AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತೇ ಹೋಯ್ತು ಶಿವಾಜಿ ಬಯೋಪಿಕ್; ಕಾರಣ ತಿಳಿಸಿದ ನಿರ್ದೇಶಕ

ಒಂದೆಡೆ ರಿಷಬ್ ಶೆಟ್ಟಿ ಅವರು ಛತ್ರಪತಿ ಶಿವಾಜಿ ಬಯೋಪಿಕ್​ನಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಇನ್ನೊಂದೆಡೆ ಬಾಲಿವುಡ್ ನಟ ಶಾಹಿದ್ ಕಪೂರ್ ಕೂಡ ಶಿವಾಜಿ ಬಯೋಪಿಕ್ ಮಾಡಬೇಕಿತ್ತು. ಆ ಸಿನಿಮಾಗೆ ಅಮಿತ್ ರೈ ನಿರ್ದೇಶನ ಮಾಡಬೇಕಿತ್ತು. ಆದರೆ ಶಾಹಿದ್ ಕಪೂರ್ ಮಾಡಬೇಕಿದ್ದ ಸಿನಿಮಾ ನಿಂತುಹೋಗಿದೆ.

ನಿಂತೇ ಹೋಯ್ತು ಶಿವಾಜಿ ಬಯೋಪಿಕ್; ಕಾರಣ ತಿಳಿಸಿದ ನಿರ್ದೇಶಕ
Shahid Kapoor
ಮದನ್​ ಕುಮಾರ್​
|

Updated on: Jul 23, 2025 | 6:51 PM

Share

ಛತ್ರಪತಿ ಶಿವಾಜಿ ಮಹಾರಾಜ್ ಕುರಿತು ಸಿನಿಮಾ (Chhatrapati Shivaji Maharaj Biopic) ಮಾಡಲು ಹಲವು ನಿರ್ದೇಶಕರು ಆಸಕ್ತಿ ತೋರಿಸುತ್ತಿದ್ದಾರೆ. ಆದರೆ ಎಲ್ಲರಿಗೂ ಅದನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಈ ವರ್ಷ ಛತ್ರಪತಿ ಸಂಭಾಜಿ ಮಹಾರಾಜ್ ಜೀವನ ಆಧಾರಿತ ‘ಛಾವ’ ಸಿನಿಮಾ ಸೂಪರ್ ಹಿಟ್ ಆಯಿತು. ಅದರ ಬೆನ್ನಲ್ಲೇ ಹಿಂದಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕುರಿತ ಸಿನಿಮಾ ಸೆಟ್ಟೇರಲಿದೆ ಎಂದು ಪ್ರೇಕ್ಷಕರು ಕಾಯುತ್ತಿದ್ದರು. ಆ ಸಿನಿಮಾಗೆ ಶಾಹಿದ್ ಕಪೂರ್ (Shahid Kapoor) ಹೀರೋ ಎಂಬುದು ಕೂಡ ನಿಶ್ಚಯವಾಗಿತ್ತು. ಆದರೆ ಈಗ ಆ ಸಿನಿಮಾ ನಿಂತುಹೋಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಸ್ವತಃ ನಿರ್ದೇಶಕ ಅಮಿತ್ ರೈ (Amit Rai) ಅವರು ಈ ಬಗ್ಗೆ ಮಾತನಾಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಮಿತ್ ರೈ ಅವರು ಶಾಕಿಂಗ್ ಸಂಗತಿಗಳನ್ನು ತಿಳಿಸಿದ್ದಾರೆ. ಚಿತ್ರರಂಗದಲ್ಲಿ ಇರುವ ಕ್ರೂರ ವ್ಯವಸ್ಥೆಯಿಂದಾಗಿ ಶಿವಾಜಿ ಮಹಾರಾಜ್ ಬಯೋಪಿಕ್ ನಿಂತುಹೋಯ್ತು ಎಂದು ಅವರು ಹೇಳಿದ್ದಾರೆ. ಈ ಮೊದಲು ಅಮಿತ್ ರೈ ಅವರು ‘ಓಹ್ ಮೈ ಗಾಡ್ 2’ ಸಿನಿಮಾ ಮಾಡಿದ್ದರು. ಶಿವಾಜಿ ಬಯೋಪಿಕ್ ಮಾಡಬೇಕು ಎಂಬ ಅವರ ಕನಸು ಭಗ್ನವಾಗಿದೆ.

‘ಇಲ್ಲಿನ ವ್ಯವಸ್ಥೆ ಕ್ರೂರವಾಗಿದೆ. ಈ ಮೊದಲಿನ ಸಿನಿಮಾ ಸಕ್ಸಸ್ ಆಗಿದ್ದರೂ ಕೂಡ ಇಲ್ಲಿನವರಿಗೆ ಅದು ಸಾಕಾಗುವುದಿಲ್ಲ. ಹಾಗಾದ್ರೆ ಒಬ್ಬ ನಿರ್ದೇಶಕ ಹೇಗೆ ಕೆಲಸ ಮಾಡಬೇಕು? ನೀವು ಒಂದು ಕಥೆಯ ಜೊತೆ 5 ವರ್ಷ ಜೀವಿಸಿರುತ್ತೀರಿ. ಆದರೆ ಯಾರೋ ಬಂದು ಕೆಲವೇ ನಿಮಿಷಗಳಲ್ಲಿ ಇದು ಸರಿ ಇಲ್ಲ, ಅದು ಸರಿಯಿಲ್ಲ ಎನ್ನುತ್ತಾರೆ’ ಎಂದು ಅಮಿತ್ ರೈ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

‘ಬಾಕ್ಸ್ ಆಫೀಸ್​ನಲ್ಲಿ ಯಾವುದು ಗೆಲ್ಲುತ್ತಿದೆ ಎಂಬುದರ ಮೇಲೆ ಮಾತ್ರ ನಟರು ಕೆಲಸ ಮಾಡುತ್ತಾರೆ. ಕೆಲವು ನಟರು ಮಾತ್ರ ನನ್ನ ಜೊತೆ ಪ್ರಾಮಾಣಿಕವಾಗಿ ಇದ್ದಾರೆ. ಸಮಾಜದ ಬಗ್ಗೆ ಮಾತನಾಡುವ ಸಿನಿಮಾಗಳಲ್ಲಿ ನಟಿಸಲು ಕಲಾವಿದರಿಗೆ ಆಸಕ್ತಿ ಇಲ್ಲ. ಅದರ ಬದಲು ಲವ್ ಸ್ಟೋರಿ ಮಾಡಬೇಕು ಎನ್ನುತ್ತಾರೆ. ನಾನು ಲವ್ ಸ್ಟೋರಿ ತೆಗೆದುಕೊಂಡು ಹೋದಾಗ ಇದು ದುಬಾರಿ ಆಯ್ತು ಎನ್ನುತ್ತಾರೆ. ಅವರ ಮಾನದಂಡ ಬದಲಾಗುತ್ತಲೇ ಇರುತ್ತದೆ. ನೀವು ಅವರ ಸರ್ಕಲ್​ನಲ್ಲಿ ಇದ್ದರೆ ಮಾತ್ರ ನೀವು ಹೇಳಿದ್ದನ್ನು ಒಪ್ಪಿಕೊಳ್ಳುತ್ತಾರೆ’ ಎಂದು ಅಮಿತ್ ರೈ ಹೇಳಿದ್ದಾರೆ.

ಇದನ್ನೂ ಓದಿ: ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ನಾಗರಾಜ್ ವಾರ್ನಿಂಗ್

ತಾವು ಅಂದುಕೊಂಡ ರೀತಿಯಲ್ಲಿ ಸಿನಿಮಾ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರ ಅಮಿತ್ ರೈ ಅವರಿಗೆ ಇದೆ. ಹಾಗಾಗಿ, ತಮ್ಮ ಮುಂದಿನ ಸಿನಿಮಾವನ್ನು ತಾವೇ ನಿರ್ಮಾಣ ಮಾಡಬೇಕು ಎಂದು ಅವರು ನಿರ್ಧರಿಸಿದ್ದಾರೆ. ಅವರಿಗೆ ಸ್ನೇಹಿತರು ಸಾಥ್ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು