

ಶಾಹಿದ್-ವಿಜಯ್ ಮಾತುಕತೆ

‘ಅರ್ಜುನ್ ರೆಡ್ಡಿ’ ಸಿನಿಮಾ 2017ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ವಿಜಯ್ ದೇವರಕೊಂಡ ಅವರ ಬದುಕನ್ನೇ ಬದಲಿಸಿತು ಈ ಚಿತ್ರ. ಸಖತ್ ರಗಡ್ ಆಗಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರವನ್ನು ಹಿಂದಿಗೆ ‘ಕಬೀರ್ ಸಿಂಗ್’ ಆಗಿ ರಿಮೇಕ್ ಮಾಡಲಾಯಿತು. ಈ ಚಿತ್ರ 379 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಶಾಹಿದ್ ಕಪೂರ್ ಅವರಿಗೆ ಎರಡನೇ ಹುಟ್ಟನ್ನು ಸಿನಿಮಾ ನೀಡಿತ್ತು.

ಇದನ್ನೂ ಓದಿ: ಶಾಹಿದ್ ಕಪೂರ್​​ ಜನ್ಮದಿನ: ಈ ಬಾಲಿವುಡ್ ಹೀರೋನ ಆಸ್ತಿ ಎಷ್ಟು ಕೋಟಿ ರೂಪಾಯಿ?

ಶಾಹಿದ್ ಕಪೂರ್ ಅವರು ಕನ್ನಡದ ನಿರ್ದೇಶಕ ಸಚಿನ್ ರವಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಅಶ್ವತ್ಥಾಮ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಬಗ್ಗೆ ಘೋಷಣೆ ಮಾಡಲಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಕನ್ನಡದಲ್ಲಿ ‘ಅವನೇ ಶ್ರೀಮನ್ನಾರಾಯಣ’ ಚಿತ್ರವನ್ನು ಸಚಿನ್ ರವಿ ನಿರ್ದೇಶನ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು