‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​
ಆರ್ಯನ್ ಖಾನ್, ಶಾರುಖ್ ಖಾನ್, ಸಲ್ಮಾನ್ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 09, 2021 | 6:55 PM

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅಲ್ಲಿಯವರೆಗೆ ಅವರು ಜೈಲಿನಲ್ಲಿರೋದು ಅನಿವಾರ್ಯವಾಗಿದೆ. ಆರ್ಯನ್​ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಮೊದಲು ಶಾರುಖ್​ ಅವರನ್ನು ಭೇಟಿ ಮಾಡಿದ್ದು ಸಲ್ಮಾನ್​ ಖಾನ್​​. ಅವರು ರಾತ್ರಿ ವೇಳೆ ಶಾರುಖ್​ ಮನೆಗೆ ತೆರಳಿ ಮಾತುಕತೆ ಮಾಡಿ ಬಂದಿದ್ದರು. ‘ನನ್ನ ಕುಟುಂಬ ಸಂಕಷ್ಟದಲ್ಲಿದ್ದಾಗ ಸಲ್ಲು ಯಾವಾಗಲೂ ಸಹಾಯಕ್ಕೆ ಬರುತ್ತಾರೆ’ ಎಂದು ಶಾರುಖ್​​ ಖಾನ್​ ಹೇಳಿದ ಹಳೆಯ ವಿಡಿಯೋ ಒಂದು ಈಗ ವೈರಲ್​ ಆಗುತ್ತಿದೆ.

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು. ಈಗ ಸಲ್ಲು ಸಿನಿಮಾದಲ್ಲಿ ಶಾರುಖ್​ ಹಾಗೂ ಶಾರುಖ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಪಠಾಣ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಅವರು ಸಂಭಾವನೆ ಕೂಡ ಪಡೆಯುತ್ತಿಲ್ಲ ಎಂದು ವರದಿಯಾಗಿದೆ. ಇವೆಲ್ಲವುಗಳ ಮಧ್ಯೆ ಇವರ ಹಳೆಯ ವಿಡಿಯೋ ವೈರಲ್​ ಆಗುತ್ತಿದೆ.

ಶಾರುಖ್​ ಹಾಗೂ ಸಲ್ಮಾನ್​ ಖಾನ್​ 2018ರಲ್ಲಿ ವೇದಿಕೆ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ‘ನಿಮ್ಮ ಕಷ್ಟ ಮತ್ತು ಸುಖ ಎರಡಕ್ಕೂ ಆಗುವವರು ಯಾರಾದರೂ ಇದಾರಾ’ ಎಂದು ಶಾರುಖ್​ ಅವರನ್ನು ಪ್ರಶ್ನೆ ಮಾಡಿದರು ಸಲ್ಮಾನ್​. ಇದಕ್ಕೆ ಶಾರುಖ್​ ಉತ್ತರ ನೀಡಿದರು.  ‘ನಾನು ಸಮಸ್ಯೆಯಲ್ಲಿದ್ದರೆ, ನಾನು ಎನ್ನುವುದಕ್ಕಿಂತ ನನ್ನ ಕುಟುಂಬ ಸಮಸ್ಯೆಯಲ್ಲಿದ್ದರೆ ನೀವಿದ್ದೀರಿ’ ಎಂದು ಹೇಳಿದ್ದರು ಕಿಂಗ್​ ಖಾನ್​. ಈ ವಿಡಿಯೋ ಈಗ ಮತ್ತೆ ವೈರಲ್​ ಆಗಿದೆ.

ಶಾರುಖ್​ ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಅವರ ಮನೆಗೆ ತೆರಳಿದ್ದು ಸಲ್ಮಾನ್​ ಖಾನ್​. ಈ ಕಾರಣಕ್ಕೆ ಅನೇಕರು ‘ಸಲ್ಮಾನ್​ ನೀವು ನಿಮ್ಮ ಮಾತನ್ನು ಉಳಿಸಿಕೊಂಡಿದ್ದೀರಿ’ ಎಂದು ಹೇಳಿದ್ದಾರೆ. ಈ ವಿಡಿಯೋಗೆ ಭರಪೂರ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ಶಾರುಖ್​ ಮಗನ ಮೇಲೆ ನಡೆದ ದಾಳಿ ಒಂದು ಷಡ್ಯಂತ್ರವೇ? ಎನ್​ಸಿಬಿ ಅಧಿಕಾರಿಗಳ ಮೇಲೆ ಮೂಡಿತು ಶಂಕೆ

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ