AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​
ಆರ್ಯನ್ ಖಾನ್, ಶಾರುಖ್ ಖಾನ್, ಸಲ್ಮಾನ್ ಖಾನ್
TV9 Web
| Edited By: |

Updated on: Oct 09, 2021 | 6:55 PM

Share

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅಲ್ಲಿಯವರೆಗೆ ಅವರು ಜೈಲಿನಲ್ಲಿರೋದು ಅನಿವಾರ್ಯವಾಗಿದೆ. ಆರ್ಯನ್​ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಮೊದಲು ಶಾರುಖ್​ ಅವರನ್ನು ಭೇಟಿ ಮಾಡಿದ್ದು ಸಲ್ಮಾನ್​ ಖಾನ್​​. ಅವರು ರಾತ್ರಿ ವೇಳೆ ಶಾರುಖ್​ ಮನೆಗೆ ತೆರಳಿ ಮಾತುಕತೆ ಮಾಡಿ ಬಂದಿದ್ದರು. ‘ನನ್ನ ಕುಟುಂಬ ಸಂಕಷ್ಟದಲ್ಲಿದ್ದಾಗ ಸಲ್ಲು ಯಾವಾಗಲೂ ಸಹಾಯಕ್ಕೆ ಬರುತ್ತಾರೆ’ ಎಂದು ಶಾರುಖ್​​ ಖಾನ್​ ಹೇಳಿದ ಹಳೆಯ ವಿಡಿಯೋ ಒಂದು ಈಗ ವೈರಲ್​ ಆಗುತ್ತಿದೆ.

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು. ಈಗ ಸಲ್ಲು ಸಿನಿಮಾದಲ್ಲಿ ಶಾರುಖ್​ ಹಾಗೂ ಶಾರುಖ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಪಠಾಣ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಅವರು ಸಂಭಾವನೆ ಕೂಡ ಪಡೆಯುತ್ತಿಲ್ಲ ಎಂದು ವರದಿಯಾಗಿದೆ. ಇವೆಲ್ಲವುಗಳ ಮಧ್ಯೆ ಇವರ ಹಳೆಯ ವಿಡಿಯೋ ವೈರಲ್​ ಆಗುತ್ತಿದೆ.

ಶಾರುಖ್​ ಹಾಗೂ ಸಲ್ಮಾನ್​ ಖಾನ್​ 2018ರಲ್ಲಿ ವೇದಿಕೆ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ‘ನಿಮ್ಮ ಕಷ್ಟ ಮತ್ತು ಸುಖ ಎರಡಕ್ಕೂ ಆಗುವವರು ಯಾರಾದರೂ ಇದಾರಾ’ ಎಂದು ಶಾರುಖ್​ ಅವರನ್ನು ಪ್ರಶ್ನೆ ಮಾಡಿದರು ಸಲ್ಮಾನ್​. ಇದಕ್ಕೆ ಶಾರುಖ್​ ಉತ್ತರ ನೀಡಿದರು.  ‘ನಾನು ಸಮಸ್ಯೆಯಲ್ಲಿದ್ದರೆ, ನಾನು ಎನ್ನುವುದಕ್ಕಿಂತ ನನ್ನ ಕುಟುಂಬ ಸಮಸ್ಯೆಯಲ್ಲಿದ್ದರೆ ನೀವಿದ್ದೀರಿ’ ಎಂದು ಹೇಳಿದ್ದರು ಕಿಂಗ್​ ಖಾನ್​. ಈ ವಿಡಿಯೋ ಈಗ ಮತ್ತೆ ವೈರಲ್​ ಆಗಿದೆ.

ಶಾರುಖ್​ ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಅವರ ಮನೆಗೆ ತೆರಳಿದ್ದು ಸಲ್ಮಾನ್​ ಖಾನ್​. ಈ ಕಾರಣಕ್ಕೆ ಅನೇಕರು ‘ಸಲ್ಮಾನ್​ ನೀವು ನಿಮ್ಮ ಮಾತನ್ನು ಉಳಿಸಿಕೊಂಡಿದ್ದೀರಿ’ ಎಂದು ಹೇಳಿದ್ದಾರೆ. ಈ ವಿಡಿಯೋಗೆ ಭರಪೂರ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ಶಾರುಖ್​ ಮಗನ ಮೇಲೆ ನಡೆದ ದಾಳಿ ಒಂದು ಷಡ್ಯಂತ್ರವೇ? ಎನ್​ಸಿಬಿ ಅಧಿಕಾರಿಗಳ ಮೇಲೆ ಮೂಡಿತು ಶಂಕೆ

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!