AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​
ಆರ್ಯನ್ ಖಾನ್, ಶಾರುಖ್ ಖಾನ್, ಸಲ್ಮಾನ್ ಖಾನ್
TV9 Web
| Edited By: |

Updated on: Oct 09, 2021 | 6:55 PM

Share

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅಲ್ಲಿಯವರೆಗೆ ಅವರು ಜೈಲಿನಲ್ಲಿರೋದು ಅನಿವಾರ್ಯವಾಗಿದೆ. ಆರ್ಯನ್​ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಮೊದಲು ಶಾರುಖ್​ ಅವರನ್ನು ಭೇಟಿ ಮಾಡಿದ್ದು ಸಲ್ಮಾನ್​ ಖಾನ್​​. ಅವರು ರಾತ್ರಿ ವೇಳೆ ಶಾರುಖ್​ ಮನೆಗೆ ತೆರಳಿ ಮಾತುಕತೆ ಮಾಡಿ ಬಂದಿದ್ದರು. ‘ನನ್ನ ಕುಟುಂಬ ಸಂಕಷ್ಟದಲ್ಲಿದ್ದಾಗ ಸಲ್ಲು ಯಾವಾಗಲೂ ಸಹಾಯಕ್ಕೆ ಬರುತ್ತಾರೆ’ ಎಂದು ಶಾರುಖ್​​ ಖಾನ್​ ಹೇಳಿದ ಹಳೆಯ ವಿಡಿಯೋ ಒಂದು ಈಗ ವೈರಲ್​ ಆಗುತ್ತಿದೆ.

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು. ಈಗ ಸಲ್ಲು ಸಿನಿಮಾದಲ್ಲಿ ಶಾರುಖ್​ ಹಾಗೂ ಶಾರುಖ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಪಠಾಣ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಅವರು ಸಂಭಾವನೆ ಕೂಡ ಪಡೆಯುತ್ತಿಲ್ಲ ಎಂದು ವರದಿಯಾಗಿದೆ. ಇವೆಲ್ಲವುಗಳ ಮಧ್ಯೆ ಇವರ ಹಳೆಯ ವಿಡಿಯೋ ವೈರಲ್​ ಆಗುತ್ತಿದೆ.

ಶಾರುಖ್​ ಹಾಗೂ ಸಲ್ಮಾನ್​ ಖಾನ್​ 2018ರಲ್ಲಿ ವೇದಿಕೆ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ‘ನಿಮ್ಮ ಕಷ್ಟ ಮತ್ತು ಸುಖ ಎರಡಕ್ಕೂ ಆಗುವವರು ಯಾರಾದರೂ ಇದಾರಾ’ ಎಂದು ಶಾರುಖ್​ ಅವರನ್ನು ಪ್ರಶ್ನೆ ಮಾಡಿದರು ಸಲ್ಮಾನ್​. ಇದಕ್ಕೆ ಶಾರುಖ್​ ಉತ್ತರ ನೀಡಿದರು.  ‘ನಾನು ಸಮಸ್ಯೆಯಲ್ಲಿದ್ದರೆ, ನಾನು ಎನ್ನುವುದಕ್ಕಿಂತ ನನ್ನ ಕುಟುಂಬ ಸಮಸ್ಯೆಯಲ್ಲಿದ್ದರೆ ನೀವಿದ್ದೀರಿ’ ಎಂದು ಹೇಳಿದ್ದರು ಕಿಂಗ್​ ಖಾನ್​. ಈ ವಿಡಿಯೋ ಈಗ ಮತ್ತೆ ವೈರಲ್​ ಆಗಿದೆ.

ಶಾರುಖ್​ ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಅವರ ಮನೆಗೆ ತೆರಳಿದ್ದು ಸಲ್ಮಾನ್​ ಖಾನ್​. ಈ ಕಾರಣಕ್ಕೆ ಅನೇಕರು ‘ಸಲ್ಮಾನ್​ ನೀವು ನಿಮ್ಮ ಮಾತನ್ನು ಉಳಿಸಿಕೊಂಡಿದ್ದೀರಿ’ ಎಂದು ಹೇಳಿದ್ದಾರೆ. ಈ ವಿಡಿಯೋಗೆ ಭರಪೂರ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ಶಾರುಖ್​ ಮಗನ ಮೇಲೆ ನಡೆದ ದಾಳಿ ಒಂದು ಷಡ್ಯಂತ್ರವೇ? ಎನ್​ಸಿಬಿ ಅಧಿಕಾರಿಗಳ ಮೇಲೆ ಮೂಡಿತು ಶಂಕೆ

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!