AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಕಾಡಿದ ಕೊವಿಡ್​ ಭಯ; ಖ್ಯಾತ ನಟನ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ

ಕೊವಿಡ್​ ಪ್ರಕರಣ ಹೆಚ್ಚುತ್ತಿದೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಇನ್ನೂ ಕೆಲವು ರಾಜ್ಯಗಳ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ.

ಬಾಲಿವುಡ್​ಗೆ ಕಾಡಿದ ಕೊವಿಡ್​ ಭಯ; ಖ್ಯಾತ ನಟನ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ
ಶಾಹಿದ್​ ಕಪೂರ್
TV9 Web
| Edited By: |

Updated on:Dec 28, 2021 | 8:51 PM

Share

ಕೊರೊನಾ ಭಯ ಮತ್ತೆ ಹೆಚ್ಚಾಗಿದೆ. ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊವಿಡ್​ ರೂಪಾಂತರಿ ಒಮಿಕ್ರಾನ್​ ಪ್ರಭಾವ ಕೂಡ ಹೆಚ್ಚುತ್ತಿದೆ. ಈ ಬೆಳವಣಿಗೆಯಿಂದ ಚಿತ್ರರಂಗದಲ್ಲಿ ಮತ್ತೆ ಅನಿಶ್ಚಿತತೆ ಕಾಡುವ ಭಯ ಎದುರಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ರಿಲೀಸ್​ ಆಗಬೇಕಿದ್ದ ಚಿತ್ರಗಳು ಈಗ ಮುಂದೂಡಲ್ಪಡುತ್ತಿವೆ. ಬಾಲಿವುಡ್​ನ ಖ್ಯಾತ ಹೀರೋ ಶಾಹಿದ್​ ಕಪೂರ್​ ಸಿನಿಮಾ ಕೂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ಸಿನಿಮಾ ರಿಲೀಸ್​ಗೆ ಎರಡು ದಿನ ಬಾಕಿ ಇರುವಾಗ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸಿನಿಮಾದ ನಿರ್ಮಾಪಕರಲ್ಲೊಬ್ಬರಾದ ಅಲ್ಲು ಅರವಿಂದ್ ಘೋಷಣೆ ಮಾಡಿದ್ದಾರೆ. 

ತೆಲುಗಿನ ‘ಅರ್ಜುನ್​ ರೆಡ್ಡಿ’ ಚಿತ್ರವನ್ನು​ ‘ಕಬೀರ್​ ಸಿಂಗ್’ ಆಗಿ ಹಿಂದಿಗೆ ರಿಮೇಕ್​ ಮಾಡಲಾಗಿತ್ತು. ಇದು ಶಾಹಿದ್​ ಕಪೂರ್​ಗೆ ದೊಡ್ಡ ಮಟ್ಟದಲ್ಲಿ ಹಿಟ್​ ನೀಡಿತ್ತು. ಆ ಬಳಿಕ ನಾನಿ ನಟನೆಯ​ ‘ಜೆರ್ಸಿ’ ಚಿತ್ರದ ರಿಮೇಕ್​ನಲ್ಲಿ ಶಾಹಿದ್​ ಕಪೂರ್ ನಟಿಸಿದ್ದಾರೆ. ಇದಕ್ಕೆ ಹಿಂದಿಯಲ್ಲೂ ‘ಜೆರ್ಸಿ’ ಎಂದು ಇಡಲಾಗಿದೆ. ಈ ಸಿನಿಮಾ ಕ್ರಿಕೆಟರ್​ ಓರ್ವನ ಕಥೆಯನ್ನು ಹೇಳುತ್ತಿದೆ. ತೆಲುಗಿನಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ನಾನಿ ಹಾಗೂ ಶ್ರದ್ಧಾ ಶ್ರೀನಾಥ್​ ತೆಲುಗಿನಲ್ಲಿ ಬಣ್ಣ ಹಚ್ಚಿದ್ದರು. ಹಿಂದಿ ರಿಮೇಕ್​ನಲ್ಲಿ  ಶಾಹಿದ್​ ಕ್ರಿಕೆಟರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಕೊವಿಡ್​ ಪ್ರಕರಣ ಹೆಚ್ಚುತ್ತಿದೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಇನ್ನೂ ಕೆಲವು ರಾಜ್ಯಗಳ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಇದೇ ನಿಯಮ ಜಾರಿಗೆ ಬಂದರೂ ಅಚ್ಚರಿ ಏನಿಲ್ಲ. ಹೀಗಾಗಿ, ‘ಜೆರ್ಸಿ’ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ದಿಲ್​ ರಾಜು ಪ್ರೊಡಕ್ಷನ್​ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಅಲ್ಲು ಅರವಿಂದ್​ ಇದಕ್ಕೆ ಕೊಲಾಬರೇಷನ್​ ಮಾಡಿಕೊಂಡಿದ್ದಾರೆ. ಸಿನಿಮಾ ರಿಲೀಸ್​ ಮುಂದೂಡಲ್ಪಟ್ಟ ಬಗ್ಗೆ ಅವರೇ ಘೋಷಣೆ ಮಾಡಿದ್ದಾರೆ.

‘ಜೆರ್ಸಿ’ ಸಿನಿಮಾವನ್ನು ಗೌತಮ್​ ಹಿಂದಿಗೆ ರಿಮೇಕ್​ ಮಾಡಿದ್ದಾರೆ. ಪಂಕಜ್​ ಕಪೂರ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೃನಾಲ್​ ಠಾಕೂರ್​ ಸಿನಿಮಾಗೆ ನಾಯಕಿ. ಟಾಲಿವುಡ್​ನಲ್ಲಿ ತೆರೆಕಂಡ ‘ಅರ್ಜುನ್​ ರೆಡ್ಡಿ’ ಸಿನಿಮಾ ಬಾಲಿವುಡ್​ನಲ್ಲಿ ‘ಕಬೀರ್​ ಸಿಂಗ್’​ ಆಗಿ ತೆರೆಗೆ ಬಂದಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹೀಗಾಗಿ ತೆಲುಗಿನ ‘ಜೆರ್ಸಿ’ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಗಿದೆ.

ಇದನ್ನೂ ಓದಿ: ವಿಚ್ಛೇದನದ ನಂತರ ಮೊದಲ ಬಾರಿಗೆ ಒಂದೇ ಕಡೆ ಕಾಣಿಸಿಕೊಂಡ ಸಮಂತಾ-ನಾಗ ಚೈತನ್ಯ; ಹೇಗಿತ್ತು ರಿಯಾಕ್ಷನ್​?

ಮತ್ತೆ ಮುಂದೂಡಲ್ಪಡುತ್ತೆ ‘ಆರ್​ಆರ್​ಆರ್​’ ರಿಲೀಸ್ ದಿನಾಂಕ? ರಾಜಮೌಳಿ ತಂಡಕ್ಕೆ ಮೊದಲ ಹಿನ್ನಡೆ

Published On - 6:39 pm, Tue, 28 December 21

Follow Us
Web contact
Web contact

TV9 Kannada

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ