AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಕಚ್ಚಿತ್ತು ಮತ್ತೊಂದು ಬಾಲಿವುಡ್​​ನ ಬಿಗ್​ ಬಜೆಟ್ ಸಿನಿಮಾ; ರಿಮೇಕ್ ಮಾಡಿ ಕೈ ಸುಟ್ಟುಕೊಂಡ ನಿರ್ಮಾಪಕ

ಶಾಹಿದ್ ಕಪೂರ್ ನಟನೆಯ ‘ದೇವಿ’ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಭಾರೀ ಸೋಲು ಕಂಡಿದೆ. ಮಲಯಾಳಂ ಚಿತ್ರದ ರಿಮೇಕ್ ಆಗಿರುವ ಈ ಚಿತ್ರವು 50 ಕೋಟಿ ರೂಪಾಯಿ ಬಜೆಟ್ ಹೊಂದಿದ್ದರೂ, ಮೊದಲ ದಿನ ಕೇವಲ 5 ಕೋಟಿ ರೂಪಾಯಿ ಮಾತ್ರ ಗಳಿಸಿದೆ. ಇದು ಬಾಲಿವುಡ್​ನಲ್ಲಿ ರಿಮೇಕ್ ಚಿತ್ರಗಳಿಗೆ ಇರುವ ಸಮಸ್ಯೆಯನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ.

ನೆಲಕಚ್ಚಿತ್ತು ಮತ್ತೊಂದು ಬಾಲಿವುಡ್​​ನ ಬಿಗ್​ ಬಜೆಟ್ ಸಿನಿಮಾ; ರಿಮೇಕ್ ಮಾಡಿ ಕೈ ಸುಟ್ಟುಕೊಂಡ ನಿರ್ಮಾಪಕ
ಶಾಹಿದ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Feb 01, 2025 | 2:30 PM

Share

ಬಾಲಿವುಡ್​ನಲ್ಲಿ ರಿಮೇಕ್ ಸಿನಿಮಾಗಳಿಗೆ ಬರವಿಲ್ಲ. ದಕ್ಷಿಣದ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಬಾಲಿವುಡ್ ಮಂದಿ ರಿಮೇಕ್ ಮಾಡಿದ್ದಾರೆ. ಈ ರೀತಿ ಮಾಡಿ ಕೈ ಸುಟ್ಟುಕೊಂಡವರೇ ಹೆಚ್ಚು. ಈಗ ಬಾಲಿವುಡ್​ನಲ್ಲಿ ಮತ್ತೊಂದು ಬಿಗ್ ಬಜೆಟ್ ಚಿತ್ರ ಫ್ಲಾಪ್ ಆಗೋ ಸೂಚನೆ ಸಿಕ್ಕಿದೆ. ಅದು ಶಾಹಿದ್ ಕಪೂರ್ ನಟನೆಯ ‘ದೇವ’ ಚಿತ್ರ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 5 ಕೋಟಿ ರೂಪಾಯಿ.

ಶಾಹಿದ್ ಕಪೂರ್ ಅವರು ಬೇಡಿಕೆಯ ಹೀರೋ ಎನಿಸಿಕೊಂಡಿದ್ದರು, ಆದರೆ, ನಂತರ ಕೆಲವು ಫ್ಲಾಪ್ ಕೊಟ್ಟು ಅವರು ಕಷ್ಟಕ್ಕೆ ಸಿಲುಕಿದ್ದರು. ‘ಕಬೀರ್ ಸಿಂಗ್’ ಗೆಲುವಿನ ಬಳಿಕ ಅವರು ಮತ್ತೆ ಬಾಲಿವುಡ್​ನಲ್ಲಿ ಮಾರುಕಟ್ಟೆ ಸೃಷ್ಟಿಸಿಕೊಂಡರು. ಈ ಕಾರಣಕ್ಕೆ ಹಲವು ನಿರ್ಮಾಪಕರು ಅವರ ಕಾಲ್​​ಶೀಟ್​ಗಾಗಿ ಬೇಡಿಕೆ ಇಟ್ಟಿದ್ದರು. ಅದೇ ರೀತಿ ‘ದೇವ’ ಚಿತ್ರವನ್ನು ಬಿಗ್ ಬಜೆಟ್​ನಲ್ಲಿ ಮಾಡಲಾಯಿತು. ಆದರೆ, ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗುವ ಸೂಚನೆ ಸಿಕ್ಕಿದೆ.

ಜನವರಿ 31ರಂದು ರಿಲೀಸ್ ಆದ ‘ದೇವ’ ಸಿನಿಮಾದ ಬಜೆಟ್ 50 ಕೋಟಿ ರೂಪಾಯಿ. ಆದರೆ, ಸಿನಿಮಾ ಮೊದಲ ದಿನ ಗಳಿಸಿದ್ದು 5 ಕೋಟಿ ರೂಪಾಯಿ ಮಾತ್ರ. ಹೀಗೆ ಮುಂದುವರಿದರೆ ಸಿನಿಮಾ ನಷ್ಟ ಅನುಭವಿಸುವ ಸೂಚನೆ ಸಿಕ್ಕಿದೆ. ಇದು ಮಲಯಾಳಂನ ‘ಮುಂಬೈ ಪೊಲೀಸ್’ ಚಿತ್ರದ ರಿಮೇಕ್. ಬಾಲಿವುಡ್​ನವರು ಮತ್ತೊಂದು ರಿಮೇಕ್ ಮಾಡಿ ಸೋಲು ಅನುಭವಿಸಿದರು ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ಮಾಜಿ ಪ್ರೇಯಸಿಯ ಪತಿಗೆ ಚೂರಿ ಇರಿತ ಆಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಶಾಹಿದ್ ಕಪೂರ್

ಜೀ ಸ್ಟುಡಿಯೋ ಹಾಗೂ ರಾಯ್ ಕಪೂರ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಸಿದ್ದಾರ್ಥ್ ರಾಯ್ ಕಪೂರ್ ಹಾಗೂ ಉಮೇಶ್ ಬನ್ಸಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಸಿನಿಮಾ ನಿರ್ದೇಶಕ ರೋಷನ್ ಆ್ಯಂಡ್ರೀವ್ಸ್​ ‘ದೇವ’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಸತತ ಸೋಲು ಕಂಡಿರೋ ಪೂಜಾ ಹೆಗ್ಡೆ ಈ ಚಿತ್ರಕ್ಕೆ ನಾಯಕಿ. ಅವರು ಈ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿ ಇದ್ದರು. ಆದರೆ, ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ