AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಕಚ್ಚಿತ್ತು ಮತ್ತೊಂದು ಬಾಲಿವುಡ್​​ನ ಬಿಗ್​ ಬಜೆಟ್ ಸಿನಿಮಾ; ರಿಮೇಕ್ ಮಾಡಿ ಕೈ ಸುಟ್ಟುಕೊಂಡ ನಿರ್ಮಾಪಕ

ಶಾಹಿದ್ ಕಪೂರ್ ನಟನೆಯ ‘ದೇವಿ’ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಭಾರೀ ಸೋಲು ಕಂಡಿದೆ. ಮಲಯಾಳಂ ಚಿತ್ರದ ರಿಮೇಕ್ ಆಗಿರುವ ಈ ಚಿತ್ರವು 50 ಕೋಟಿ ರೂಪಾಯಿ ಬಜೆಟ್ ಹೊಂದಿದ್ದರೂ, ಮೊದಲ ದಿನ ಕೇವಲ 5 ಕೋಟಿ ರೂಪಾಯಿ ಮಾತ್ರ ಗಳಿಸಿದೆ. ಇದು ಬಾಲಿವುಡ್​ನಲ್ಲಿ ರಿಮೇಕ್ ಚಿತ್ರಗಳಿಗೆ ಇರುವ ಸಮಸ್ಯೆಯನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ.

ನೆಲಕಚ್ಚಿತ್ತು ಮತ್ತೊಂದು ಬಾಲಿವುಡ್​​ನ ಬಿಗ್​ ಬಜೆಟ್ ಸಿನಿಮಾ; ರಿಮೇಕ್ ಮಾಡಿ ಕೈ ಸುಟ್ಟುಕೊಂಡ ನಿರ್ಮಾಪಕ
ಶಾಹಿದ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Feb 01, 2025 | 2:30 PM

Share

ಬಾಲಿವುಡ್​ನಲ್ಲಿ ರಿಮೇಕ್ ಸಿನಿಮಾಗಳಿಗೆ ಬರವಿಲ್ಲ. ದಕ್ಷಿಣದ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಬಾಲಿವುಡ್ ಮಂದಿ ರಿಮೇಕ್ ಮಾಡಿದ್ದಾರೆ. ಈ ರೀತಿ ಮಾಡಿ ಕೈ ಸುಟ್ಟುಕೊಂಡವರೇ ಹೆಚ್ಚು. ಈಗ ಬಾಲಿವುಡ್​ನಲ್ಲಿ ಮತ್ತೊಂದು ಬಿಗ್ ಬಜೆಟ್ ಚಿತ್ರ ಫ್ಲಾಪ್ ಆಗೋ ಸೂಚನೆ ಸಿಕ್ಕಿದೆ. ಅದು ಶಾಹಿದ್ ಕಪೂರ್ ನಟನೆಯ ‘ದೇವ’ ಚಿತ್ರ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 5 ಕೋಟಿ ರೂಪಾಯಿ.

ಶಾಹಿದ್ ಕಪೂರ್ ಅವರು ಬೇಡಿಕೆಯ ಹೀರೋ ಎನಿಸಿಕೊಂಡಿದ್ದರು, ಆದರೆ, ನಂತರ ಕೆಲವು ಫ್ಲಾಪ್ ಕೊಟ್ಟು ಅವರು ಕಷ್ಟಕ್ಕೆ ಸಿಲುಕಿದ್ದರು. ‘ಕಬೀರ್ ಸಿಂಗ್’ ಗೆಲುವಿನ ಬಳಿಕ ಅವರು ಮತ್ತೆ ಬಾಲಿವುಡ್​ನಲ್ಲಿ ಮಾರುಕಟ್ಟೆ ಸೃಷ್ಟಿಸಿಕೊಂಡರು. ಈ ಕಾರಣಕ್ಕೆ ಹಲವು ನಿರ್ಮಾಪಕರು ಅವರ ಕಾಲ್​​ಶೀಟ್​ಗಾಗಿ ಬೇಡಿಕೆ ಇಟ್ಟಿದ್ದರು. ಅದೇ ರೀತಿ ‘ದೇವ’ ಚಿತ್ರವನ್ನು ಬಿಗ್ ಬಜೆಟ್​ನಲ್ಲಿ ಮಾಡಲಾಯಿತು. ಆದರೆ, ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗುವ ಸೂಚನೆ ಸಿಕ್ಕಿದೆ.

ಜನವರಿ 31ರಂದು ರಿಲೀಸ್ ಆದ ‘ದೇವ’ ಸಿನಿಮಾದ ಬಜೆಟ್ 50 ಕೋಟಿ ರೂಪಾಯಿ. ಆದರೆ, ಸಿನಿಮಾ ಮೊದಲ ದಿನ ಗಳಿಸಿದ್ದು 5 ಕೋಟಿ ರೂಪಾಯಿ ಮಾತ್ರ. ಹೀಗೆ ಮುಂದುವರಿದರೆ ಸಿನಿಮಾ ನಷ್ಟ ಅನುಭವಿಸುವ ಸೂಚನೆ ಸಿಕ್ಕಿದೆ. ಇದು ಮಲಯಾಳಂನ ‘ಮುಂಬೈ ಪೊಲೀಸ್’ ಚಿತ್ರದ ರಿಮೇಕ್. ಬಾಲಿವುಡ್​ನವರು ಮತ್ತೊಂದು ರಿಮೇಕ್ ಮಾಡಿ ಸೋಲು ಅನುಭವಿಸಿದರು ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ಮಾಜಿ ಪ್ರೇಯಸಿಯ ಪತಿಗೆ ಚೂರಿ ಇರಿತ ಆಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಶಾಹಿದ್ ಕಪೂರ್

ಜೀ ಸ್ಟುಡಿಯೋ ಹಾಗೂ ರಾಯ್ ಕಪೂರ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಸಿದ್ದಾರ್ಥ್ ರಾಯ್ ಕಪೂರ್ ಹಾಗೂ ಉಮೇಶ್ ಬನ್ಸಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಸಿನಿಮಾ ನಿರ್ದೇಶಕ ರೋಷನ್ ಆ್ಯಂಡ್ರೀವ್ಸ್​ ‘ದೇವ’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಸತತ ಸೋಲು ಕಂಡಿರೋ ಪೂಜಾ ಹೆಗ್ಡೆ ಈ ಚಿತ್ರಕ್ಕೆ ನಾಯಕಿ. ಅವರು ಈ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿ ಇದ್ದರು. ಆದರೆ, ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ