AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaitaan Twitter Review: ಯುವತಿಯ ವಶೀಕರಣದ ಕಥೆ ಇರುವ ‘ಶೈತಾನ್​’ ಸಿನಿಮಾ ಹೇಗಿದೆ? ಇಲ್ಲಿದೆ ಟ್ವಿಟರ್​ ವಿಮರ್ಶೆ

ಹಾರರ್​ ಕಥಾಹಂದರ ಹೊಂದಿರುವ ‘ಶೈತಾನ್​’ ಸಿನಿಮಾದಲ್ಲಿ ಆರ್​. ಮಾಧವನ್​ ಒಂದು ಡಿಫರೆಂಟ್​ ಪಾತ್ರ ಮಾಡಿದ್ದಾರೆ. ಅಜಯ್​ ದೇವಗನ್​, ಜ್ಯೋತಿಕಾ ಅವರ ನಟನೆಯೂ ಮೆಚ್ಚುಗೆ ಆಗುತ್ತಿದೆ. ಸಿನಿಮಾದ ಕೇಂದ್ರವಾಗಿರುವ ಪಾತ್ರದಲ್ಲಿ ಜಾನಕಿ ಬೋಡಿವಾಲಾ ಅಭಿನಯಿಸಿದ್ದಾರೆ. ಮೊದಲ ದಿನ ‘ಶೈತಾನ್​’ ನೋಡಿದ ಪ್ರೇಕ್ಷಕರು ‘ಎಕ್ಸ್​’ (ಟ್ವಿಟರ್​) ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Shaitaan Twitter Review: ಯುವತಿಯ ವಶೀಕರಣದ ಕಥೆ ಇರುವ ‘ಶೈತಾನ್​’ ಸಿನಿಮಾ ಹೇಗಿದೆ? ಇಲ್ಲಿದೆ ಟ್ವಿಟರ್​ ವಿಮರ್ಶೆ
ಶೈತಾನ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Mar 08, 2024 | 4:06 PM

Share

ಟ್ರೇಲರ್​ ಮೂಲಕ ಭಾರಿ ಕ್ರೇಜ್​ ಸೃಷ್ಟಿಸಿದ್ದ ‘ಶೈತಾನ್​’ ಸಿನಿಮಾ (Shaitaan) ಒಂದು (ಮಾರ್ಚ್​ 8) ಬಿಡುಗಡೆ ಆಗಿದೆ. ಅಜಯ್​ ದೇವಗನ್​ (Ajay Devgn), ಜ್ಯೋತಿಕಾ, ಜಾನಕಿ ಬೋಡಿವಾಲಾ, ಆರ್​. ಮಾಧವನ್​ ಮುಂತಾದವರು ನಟಿಸಿದ ಈ ಸಿನಿಮಾಗೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಪ್ರೇಕ್ಷಕರು ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಹಾರರ್​ ಕಥಾಹಂದರ ಈ ಸಿನಿಮಾದಲ್ಲಿ ವಶೀಕರಣದ ಬಗ್ಗೆ ತೋರಿಸಲಾಗಿದೆ. ಒಂದು ಡಿಫರೆಂಟ್​ ಪಾತ್ರದಲ್ಲಿ ಆರ್​. ಮಾಧವನ್​ (R. Madhavan) ನಟಿಸಿದ್ದಾರೆ. ‘ಶೈತಾನ್​’ ಸಿನಿಮಾವನ್ನು ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಧ್ಯಾಹ್ನದ ವೇಳೆಗೆ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗಿದೆ.

ವಿಕಾಸ್​ ಬಹ್ಲ್​ ಅವರು ‘ಶೈತಾನ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಂದಹಾಗೆ, ಇದು ಗುಜರಾತಿ ಭಾಷೆಯ ‘ವಶ್​’ ಚಿತ್ರದ ಹಿಂದಿ ರಿಮೇಕ್​. ಇದು ರಿಮೇಕ್​ ಆಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಕಲಾವಿದರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಟ್ವಿಟರ್​ನಲ್ಲಿ ವಿಮರ್ಶೆ ಹಂಚಿಕೊಂಡವರು ಪಾಸಿಟಿವ್​ ಮಾತುಗಳನ್ನು ಆಡುತ್ತಿದ್ದಾರೆ. ಇದರಿಂದ ಸಿನಿಮಾದ ಕಲೆಕ್ಷನ್​ ಹೆಚ್ಚಲು ಅನುಕೂಲ ಆಗಲಿದೆ.

ಇದನ್ನೂ ಓದಿ: Karataka Damanaka review: ಹುಟ್ಟಿದೂರಿನ ಮಹತ್ವ ಸಾರುವ ಸಿನಿಮಾದಲ್ಲಿ ಏನಿದೆ? ಏನಿಲ್ಲ?

‘ಈ ಸಿನಿಮಾದಲ್ಲಿ ಊಹಿಸಲಾಗದ ಟ್ವಿಸ್ಟ್​ಗಳು ಇವೆ. ಡ್ರಾಮಾ, ಥ್ರಿಲ್​ ಎಲ್ಲವೂ ಈ ಚಿತ್ರದಲ್ಲಿದೆ. ಬಹುತೇಕ ಕಥೆ ಒಂದೇ ಲೊಕೇಷನ್​ನಲ್ಲಿ ನಡೆದರೂ ಕೂಡ ಚಿತ್ರಕಥೆ ಬಿಗಿಯಾಗಿದೆ. ವಿಲನ್​ ಪಾತ್ರದಲ್ಲಿ ಆರ್​. ಮಾಧವನ್ ಚೆನ್ನಾಗಿ ನಟಿಸಿದ್ದಾರೆ’ ಎಂದು ನೆಟ್ಟಿಗರೊಬ್ಬರು ಎಕ್ಸ್​ ಖಾತೆಯಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಹಾರರ್​ ಇಷ್ಟಪಡುವ ಪ್ರೇಕ್ಷಕರಿಗೆ ‘ಶೈತಾನ್​’ ಸಿನಿಮಾ ಹೇಳಿಮಾಡಿಸಿದಂತಿದೆ.

‘ಶೈತಾನ್​ ಸಿನಿಮಾದ ಕಥೆ ಇಂಟರೆಸ್ಟಿಂಗ್​ ಆಗಿದೆ. ಆರ್. ಮಾಧವನ್​ ಅವರ ನಟನೆಯ ಬ್ರಿಲಿಯಂಟ್​ ಆಗಿದೆ. ಜ್ಯೋತಿಕಾ ಮತ್ತು ಅಜಯ್​ ದೇವಗನ್​ ಅವರು ಅಸಹಾಯಕ ಪಾಲಕರಾಗಿ ಅತ್ಯುತ್ತಮ ಅಭಿನಯ ನೀಡಿದ್ದಾರೆ. ಚಿತ್ರಮಂದಿರದಲ್ಲಿ ಸಂಪೂರ್ಣ ಮನರಂಜನೆ ನೀಡುವ ಸಿನಿಮಾ ಇದು’ ಎಂದು ಪ್ರೇಕ್ಷಕರೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ಹೀಗೆ ಹಲವು ಮಂದಿ ಹೊಗಳಿದಿದ್ದಾರೆ.

ವಶೀಕರಣಕ್ಕೆ ಒಳಗಾದ ಯುವತಿಯ ಪಾತ್ರದಲ್ಲಿ ಜಾನಕಿ ಬೋಡಿವಾಲಾ ಅವರು ನಟಿಸಿದ್ದಾರೆ. ಇಡೀ ಕಥೆಯಲ್ಲಿ ಅವರ ಪಾತ್ರವೇ ಜೀವಾಳವಾಗಿದೆ. ಸಿನಿಮಾ ನೋಡಿದ ಎಲ್ಲರೂ ಜಾನಕಿ ಅವರ ಅಭಿನಯವನ್ನು ಕೊಂಡಾಡುತ್ತಿದ್ದಾರೆ. ‘ಅವರ ನಟನೆ ನೋಡಿದ ಬಳಿಕ ನಿಮಗೆ ಖಂಡಿತಾ ಖುಷಿಯಾಗುತ್ತದೆ’ ಎಂದು ಪ್ರೇಕ್ಷಕರು ಶ್ಲಾಘಿಸಿದ್ದಾರೆ. ಮೊದಲ ದಿನದ ಕಲೆಕ್ಷನ್​ ಎಷ್ಟಾಗಲಿದೆ ಎಂದು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!