AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಾಜಿ ಗೆಳತಿಯರಿಂದ ಮೋಸ ಹೋಗಿದ್ದೇನೆ’; ಒಪ್ಪಿಕೊಂಡ ಶಾಹಿದ್ ಕಪೂರ್

ಸೆಲೆಬ್ರಿಟಿಗಳು ಮಾಜಿ ಲವರ್​ಗಳ ಜೊತೆ ಮಾತನಾಡೋದು ಕಡಿಮೆ. ಆದರೆ, ಈಗ ಶಾಹಿದ್ ಕಪೂರ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮೀರಾ ಕಪೂರ್ ಅವರನ್ನು ಮದುವೆ ಆಗುವುದಕ್ಕೂ ಮೊದಲು ಶಾಹಿದ್ ಕಪೂರ್ ಅವರು ಕೆಲವು ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದರು. ಆದರೆ, ಈ ವೇಳೆ ಅವರು ಮೋಸ ಹೋಗಿದ್ದರಂತೆ.

‘ನನ್ನ ಮಾಜಿ ಗೆಳತಿಯರಿಂದ ಮೋಸ ಹೋಗಿದ್ದೇನೆ’; ಒಪ್ಪಿಕೊಂಡ ಶಾಹಿದ್ ಕಪೂರ್
ಶಾಹಿದ್
ರಾಜೇಶ್ ದುಗ್ಗುಮನೆ
|

Updated on: May 06, 2024 | 8:29 AM

Share

ಶಾಹಿದ್ ಕಪೂರ್ (Shahid Kapoor) ಅವರು ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಹೊಂದಿದ್ದಾರೆ. ಸಿನಿಮಾ ಜೊತೆ ವೆಬ್ ಸೀರಿಸ್​ಗಳಲ್ಲೂ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರು ಮೀರಾ ರಜಪೂತ್ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಮೀರಾ ಸಿಗುವುದಕ್ಕೂ ಮೊದಲು ಶಾಹಿದ್ ಕಪೂರ್ ಅವರು ಕೆಲವು ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದರು. ಆದರೆ, ಈ ವೇಳೆ ಅವರು ಮೋಸ ಹೋಗಿದ್ದರಂತೆ. ಈ ಬಗ್ಗೆ ಶಾಹಿದ್ ಮಾತನಾಡಿದ್ದಾರೆ.

‘ಪ್ರಿತಿಯಲ್ಲಿ ಇದ್ದಾಗ ಎಷ್ಟು ಬಾರಿ ದ್ರೋಹಕ್ಕೆ ಒಳಗಾಗಿದ್ದೀರಿ’ ಎಂದು ಶಾಹಿದ್ ಅವರಿಗೆ ಸಂದರ್ಶನ ಒಂದರಲ್ಲಿ ಕೇಳಲಾಗಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ‘ನನಗೆ ಒಂದರ ಬಗ್ಗೆ ಖಾತ್ರಿ ಇದೆ. ಮತ್ತೊಂದು ಹುಡುಗಿ ಬಗ್ಗೆ ಇನ್ನೂ ಅನುಮಾನ ಇದೆ. ಹೀಗೆ ಒಂದಿಬ್ಬರು ಮೋಸ್ ಮಾಡಿದ್ದಾರೆ’ ಎಂದು ಶಾಹಿದ್ ಕಪೂರ್ ಹೇಳಿದ್ದಾರೆ. ಆದರೆ, ಶಾಹಿದ್ ಅವರು ಯಾವುದೇ ಹುಡುಗಿಯರ ಹೆಸರನ್ನು ತೆಗೆದುಕೊಂಡಿಲ್ಲ.

ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮೊದಲು ಶಾಹಿದ್ ಕಪೂರ್ ಅವರು ಕರೀನಾ ಕಪೂರ್, ಪ್ರಿಯಾಂಕಾ ಚೋಪ್ರಾ ಮೊದಲಾದವರು ಜೊತೆ ಸುತ್ತಾಡಿದ್ದರು ಎನ್ನಲಾಗಿದೆ. ಆದರೆ, ಈ ವಿಚಾರವನ್ನು ಅವರು ಒಪ್ಪಿಕೊಂಡಿಲ್ಲ. ಇದನ್ನು ಅವರು ಅಲ್ಲಗಳೆಯುತ್ತಲೇ ಬಂದಿದ್ದಾರೆ. ಇವರಲ್ಲಿ ಯಾರಾದರೂ ಶಾಹಿದ್​ಗೆ ಮೋಸ ಮಾಡಿದರೇ ಎನ್ನುವ ಅನುಮಾನ ಮೂಡಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಬಹುಶಃ ಕರೀನಾ ಕಪೂರ್ ಪ್ರಿಯಾಂಕಾ ಚೋಪ್ರಾ ಬಗ್ಗೆ ಶಾಹಿದ್ ಹೇಳಿರಬಹುದು’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಶಾಹಿದ್ ಕಪೂರ್​​ ಜನ್ಮದಿನ: ಈ ಬಾಲಿವುಡ್ ಹೀರೋನ ಆಸ್ತಿ ಎಷ್ಟು ಕೋಟಿ ರೂಪಾಯಿ?

ಶಾಹಿದ್ ಕಪೂರ್ ಅವರು ಮೀರಾ ಅವರನ್ನು 2015ರಲ್ಲಿ ಮದುವೆ ಆದರು. ಅವರೊಂದಿಗೆ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳು. ಸಿನಿಮಾ ವಿಚಾರಕ್ಕೆ ಬರೋದಾದರೆ ಈ ವರ್ಷ ಅವರ ನಟನೆಯ ‘ತೆರಿ ಬಾತೋ ಮೇ ಐಸಾ ಉಲ್ಜಾ ಜಿಯಾ’ ಈ ವರ್ಷ ತೆರೆಗೆ ಬಂದಿದೆ. ‘ದೇವ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು