AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಕಚ್ಚಿತ್ತು ಮತ್ತೊಂದು ಬಾಲಿವುಡ್​​ನ ಬಿಗ್​ ಬಜೆಟ್ ಸಿನಿಮಾ; ರಿಮೇಕ್ ಮಾಡಿ ಕೈ ಸುಟ್ಟುಕೊಂಡ ನಿರ್ಮಾಪಕ

ಶಾಹಿದ್ ಕಪೂರ್ ನಟನೆಯ ‘ದೇವಿ’ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಭಾರೀ ಸೋಲು ಕಂಡಿದೆ. ಮಲಯಾಳಂ ಚಿತ್ರದ ರಿಮೇಕ್ ಆಗಿರುವ ಈ ಚಿತ್ರವು 50 ಕೋಟಿ ರೂಪಾಯಿ ಬಜೆಟ್ ಹೊಂದಿದ್ದರೂ, ಮೊದಲ ದಿನ ಕೇವಲ 5 ಕೋಟಿ ರೂಪಾಯಿ ಮಾತ್ರ ಗಳಿಸಿದೆ. ಇದು ಬಾಲಿವುಡ್​ನಲ್ಲಿ ರಿಮೇಕ್ ಚಿತ್ರಗಳಿಗೆ ಇರುವ ಸಮಸ್ಯೆಯನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ.

ನೆಲಕಚ್ಚಿತ್ತು ಮತ್ತೊಂದು ಬಾಲಿವುಡ್​​ನ ಬಿಗ್​ ಬಜೆಟ್ ಸಿನಿಮಾ; ರಿಮೇಕ್ ಮಾಡಿ ಕೈ ಸುಟ್ಟುಕೊಂಡ ನಿರ್ಮಾಪಕ
ಶಾಹಿದ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Feb 01, 2025 | 2:30 PM

Share

ಬಾಲಿವುಡ್​ನಲ್ಲಿ ರಿಮೇಕ್ ಸಿನಿಮಾಗಳಿಗೆ ಬರವಿಲ್ಲ. ದಕ್ಷಿಣದ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಬಾಲಿವುಡ್ ಮಂದಿ ರಿಮೇಕ್ ಮಾಡಿದ್ದಾರೆ. ಈ ರೀತಿ ಮಾಡಿ ಕೈ ಸುಟ್ಟುಕೊಂಡವರೇ ಹೆಚ್ಚು. ಈಗ ಬಾಲಿವುಡ್​ನಲ್ಲಿ ಮತ್ತೊಂದು ಬಿಗ್ ಬಜೆಟ್ ಚಿತ್ರ ಫ್ಲಾಪ್ ಆಗೋ ಸೂಚನೆ ಸಿಕ್ಕಿದೆ. ಅದು ಶಾಹಿದ್ ಕಪೂರ್ ನಟನೆಯ ‘ದೇವ’ ಚಿತ್ರ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 5 ಕೋಟಿ ರೂಪಾಯಿ.

ಶಾಹಿದ್ ಕಪೂರ್ ಅವರು ಬೇಡಿಕೆಯ ಹೀರೋ ಎನಿಸಿಕೊಂಡಿದ್ದರು, ಆದರೆ, ನಂತರ ಕೆಲವು ಫ್ಲಾಪ್ ಕೊಟ್ಟು ಅವರು ಕಷ್ಟಕ್ಕೆ ಸಿಲುಕಿದ್ದರು. ‘ಕಬೀರ್ ಸಿಂಗ್’ ಗೆಲುವಿನ ಬಳಿಕ ಅವರು ಮತ್ತೆ ಬಾಲಿವುಡ್​ನಲ್ಲಿ ಮಾರುಕಟ್ಟೆ ಸೃಷ್ಟಿಸಿಕೊಂಡರು. ಈ ಕಾರಣಕ್ಕೆ ಹಲವು ನಿರ್ಮಾಪಕರು ಅವರ ಕಾಲ್​​ಶೀಟ್​ಗಾಗಿ ಬೇಡಿಕೆ ಇಟ್ಟಿದ್ದರು. ಅದೇ ರೀತಿ ‘ದೇವ’ ಚಿತ್ರವನ್ನು ಬಿಗ್ ಬಜೆಟ್​ನಲ್ಲಿ ಮಾಡಲಾಯಿತು. ಆದರೆ, ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗುವ ಸೂಚನೆ ಸಿಕ್ಕಿದೆ.

ಜನವರಿ 31ರಂದು ರಿಲೀಸ್ ಆದ ‘ದೇವ’ ಸಿನಿಮಾದ ಬಜೆಟ್ 50 ಕೋಟಿ ರೂಪಾಯಿ. ಆದರೆ, ಸಿನಿಮಾ ಮೊದಲ ದಿನ ಗಳಿಸಿದ್ದು 5 ಕೋಟಿ ರೂಪಾಯಿ ಮಾತ್ರ. ಹೀಗೆ ಮುಂದುವರಿದರೆ ಸಿನಿಮಾ ನಷ್ಟ ಅನುಭವಿಸುವ ಸೂಚನೆ ಸಿಕ್ಕಿದೆ. ಇದು ಮಲಯಾಳಂನ ‘ಮುಂಬೈ ಪೊಲೀಸ್’ ಚಿತ್ರದ ರಿಮೇಕ್. ಬಾಲಿವುಡ್​ನವರು ಮತ್ತೊಂದು ರಿಮೇಕ್ ಮಾಡಿ ಸೋಲು ಅನುಭವಿಸಿದರು ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ಮಾಜಿ ಪ್ರೇಯಸಿಯ ಪತಿಗೆ ಚೂರಿ ಇರಿತ ಆಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಶಾಹಿದ್ ಕಪೂರ್

ಜೀ ಸ್ಟುಡಿಯೋ ಹಾಗೂ ರಾಯ್ ಕಪೂರ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಸಿದ್ದಾರ್ಥ್ ರಾಯ್ ಕಪೂರ್ ಹಾಗೂ ಉಮೇಶ್ ಬನ್ಸಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಸಿನಿಮಾ ನಿರ್ದೇಶಕ ರೋಷನ್ ಆ್ಯಂಡ್ರೀವ್ಸ್​ ‘ದೇವ’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಸತತ ಸೋಲು ಕಂಡಿರೋ ಪೂಜಾ ಹೆಗ್ಡೆ ಈ ಚಿತ್ರಕ್ಕೆ ನಾಯಕಿ. ಅವರು ಈ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿ ಇದ್ದರು. ಆದರೆ, ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ