AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣಕ್ಕೆ ಬಂದ ಮತ್ತೊಬ್ಬ ಬಾಲಿವುಡ್​​ ಸ್ಟಾರ್ ನಟ

ಸಲ್ಮಾನ್ ಖಾನ್, ಆಮಿರ್ ಖಾನ್, ಸೈಫ್ ಅಲಿ ಖಾನ್, ಅಮಿತಾಬ್ ಬಚ್ಚನ್, ಹೃತಿಕ್ ರೋಷನ್ ಅಂಥಹವರೇ ಇದೀಗ ದಕ್ಷಿಣ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಬಾಲಿವುಡ್​ನ ಮತ್ತೊಬ್ಬ ಸ್ಟಾರ್ ನಟ ದಕ್ಷಿಣದ ಸಿನಿಮಾನಲ್ಲಿ ನಟಿಸಲು ಬರುತ್ತಿದ್ದಾರೆ. ಈ ಹಿಂದೆ ದಕ್ಷಿಣದ ಕೆಲ ಸಿನಿಮಾಗಳ ರೀಮೇಕ್​​ನಲ್ಲಿ ನಟಿಸಿ ಸೂಪರ್ ಹಿಟ್ ನೀಡಿರುವ ಈ ನಟ ಇದೀಗ ನೇರವಾಗಿ ದಕ್ಷಿಣ ಭಾರತದ ಸಿನಿಮಾನಲ್ಲಿ ನಟನೆ ಮಾಡಲಿದ್ದಾರೆ ಯಾರದು?

ದಕ್ಷಿಣಕ್ಕೆ ಬಂದ ಮತ್ತೊಬ್ಬ ಬಾಲಿವುಡ್​​ ಸ್ಟಾರ್ ನಟ
Jr Ntr Shahid Kapoor
ಮಂಜುನಾಥ ಸಿ.
|

Updated on: Sep 04, 2026 | 2:07 PM

Share

ಮುಖ್ಯಾಂಶಗಳು

  • ದಕ್ಷಿಣದತ್ತ ಬಂದ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟ
  • ತೆಲುಗು ಸಿನಿಮಾನಲ್ಲಿ ನಟಿಸಲಿರುವ ಶಾಹಿದ್ ಕಪೂರ್
  • ಶಾಹಿದ್ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ.

ದಕ್ಷಿಣದ ಸಿನಿಮಾಗಳಲ್ಲಿ ಬಾಲಿವುಡ್ (Bollywood)​ ನಟ-ನಟಿಯರು ನಟಿಸುವುದೇ ಅಪರೂಪವಾಗಿತ್ತು. ನಟಿಸಿದರೂ ಸಹ ಅವರ ವರಸೆ ಬೇರೆಯದ್ದೇ ರೀತಿ ಇರುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ನಟ-ನಟಿಯರು ಸಹ ದಕ್ಷಿಣದ ಸಿನಿಮಾಗಳಲ್ಲಿ ನಟಿಸಲು ತುದಿಗಾಲಲ್ಲಿ ನಿಂತಿದ್ದಾರೆ. ದಕ್ಷಿಣದ ಚಿತ್ರರಂಗದ ಬಗ್ಗೆ ಉಡಾಫೆ ಭಾವ ಹೊಂದಿದ್ದ ಸಲ್ಮಾನ್ ಖಾನ್, ಆಮಿರ್ ಖಾನ್, ಸೈಫ್ ಅಲಿ ಖಾನ್, ಅಮಿತಾಬ್ ಬಚ್ಚನ್, ಹೃತಿಕ್ ರೋಷನ್ ಅಂಥಹವರೇ ಇದೀಗ ದಕ್ಷಿಣ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟ ದಕ್ಷಿಣದತ್ತ ಬಂದಿದ್ದು, ಇದು ಅವರ ಮೊದಲ ದಕ್ಷಿಣ ಭಾರತದ ಸಿನಿಮಾ ಆಗಿದೆ.

ಜೂನಿಯರ್ ಎನ್​​ಟಿಆರ್ ನಟಿಸಿ ಕನ್ನಡದ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ‘ಡ್ರ್ಯಾಗನ್’ ಸಿನಿಮಾ ಈಗಾಗಲೇ ಹಲವು ಸ್ಟಾರ್ ನಟ-ನಟಿಯರನ್ನು ಹೊಂದಿದ್ದು, ಇದೀಗ ಈ ಸಿನಿಮಾಕ್ಕೆ ಬಾಲಿವುಡ್​​ನ ಇಬ್ಬರು ಸ್ಟಾರ್ ನಟ ಮತ್ತು ನಟಿ ಎಂಟ್ರಿ ಕೊಟ್ಟಿದ್ದಾರೆ. ಬಾಲಿವುಡ್​​ನ ನಂಬರ್ 1 ನಟಿ ಎನಿಸಿಕೊಂಡಿರುವ ಆಲಿಯಾ ಭಟ್ ಅವರು ‘ಡ್ರ್ಯಾಗನ್’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಈ ಸುದ್ದಿ ಈಗಾಗಲೇ ವೈರಲ್ ಆಗಿದೆ. ಆಲಿಯಾ ಭಟ್ ಅವರ ಜೊತೆಗೆ ಇದೇ ಸಿನಿಮಾನಲ್ಲಿ ಬಾಲಿವುಡ್​​ನ ಸ್ಟಾರ್ ನಟ ಶಾಹಿದ್ ಕಪೂರ್ ಸಹ ನಟಿಸುತ್ತಿದ್ದಾರೆ.

ರಾಜಮೌಳಿ ನಿರ್ದೇಶಿಸಿದ್ದ ‘ಆರ್​​ಆರ್​​ಆರ್’ ಸಿನಿಮಾದ ಮೂಲಕ ಆಲಿಯಾ ಭಟ್ ದಕ್ಷಿಣ ಚಿತ್ರರಂಗಕ್ಕೆ ಕಾಲಿರಿಸಿದ್ದರು. ಆ ಸಿನಿಮಾನಲ್ಲಿ ಅವರು ರಾಮ್ ಚರಣ್​​ಗೆ ಜೋಡಿಯಾಗಿ ನಟಿಸಿದ್ದರು. ಜೂ ಎನ್​​ಟಿಆರ್ ಜೊತೆಗೆ ಒಂದೇ ಒಂದು ಸೀನ್​​ನಲ್ಲಿ ನಟನೆ ಮಾಡಿದ್ದರು. ಹಾಗೂ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ತೆಲುಗು ಚಿತ್ರರಂಗಕ್ಕೆ ಕಾಲಿರಿಸಿದ್ದು, ಜೂ ಎನ್​​ಟಿಆರ್ ಸಿನಿಮಾನಲ್ಲಿ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಆ ಮೂಲಕ ಇದು ಅವರಿಗೆ ಎರಡನೇ ತೆಲುಗು ಸಿನಿಮಾ ಆಗಲಿದೆ. ಇದರ ಜೊತೆಗೆ ಶಾಹಿದ್ ಕಪೂರ್ ಸಹ ಈ ಸಿನಿಮಾನಲ್ಲಿ ನಟಿಸಲಿದ್ದು, ಇದು ಅವರಿಗೆ ಮೊದಲ ತೆಲುಗು ಸಿನಿಮಾ ಆಗಿದೆ.

ಇದನ್ನೂ ಓದಿ:ಸಂಭ್ರಮಿಸುವ ಸಮಯದಲ್ಲಿ ಬಾಲಿವುಡ್​​ ನಟ ಇಮ್ರಾನ್ ಹಶ್ಮಿಗೆ ಹಂದಿ ಜ್ವರ

ಶಾಹಿದ್ ಕಪೂರ್ ಅವರಿಗೆ ದಕ್ಷಿಣದ ಸಿನಿಮಾಗಳು ಹೊಸದೇನೂ ಅಲ್ಲ. ‘ಅರ್ಜುನ್ ರೆಡ್ಡಿ’, ‘ಜೆರ್ಸಿ’ ಸೇರಿದಂತೆ ಇನ್ನೂ ಕೆಲವು ದಕ್ಷಿಣದ ಸಿನಿಮಾಗಳ ರೀಮೇಕ್​​ನಲ್ಲಿ ಶಾಹಿದ್ ಕಪೂರ್ ನಟನೆ ಮಾಡಿದ್ದಾರೆ. ಶಾಹಿದ್ ಕಪೂರ್ ನಟನೆಯ ‘ಕಾಕ್​​ಟೇಲ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿತ್ತು. ಆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಯಶಸ್ಸು ಗಳಿಸಿತ್ತು. ಇದೀಗ ಅವರು ತೆಲುಗು ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

‘ಡ್ರ್ಯಾಗನ್’ ಸಿನಿಮಾನಲ್ಲಿ ಹಲವು ದೊಡ್ಡ ಕಲಾವಿದರು ನಟನೆ ಮಾಡುತ್ತಿದ್ದಾರೆ. ಜೂ ಎನ್​​ಟಿಆರ್ ನಾಯಕನಾಗಿರುವ ಈ ಸಿನಿಮಾನಲ್ಲಿ ಕನ್ನಡತಿ ರುಕ್ಮಿಣಿ ವಸಂತ್ ನಾಯಕಿ. ಸಿನಿಮಾನಲ್ಲಿ ಬಾಲಿವುಡ್​​ ಸ್ಟಾರ್ ನಟ ಅನಿಲ್ ಕಪೂರ್ ಇದ್ದಾರೆ. ಮಲಯಾಳಂನ ಬಿಜು ಮೆನನ್, ಗುರು ಸೋಮಸುಂದರಂ, ಆಶುತೋಶ್ ರಾಣಾ ಇನ್ನೂ ಕೆಲವು ದೊಡ್ಡ ಕಲಾವಿದರು ಈ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಮುಂದಿನ ವರ್ಷ ರಿಲೀಸ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ
ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ