AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು.

‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​
ಆರ್ಯನ್ ಖಾನ್, ಶಾರುಖ್ ಖಾನ್, ಸಲ್ಮಾನ್ ಖಾನ್
TV9 Web
| Edited By: |

Updated on: Oct 09, 2021 | 6:55 PM

Share

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅಲ್ಲಿಯವರೆಗೆ ಅವರು ಜೈಲಿನಲ್ಲಿರೋದು ಅನಿವಾರ್ಯವಾಗಿದೆ. ಆರ್ಯನ್​ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಮೊದಲು ಶಾರುಖ್​ ಅವರನ್ನು ಭೇಟಿ ಮಾಡಿದ್ದು ಸಲ್ಮಾನ್​ ಖಾನ್​​. ಅವರು ರಾತ್ರಿ ವೇಳೆ ಶಾರುಖ್​ ಮನೆಗೆ ತೆರಳಿ ಮಾತುಕತೆ ಮಾಡಿ ಬಂದಿದ್ದರು. ‘ನನ್ನ ಕುಟುಂಬ ಸಂಕಷ್ಟದಲ್ಲಿದ್ದಾಗ ಸಲ್ಲು ಯಾವಾಗಲೂ ಸಹಾಯಕ್ಕೆ ಬರುತ್ತಾರೆ’ ಎಂದು ಶಾರುಖ್​​ ಖಾನ್​ ಹೇಳಿದ ಹಳೆಯ ವಿಡಿಯೋ ಒಂದು ಈಗ ವೈರಲ್​ ಆಗುತ್ತಿದೆ.

ಶಾರುಖ್​ ಖಾನ್​ ಹಾಗೂ ಸಲ್ಮಾನ್​ ಖಾನ್​ ನಡುವೆ ವೈಮನಸ್ಸು ಬೆಳೆದಿತ್ತು. ಆದರೆ, ಕಾಲಾಂತರದಲ್ಲಿ ಇಬ್ಬರ  ನಡುವೆ ಇದ್ದ ದ್ವೇಷ ಕರಗಿ ಫ್ರೆಂಡ್​ಶಿಪ್​ ಬೆಳೆದಿತ್ತು. ಇಂಡಸ್ಟ್ರಿಯಲ್ಲಿ ಮತ್ತೆ ಇಬ್ಬರೂ ಗೆಳೆಯರಾದರು. ಈಗ ಸಲ್ಲು ಸಿನಿಮಾದಲ್ಲಿ ಶಾರುಖ್​ ಹಾಗೂ ಶಾರುಖ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಪಠಾಣ್​ ಸಿನಿಮಾದಲ್ಲಿ ಸಲ್ಲು ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಅವರು ಸಂಭಾವನೆ ಕೂಡ ಪಡೆಯುತ್ತಿಲ್ಲ ಎಂದು ವರದಿಯಾಗಿದೆ. ಇವೆಲ್ಲವುಗಳ ಮಧ್ಯೆ ಇವರ ಹಳೆಯ ವಿಡಿಯೋ ವೈರಲ್​ ಆಗುತ್ತಿದೆ.

ಶಾರುಖ್​ ಹಾಗೂ ಸಲ್ಮಾನ್​ ಖಾನ್​ 2018ರಲ್ಲಿ ವೇದಿಕೆ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ‘ನಿಮ್ಮ ಕಷ್ಟ ಮತ್ತು ಸುಖ ಎರಡಕ್ಕೂ ಆಗುವವರು ಯಾರಾದರೂ ಇದಾರಾ’ ಎಂದು ಶಾರುಖ್​ ಅವರನ್ನು ಪ್ರಶ್ನೆ ಮಾಡಿದರು ಸಲ್ಮಾನ್​. ಇದಕ್ಕೆ ಶಾರುಖ್​ ಉತ್ತರ ನೀಡಿದರು.  ‘ನಾನು ಸಮಸ್ಯೆಯಲ್ಲಿದ್ದರೆ, ನಾನು ಎನ್ನುವುದಕ್ಕಿಂತ ನನ್ನ ಕುಟುಂಬ ಸಮಸ್ಯೆಯಲ್ಲಿದ್ದರೆ ನೀವಿದ್ದೀರಿ’ ಎಂದು ಹೇಳಿದ್ದರು ಕಿಂಗ್​ ಖಾನ್​. ಈ ವಿಡಿಯೋ ಈಗ ಮತ್ತೆ ವೈರಲ್​ ಆಗಿದೆ.

ಶಾರುಖ್​ ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಅವರ ಮನೆಗೆ ತೆರಳಿದ್ದು ಸಲ್ಮಾನ್​ ಖಾನ್​. ಈ ಕಾರಣಕ್ಕೆ ಅನೇಕರು ‘ಸಲ್ಮಾನ್​ ನೀವು ನಿಮ್ಮ ಮಾತನ್ನು ಉಳಿಸಿಕೊಂಡಿದ್ದೀರಿ’ ಎಂದು ಹೇಳಿದ್ದಾರೆ. ಈ ವಿಡಿಯೋಗೆ ಭರಪೂರ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ಶಾರುಖ್​ ಮಗನ ಮೇಲೆ ನಡೆದ ದಾಳಿ ಒಂದು ಷಡ್ಯಂತ್ರವೇ? ಎನ್​ಸಿಬಿ ಅಧಿಕಾರಿಗಳ ಮೇಲೆ ಮೂಡಿತು ಶಂಕೆ

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು