AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​
ಆರ್ಯನ್ ಖಾನ್, ಶಾರುಖ್ ಖಾನ್, ಸಲ್ಮಾನ್ ಖಾನ್
TV9 Web
| Edited By: |

Updated on: Oct 09, 2021 | 6:55 PM

Share

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅಲ್ಲಿಯವರೆಗೆ ಅವರು ಜೈಲಿನಲ್ಲಿರೋದು ಅನಿವಾರ್ಯವಾಗಿದೆ. ಆರ್ಯನ್​ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಮೊದಲು ಶಾರುಖ್​ ಅವರನ್ನು ಭೇಟಿ ಮಾಡಿದ್ದು ಸಲ್ಮಾನ್​ ಖಾನ್​​. ಅವರು ರಾತ್ರಿ ವೇಳೆ ಶಾರುಖ್​ ಮನೆಗೆ ತೆರಳಿ ಮಾತುಕತೆ ಮಾಡಿ ಬಂದಿದ್ದರು. ‘ನನ್ನ ಕುಟುಂಬ ಸಂಕಷ್ಟದಲ್ಲಿದ್ದಾಗ ಸಲ್ಲು ಯಾವಾಗಲೂ ಸಹಾಯಕ್ಕೆ ಬರುತ್ತಾರೆ’ ಎಂದು ಶಾರುಖ್​​ ಖಾನ್​ ಹೇಳಿದ ಹಳೆಯ ವಿಡಿಯೋ ಒಂದು ಈಗ ವೈರಲ್​ ಆಗುತ್ತಿದೆ.

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು. ಈಗ ಸಲ್ಲು ಸಿನಿಮಾದಲ್ಲಿ ಶಾರುಖ್​ ಹಾಗೂ ಶಾರುಖ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಪಠಾಣ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಅವರು ಸಂಭಾವನೆ ಕೂಡ ಪಡೆಯುತ್ತಿಲ್ಲ ಎಂದು ವರದಿಯಾಗಿದೆ. ಇವೆಲ್ಲವುಗಳ ಮಧ್ಯೆ ಇವರ ಹಳೆಯ ವಿಡಿಯೋ ವೈರಲ್​ ಆಗುತ್ತಿದೆ.

ಶಾರುಖ್​ ಹಾಗೂ ಸಲ್ಮಾನ್​ ಖಾನ್​ 2018ರಲ್ಲಿ ವೇದಿಕೆ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ‘ನಿಮ್ಮ ಕಷ್ಟ ಮತ್ತು ಸುಖ ಎರಡಕ್ಕೂ ಆಗುವವರು ಯಾರಾದರೂ ಇದಾರಾ’ ಎಂದು ಶಾರುಖ್​ ಅವರನ್ನು ಪ್ರಶ್ನೆ ಮಾಡಿದರು ಸಲ್ಮಾನ್​. ಇದಕ್ಕೆ ಶಾರುಖ್​ ಉತ್ತರ ನೀಡಿದರು.  ‘ನಾನು ಸಮಸ್ಯೆಯಲ್ಲಿದ್ದರೆ, ನಾನು ಎನ್ನುವುದಕ್ಕಿಂತ ನನ್ನ ಕುಟುಂಬ ಸಮಸ್ಯೆಯಲ್ಲಿದ್ದರೆ ನೀವಿದ್ದೀರಿ’ ಎಂದು ಹೇಳಿದ್ದರು ಕಿಂಗ್​ ಖಾನ್​. ಈ ವಿಡಿಯೋ ಈಗ ಮತ್ತೆ ವೈರಲ್​ ಆಗಿದೆ.

ಶಾರುಖ್​ ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಅವರ ಮನೆಗೆ ತೆರಳಿದ್ದು ಸಲ್ಮಾನ್​ ಖಾನ್​. ಈ ಕಾರಣಕ್ಕೆ ಅನೇಕರು ‘ಸಲ್ಮಾನ್​ ನೀವು ನಿಮ್ಮ ಮಾತನ್ನು ಉಳಿಸಿಕೊಂಡಿದ್ದೀರಿ’ ಎಂದು ಹೇಳಿದ್ದಾರೆ. ಈ ವಿಡಿಯೋಗೆ ಭರಪೂರ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ಶಾರುಖ್​ ಮಗನ ಮೇಲೆ ನಡೆದ ದಾಳಿ ಒಂದು ಷಡ್ಯಂತ್ರವೇ? ಎನ್​ಸಿಬಿ ಅಧಿಕಾರಿಗಳ ಮೇಲೆ ಮೂಡಿತು ಶಂಕೆ

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ