AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaitaan Trailer: ನೋಡುಗರಿಗೆ ನಡುಕ ಹುಟ್ಟಿಸಿದ ‘ಶೈತಾನ್​’ ಟ್ರೇಲರ್​; ಕ್ರೂರಿಯಾದ ಮಾಧವನ್​

ಜ್ಯೋತಿಕಾ, ಅಜಯ್​ ದೇವಗನ್​, ಆರ್​. ಮಾಧವನ್​, ಜಾನಕಿ ಬೋಡಿವಾಲಾ ಅವರು ‘ಶೈತಾನ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ವಶೀಕರಣದ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಸದ್ಯ ಈ ಸಿನಿಮಾದ ಟ್ರೇಲರ್​ ಎಲ್ಲರ ಗಮನ ಸೆಳೆಯುತ್ತಿದೆ. ಮಾರ್ಚ್​ 8ರಂದು ಈ ಚಿತ್ರ ಬಿಡುಗಡೆ ಆಗಲಿದ್ದು, ಖಂಡಿತಾ ಸೂಪರ್​ ಹಿಟ್​ ಆಗಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯುತ್ತಿದ್ದಾರೆ.

Shaitaan Trailer: ನೋಡುಗರಿಗೆ ನಡುಕ ಹುಟ್ಟಿಸಿದ ‘ಶೈತಾನ್​’ ಟ್ರೇಲರ್​; ಕ್ರೂರಿಯಾದ ಮಾಧವನ್​
‘ಶೈತಾನ್​’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Feb 23, 2024 | 9:32 AM

Share

ನಟ ಅಜಯ್​ ದೇವಗನ್​ (Ajay Devgn) ಅವರು ‘ದೃಶ್ಯಂ’ ಸಿನಿಮಾದಲ್ಲಿ ಮಗಳನ್ನು ರಕ್ಷಿಸಲು ದೊಡ್ಡ ರಿಸ್ಕ್​ ತೆಗೆದುಕೊಳ್ಳುವ ತಂದೆಯ ಪಾತ್ರ ಮಾಡಿದ್ದರು. ಈಗ ಅದೇ ರೀತಿಯ ಮತ್ತೊಂದು ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ‘ಶೈತಾನ್​’ ಸಿನಿಮಾದಲ್ಲಿ ಅವರು ತಂದೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ಆರ್​. ಮಾಧವನ್​ (R Madhavan) ವಿಲನ್​! ಹೌದು, ‘ಶೈತಾನ್​’ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದ್ದು, ಕಥೆ ಏನು ಎಂಬುದರ ಸುಳಿವು ಸಿಕ್ಕಿದೆ. ಈ ಚಿತ್ರದಲ್ಲಿ ಅಜಯ್​ ದೇವಗನ್​ ಮತ್ತು ಜ್ಯೋತಿಕಾ ಅವರು ಪತಿ-ಪತ್ನಿಯಾಗಿ ನಟಿಸಿದ್ದಾರೆ. ವಶೀಕರಣದ ಕಹಾನಿಯನ್ನು ಈ ಚಿತ್ರ ಒಳಗೊಂಡಿದೆ. ಸದ್ಯಕ್ಕೆ ‘ಶೈತಾನ್​’ ಟ್ರೇಲರ್​ (Shaitaan Trailer) ನೋಡಿದ ಪ್ರೇಕ್ಷಕರಿಗೆ ನಡುಕ ಹುಟ್ಟಿದೆ. ಇನ್ನು, ಪೂರ್ತಿ ಸಿನಿಮಾ ಎಷ್ಟರಮಟ್ಟಿಗೆ ಭಯಾನಕವಾಗಿರಬಹುದು ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

ಸಹಾಯ ಕೇಳಿಕೊಂಡು ಆರ್​. ಮಾಧವನ್​ ಅವರು ಅಜಯ್​ ದೇವಗನ್​ರ ಮನೆಗೆ ಎಂಟ್ರಿ ನೀಡುತ್ತಾರೆ. ಬಳಿಕ ಅವರ ಮಗಳನ್ನು ವಶೀಕರಣ ಮಾಡುತ್ತಾರೆ. ಅಲ್ಲಿಂದ ಶುರುವಾಗುವುದು ಅಸಲಿ ಸಮರ. ವಿಲನ್​ ಹೇಳಿದಂತೆಯೇ ಹೀರೋನ ಮಗಳು ಕೇಳುತ್ತಾಳೆ. ತಂದೆ-ತಾಯಿಗೆ ಹೊಡೆಯಲೂ ಆಕೆ ಹಿಂಜರಿಯುವುದಿಲ್ಲ. ಅಷ್ಟರಮಟ್ಟಿಗೆ ಪವರ್​ಫುಲ್​ ಆಗಿರುತ್ತದೆ ಶೈತಾನನ ವಶೀಕರಣ! ಇಂಥ ಹಾರರ್​ ಕಹಾನಿಯನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಮತ್ತೆ ಒಂದಾದ ಕಂಗನಾ ರಣಾವತ್​-ಆರ್​. ಮಾಧವನ್​; ಫೋಟೋ ವೈರಲ್​

ಮಾರ್ಚ್​ 8ರಂದು ‘ಶೈತಾನ್​’ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ನಿರ್ದೇಶಕ ವಿಕಾಸ್​ ಬೆಹ್ಲ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಟ್ರೇಲರ್​ನಲ್ಲಿನ ಹಾರರ್​ ದೃಶ್ಯಗಳನ್ನು ನೋಡಿ ಸಿನಿಪ್ರಿಯರ ನಿರೀಕ್ಷೆ ಹೆಚ್ಚಾಗಿದೆ. ಇದು ಖಂಡಿತವಾಗಿಯೂ ಬ್ಲಾಕ್​ ಬಸ್ಟರ್​ ಸಿನಿಮಾ ಆಗಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯುತ್ತಿದ್ದಾರೆ. ಜ್ಯೋತಿಕಾ, ಅಜಯ್​ ದೇವಗನ್​, ಆರ್​. ಮಾಧವನ್​ ಅವರಂತಹ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿರುವುದರಿಂದ ಸಹಜವಾಗಿಯೇ ಹೈಪ್​ ಹೆಚ್ಚಾಗಿದೆ.

‘ಶೈತಾನ್​’ ಸಿನಿಮಾದ ಟ್ರೇಲರ್​:

ಅಜಯ್ ದೇವಗನ್​ ಅವರ ಮಗಳ ಪಾತ್ರದಲ್ಲಿ ಜಾನಕಿ ಬೋಡಿವಾಲಾ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರಕ್ಕೆ ಸಖತ್​ ಸ್ಕೋಪ್​ ಇದೆ. ವಶೀಕರಣಕ್ಕೆ ಒಳಗಾದ ಯುವತಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಿಂದ ಅವರ ವೃತ್ತಿಜೀವನದ ಮೈಲೇಜ್​ ಹೆಚ್ಚಲಿದೆ. ಸದ್ಯ ಯೂಟ್ಯೂಬ್​ನಲ್ಲಿ ‘ಶೈತಾನ್​’ ಟ್ರೇಲರ್​ ನಂಬರ್​ 1 ಟ್ರೆಂಡಿಂಗ್​ನಲ್ಲಿದೆ. ಅಷ್ಟರಮಟ್ಟಿಗೆ ಈ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ. 24 ಗಂಟೆ ಕಳೆಯುವುದಕ್ಕೂ ಮುನ್ನ 15 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ