ನೆಲಕಚ್ಚಿತ್ತು ಮತ್ತೊಂದು ಬಾಲಿವುಡ್​​ನ ಬಿಗ್​ ಬಜೆಟ್ ಸಿನಿಮಾ; ರಿಮೇಕ್ ಮಾಡಿ ಕೈ ಸುಟ್ಟುಕೊಂಡ ನಿರ್ಮಾಪಕ

ಶಾಹಿದ್ ಕಪೂರ್ ನಟನೆಯ ‘ದೇವಿ’ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಭಾರೀ ಸೋಲು ಕಂಡಿದೆ. ಮಲಯಾಳಂ ಚಿತ್ರದ ರಿಮೇಕ್ ಆಗಿರುವ ಈ ಚಿತ್ರವು 50 ಕೋಟಿ ರೂಪಾಯಿ ಬಜೆಟ್ ಹೊಂದಿದ್ದರೂ, ಮೊದಲ ದಿನ ಕೇವಲ 5 ಕೋಟಿ ರೂಪಾಯಿ ಮಾತ್ರ ಗಳಿಸಿದೆ. ಇದು ಬಾಲಿವುಡ್​ನಲ್ಲಿ ರಿಮೇಕ್ ಚಿತ್ರಗಳಿಗೆ ಇರುವ ಸಮಸ್ಯೆಯನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ.

ನೆಲಕಚ್ಚಿತ್ತು ಮತ್ತೊಂದು ಬಾಲಿವುಡ್​​ನ ಬಿಗ್​ ಬಜೆಟ್ ಸಿನಿಮಾ; ರಿಮೇಕ್ ಮಾಡಿ ಕೈ ಸುಟ್ಟುಕೊಂಡ ನಿರ್ಮಾಪಕ
ಶಾಹಿದ್ ಕಪೂರ್
Follow us
ರಾಜೇಶ್ ದುಗ್ಗುಮನೆ
|

Updated on: Feb 01, 2025 | 2:30 PM

ಬಾಲಿವುಡ್​ನಲ್ಲಿ ರಿಮೇಕ್ ಸಿನಿಮಾಗಳಿಗೆ ಬರವಿಲ್ಲ. ದಕ್ಷಿಣದ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಬಾಲಿವುಡ್ ಮಂದಿ ರಿಮೇಕ್ ಮಾಡಿದ್ದಾರೆ. ಈ ರೀತಿ ಮಾಡಿ ಕೈ ಸುಟ್ಟುಕೊಂಡವರೇ ಹೆಚ್ಚು. ಈಗ ಬಾಲಿವುಡ್​ನಲ್ಲಿ ಮತ್ತೊಂದು ಬಿಗ್ ಬಜೆಟ್ ಚಿತ್ರ ಫ್ಲಾಪ್ ಆಗೋ ಸೂಚನೆ ಸಿಕ್ಕಿದೆ. ಅದು ಶಾಹಿದ್ ಕಪೂರ್ ನಟನೆಯ ‘ದೇವ’ ಚಿತ್ರ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 5 ಕೋಟಿ ರೂಪಾಯಿ.

ಶಾಹಿದ್ ಕಪೂರ್ ಅವರು ಬೇಡಿಕೆಯ ಹೀರೋ ಎನಿಸಿಕೊಂಡಿದ್ದರು, ಆದರೆ, ನಂತರ ಕೆಲವು ಫ್ಲಾಪ್ ಕೊಟ್ಟು ಅವರು ಕಷ್ಟಕ್ಕೆ ಸಿಲುಕಿದ್ದರು. ‘ಕಬೀರ್ ಸಿಂಗ್’ ಗೆಲುವಿನ ಬಳಿಕ ಅವರು ಮತ್ತೆ ಬಾಲಿವುಡ್​ನಲ್ಲಿ ಮಾರುಕಟ್ಟೆ ಸೃಷ್ಟಿಸಿಕೊಂಡರು. ಈ ಕಾರಣಕ್ಕೆ ಹಲವು ನಿರ್ಮಾಪಕರು ಅವರ ಕಾಲ್​​ಶೀಟ್​ಗಾಗಿ ಬೇಡಿಕೆ ಇಟ್ಟಿದ್ದರು. ಅದೇ ರೀತಿ ‘ದೇವ’ ಚಿತ್ರವನ್ನು ಬಿಗ್ ಬಜೆಟ್​ನಲ್ಲಿ ಮಾಡಲಾಯಿತು. ಆದರೆ, ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗುವ ಸೂಚನೆ ಸಿಕ್ಕಿದೆ.

ಜನವರಿ 31ರಂದು ರಿಲೀಸ್ ಆದ ‘ದೇವ’ ಸಿನಿಮಾದ ಬಜೆಟ್ 50 ಕೋಟಿ ರೂಪಾಯಿ. ಆದರೆ, ಸಿನಿಮಾ ಮೊದಲ ದಿನ ಗಳಿಸಿದ್ದು 5 ಕೋಟಿ ರೂಪಾಯಿ ಮಾತ್ರ. ಹೀಗೆ ಮುಂದುವರಿದರೆ ಸಿನಿಮಾ ನಷ್ಟ ಅನುಭವಿಸುವ ಸೂಚನೆ ಸಿಕ್ಕಿದೆ. ಇದು ಮಲಯಾಳಂನ ‘ಮುಂಬೈ ಪೊಲೀಸ್’ ಚಿತ್ರದ ರಿಮೇಕ್. ಬಾಲಿವುಡ್​ನವರು ಮತ್ತೊಂದು ರಿಮೇಕ್ ಮಾಡಿ ಸೋಲು ಅನುಭವಿಸಿದರು ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ಮಾಜಿ ಪ್ರೇಯಸಿಯ ಪತಿಗೆ ಚೂರಿ ಇರಿತ ಆಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಶಾಹಿದ್ ಕಪೂರ್

ಜೀ ಸ್ಟುಡಿಯೋ ಹಾಗೂ ರಾಯ್ ಕಪೂರ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಸಿದ್ದಾರ್ಥ್ ರಾಯ್ ಕಪೂರ್ ಹಾಗೂ ಉಮೇಶ್ ಬನ್ಸಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಸಿನಿಮಾ ನಿರ್ದೇಶಕ ರೋಷನ್ ಆ್ಯಂಡ್ರೀವ್ಸ್​ ‘ದೇವ’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಸತತ ಸೋಲು ಕಂಡಿರೋ ಪೂಜಾ ಹೆಗ್ಡೆ ಈ ಚಿತ್ರಕ್ಕೆ ನಾಯಕಿ. ಅವರು ಈ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿ ಇದ್ದರು. ಆದರೆ, ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುಧಾಕರ್ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗಲ್ಲ: ಮುನಿರತ್ನ
ಸುಧಾಕರ್ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗಲ್ಲ: ಮುನಿರತ್ನ
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್