AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹೀರೋ ಜೊತೆ ನಟಿ ರಶ್ಮಿಕಾ ಮಂದಣ್ಣ ವಿಡಿಯೋ ಲೀಕ್

ರಶ್ಮಿಕಾ ಮಂದಣ್ಣ, ಶಾಹಿದ್ ಕಪೂರ್, ಕೃತಿ ಸನನ್ ಅವರು ಇಟಲಿಯಲ್ಲಿ ಇದ್ದಾರೆ. ಅವರ ಜೊತೆ ನಿರ್ದೇಶಕ ಹೋಮಿ ಅದಜಾನಿಯಾ ಕೂಡ ಬ್ಯುಸಿ ಆಗಿದ್ದಾರೆ. ಬಹುನಿರೀಕ್ಷಿತ ‘ಕಾಕ್​ಟೇಲ್ 2’ ಸಿನಿಮಾಗೆ ಇಟಲಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರೀಕರಣದ ವಿಡಿಯೋ ಲೀಕ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.

ಬಾಲಿವುಡ್ ಹೀರೋ ಜೊತೆ ನಟಿ ರಶ್ಮಿಕಾ ಮಂದಣ್ಣ ವಿಡಿಯೋ ಲೀಕ್
Shahid Kapoor, Rashmika Mandanna, Kriti Sanon
ಮದನ್​ ಕುಮಾರ್​
|

Updated on:Sep 26, 2025 | 6:39 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬ್ಯಾಕ್ ಟು ಬ್ಯಾಕ್ ಹಿಂದಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಅನಿಮಲ್’, ‘ಛಾವ’ ಸಿನಿಮಾಗಳ ಯಶಸ್ಸಿನ ಬಳಿಕ ಅವರಿಗೆ ಇದ್ದ ಬೇಡಿಕೆ ಡಬಲ್ ಆಯಿತು. ಹಾಗಾಗಿ ಬಾಲಿವುಡ್​ ಮಂದಿಗೆ ರಶ್ಮಿಕಾ ಮಂದಣ್ಣ ಫೇವರಿಟ್ ಆಗಿದ್ದಾರೆ. ಈಗ ಅವರು ಶಾಹಿದ್ ಕಪೂರ್ (Shahid Kapoor) ಜೊತೆ ಇರುವ ವಿಡಿಯೋ ಲೀಕ್ ಆಗಿದೆ. ಹಾಗಂತ ಇದು ಖಾಸಗಿ ಬದುಕಿನ ವಿಡಿಯೋ ಆಗಲ್ಲ. ಸಿನಿಮಾ ಶೂಟಿಂಗ್ ಸಂದರ್ಭದ ವಿಡಿಯೋ. ಹೌದು, ‘ಕಾಕ್​ಟೇಲ್​ 2’ (Cocktail 2) ಸಿನಿಮಾದಲ್ಲಿ ನಟಿಸುತ್ತಿರುವ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ ಹಾಗೂ ಕೃತಿ ಸನನ್ ಅವರ ಚಿತ್ರೀಕರಣದ ವಿಡಿಯೋ ಲೀಕ್ ಆಗಿದೆ.

ಹೋಮಿ ಅದಜಾನಿಯಾ ಅವರು ‘ಕಾಕ್​ಟೇಲ್ 2’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇಟಲಿಯಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ರಶ್ಮಿಕಾ ಮಂದಣ್ಣ, ಕೃತಿ ಸನನ್ ಮತ್ತು ಶಾಹಿದ್ ಕಪೂರ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಸಾಧ್ಯವಾದಷ್ಟು ಗೌಪ್ಯವಾಗಿ ಶೂಟಿಂಗ್ ಮಾಡಲು ಚಿತ್ರತಂಡ ಪ್ರಯತ್ನಿಸುತ್ತಿದೆ. ಹಾಗಿದ್ದರೂ ಕೂಡ ಒಂದು ವಿಡಿಯೋ ಲೀಕ್ ಆಗಿದೆ.

ಇಟಲಿಯ ಸಿಸಿಲಿಯಲ್ಲಿ ‘ಕಾಕ್​ಟೇಲ್ 2’ ಸಿನಿಮಾದ ಸಾಂಗ್ ಶೂಟಿಂಗ್ ಮಾಡಲಾಗುತ್ತಿದೆ. ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ, ಕೃತಿ ಸನನ್ ಅವರ ಕೈ-ಕೈ ಹಿಡಿದು ಬರುತ್ತಿರುವ ದೃಶ್ಯ ಲೀಕ್ ಆಗಿದೆ. ಇನ್ಮುಂದೆ ಚಿತ್ರತಂಡದವರು ಎಚ್ಚರಿಕೆ ವಹಿಸಬೇಕಾಗುತ್ತದೆ. ಸಾಂಗ್ ಮಾತ್ರವಲ್ಲದೇ ಸಿನಿಮಾದ ಅನೇಕ ದೃಶ್ಯಗಳನ್ನು ಸಿಸಿಲಿಯಲ್ಲೇ ಶೂಟ್ ಮಾಡಲಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ:

‘ಕಾಕ್​ಟೇಲ್’ ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ಅದಕ್ಕೂ ಹೋಮಿ ಅದಜಾನಿಯಾ ಅವರೇ ನಿರ್ದೇಶನ ಮಾಡಿದ್ದರು. ಸೈಫ್ ಅಲಿ ಖಾನ್, ದೀಪಿಕಾ ಪಡುಕೋಣೆ, ಡಯಾನಾ ಪೆಂಟಿ ಅವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದರು. ಈಗ ಶಾಹಿದ್ ಕಪೂರ್, ಕೃತಿ ಸನನ್ ಹಾಗೂ ರಶ್ಮಿಕಾ ಮಂದಣ್ಣ ಅವರಿಗೆ ಸೀಕ್ವೆಲ್​​ನಲ್ಲಿ ನಟಿಸುವ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: ಭಾವಿ ಅತ್ತೆಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಶ್ಮಿಕಾ ಮಂದಣ್ಣ

ಇಟಲಿಯಲ್ಲಿ ಶೂಟಿಂಗ್ ಮುಗಿಸಿದ ಬಳಿಕ ಅಕ್ಟೋಬರ್​​ನಲ್ಲಿ ‘ಕಾಕ್​ಟೇಲ್​ 2’ ತಂಡ ಮುಂಬೈಗೆ ಮರಳಲಿದೆ. ದೀಪಾವಳಿ ಹಬ್ಬ ಮುಗಿದ ಬಳಿಕ 2ನೇ ಹಂತದ ಶೂಟಿಂಗ್ ಶುರು ಆಗಲಿದೆ. 2026ರಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇದಲ್ಲದೇ ಇನ್ನೂ ಹಲವು ಸಿನಿಮಾದ ಅವಕಾಶಗಳು ರಶ್ಮಿಕಾ ಮಂದಣ್ಣ ಅವರಿಗೆ ಸಿಗುತ್ತಿವೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​​ಗಳಿಗೆ ಅವರು ಪ್ರಚಾರ ರಾಯಭಾರಿ ಕೂಡ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:56 pm, Fri, 26 September 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ