AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಳಗ್ಗೆ 11 ಗಂಟೆಗೆ ನಿರ್ಧಾರವಾಗಲಿದೆ ಆರ್ಯನ್ ಖಾನ್​​ ಭವಿಷ್ಯ

ಆರೋಪಿಗಳು ಇಂದು NCB ಕಚೇರಿಯಲ್ಲೇ ಕಾಲ ಕಳೆಯಬೇಕು. ಮುಂಬೈ ಜೈಲಿನಲ್ಲಿ ರಾತ್ರಿ ವೇಳೆ ಆರೋಪಿಗಳನ್ನು ಬಿಟ್ಟುಕೊಳ್ಳುವುದಿಲ್ಲ. ನ್ಯಾಯಾಂಗ ಬಂಧನ ವಿಧಿಸಿದ್ರೂ ಇಂದು ಜೈಲಿಗೆ ಕಳಿಸಲು ಆಗುವುದಿಲ್ಲ

ಇಂದು ಬೆಳಗ್ಗೆ 11 ಗಂಟೆಗೆ ನಿರ್ಧಾರವಾಗಲಿದೆ ಆರ್ಯನ್ ಖಾನ್​​ ಭವಿಷ್ಯ
ಆರ್ಯನ್​ ಖಾನ್​, ಶಾರುಖ್​ ಖಾನ್​
TV9 Web
| Edited By: |

Updated on:Oct 08, 2021 | 9:42 AM

Share

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೋರ್ಟ್​ನಲ್ಲಿ ಅವರು ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿ ವಿಚಾರಣೆ  ಇಂದು ಮಾಡಲು ಸಾಧ್ಯವಿಲ್ಲ ಎಂದು ಮುಂಬೈ ಕಿಲ್ಲಾ ಕೋರ್ಟ್​ ಹೇಳಿದೆ. ಶನಿವಾರ 11 ಗಂಟೆಗೆ ಆರ್ಯನ್​ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಆರೋಪಿಗಳು ಇಂದು NCB ಕಚೇರಿಯಲ್ಲೇ ಕಾಲ ಕಳೆಯಬೇಕು. ಮುಂಬೈ ಜೈಲಿನಲ್ಲಿ ರಾತ್ರಿ ವೇಳೆ ಆರೋಪಿಗಳನ್ನು ಬಿಟ್ಟುಕೊಳ್ಳುವುದಿಲ್ಲ. ಹೀಗಾಗಿ, ನ್ಯಾಯಾಂಗ ಬಂಧನ ವಿಧಿಸಿದ್ರೂ ಇಂದು ಜೈಲಿಗೆ ಕಳಿಸಲು ಆಗುವುದಿಲ್ಲ.ನಾಳೆವರೆಗೂ ಆರೋಪಿಗಳು ಎನ್​ಸಿಬಿ ಕಚೇರಿಯಲ್ಲೇ ವಾಸ್ತವ್ಯ ಹೂಡಬೇಕಿದೆ. ನಾಳೆ ಪ್ರಕರಣದ ಆರೋಪಿಗಳನ್ನು ಜೈಲಿಗೆ ಕಳಿಸುವ ಪ್ರಕ್ರಿಯೆ ನಡೆಯಲಿದೆ.

‘ಆರ್ಯನ್ ಖಾನ್ ಹೇಳಿಕೆ ಹಿನ್ನೆಲೆ ಅಚಿತ್ ಬಂಧಿಸಲಾಗಿದೆ. ಆರೋಪಿ ಅಚಿತ್ ಕುಮಾರ್ ಜತೆ ಆರ್ಯನ್​ ಹಾಗೂ ಇತರಿರಿಗೆ ಸಂಬಂಧವಿದೆ. ವಿದೇಶಿ ಪ್ರಜೆಗಳ ಜತೆಯೂ ಕೂಡ ವ್ಯವಹಾರ ಮಾಡಿರುವ ಸುಳಿವು ಸಿಕ್ಕಿದೆ. ಹೀಗಾಗಿ ಅಚಿತ್ ಕುಮಾರ್ ಜತೆ ಮುಖಾಮುಖಿ ವಿಚಾರಣೆ ಅಗತ್ಯವಿದೆ’ ಎಂದು ಎನ್‌ಸಿಬಿ ಪರ ಎಎಸ್‌ಜಿ ಅನಿಲ್‌ಸಿಂಗ್‌ ವಾದ ಮಂಡನೆ ಮಾಡಿದರು

’ಪಾರ್ಟಿ ಆಯೋಜಕರು, ಸಾಗಣೆದಾರರ ವಿಚಾರಣೆ ನಡೆಸಿದ್ದೇವೆ. ಸಂಪೂರ್ಣ ಗ್ಯಾಂಗ್ ಪತ್ತೆ ಹಚ್ಚಲು ಹೆಚ್ಚುವರಿ ಕಸ್ಟಡಿ ಅಗತ್ಯ. ಆರ್ಯನ್ ಖಾನ್ ಹೇಳಿಕೆ ಹಿನ್ನೆಲೆ ಅಚಿತ್ ಬಂಧಿಸಲಾಗಿದೆ. ಅಧಿಕ ಪ್ರಮಾಣದಲ್ಲಿ ಗಾಂಜಾ ವಶಪಡಿಕೊಳ್ಳಲಾಗಿದೆ’ ಎಂದರು ಅನಿಲ್​ ಸಿಂಗ್​. ಈ ವೆಳೆ, ಕೋರ್ಟ್ ಹಾಲ್​ನಲ್ಲಿ ನೋ ನೋ ನೋ ಎನ್ನುವ ಕೂಗು ಆರೋಪಿ ವಕೀಲರಿಂದ ಬಂತು.  ಬಳಿಕ ಎನ್​ಸಿಬಿ ವಕೀಲರು ‘ಸ್ವಲ್ಪ ಪ್ರಮಾಣದಲ್ಲಿ ಜಪ್ತಿ’ ಮಾಡಿದ್ದೇವೆ ಎಂದರು.

ಆದರೆ, ಇದನ್ನು ಆರ್ಯನ್​ ಪರ ವಕೀಲರು ತಳ್ಳಿ ಹಾಕಿದರು. ‘ಈ ಪಾರ್ಟಿಗೆ ಹಾಗೂ ಆರ್ಯನ್​ಗೆ ಯಾವುದೇ ಸಂಬಂಧವಿಲ್ಲ. ಅವರ ಬಳಿ ಯಾವುದೇ ಡ್ರಗ್​ ಸಿಕ್ಕಿಲ್ಲ’ ಎಂದರು.

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿತ್ತು. ಅಲ್ಲಿಂದ ಅವರನ್ನು ಎನ್​ಸಿಬಿ ಕಚೇರಿಗೆ ಕರೆದುಕೊಂಡು ಬರಲಾಯಿತು. ಎನ್​ಸಿಬಿ ಕಚೇರಿ ಒಳಗೆ ಆರ್ಯನ್​ ಅವರಿಗೆ ನಾನಾ ರೀತಿಯ ಪ್ರಶ್ನೆಯನ್ನು ಮಾಡಲಾಯಿತು. ಈಗ ಅವರನ್ನು ಅರೆಸ್ಟ್​ ಮಾಡಲಾಯಿತು.  ಈ ವೇಳೆ ಅವರನ್ನು ಎರಡು ಬಾರಿ ಕೋರ್ಟ್​ಗೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ:  ‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ

‘ಮಾಫಿಯಾ ಪಪ್ಪುಗಳು ಆರ್ಯನ್​ ಖಾನ್​ ರಕ್ಷಣೆಗೆ ಬಂದರು’; ಹೃತಿಕ್​ಗೆ ತಿರುಗೇಟು ನೀಡಿದ ಕಂಗನಾ  

Published On - 7:41 pm, Thu, 7 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್