AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

66ನೇ ವಯಸ್ಸಿನಲ್ಲೂ ‘ಶಕ್ತಿಮಾನ್’ ಪಾತ್ರ ಮಾಡುವ ಆಸೆ; ಟ್ರೋಲ್ ಆದ ನಟ

ಹಿಂದಿ ಕಿರುತೆರೆಯಲ್ಲಿ ‘ಶಕ್ತಿಮಾನ್’ ಸೀರಿಯಲ್ ಮಾಡಿದ ಮೋಡಿ ಅಷ್ಟಿಷ್ಟಲ್ಲ. ‘ದೂರದರ್ಶನ’ ವಾಹಿನಿಯಲ್ಲಿ ಪ್ರಸಾರವಾದ ಆ ಧಾರಾವಾಹಿಯಲ್ಲಿ ಮುಖೇಶ್ ಖನ್ನಾ ಅವರು ಶಕ್ತಿಮಾನ್ ಪಾತ್ರ ಮಾಡಿದ್ದರು. ಆಗ ಅವರಲ್ಲಿ ಯೌವನ ಇತ್ತು. ಆದರೆ ಈಗ ಅವರಿಗೆ 66 ವರ್ಷ ವಯಸ್ಸು ಆಗಿದೆ. ಈಗಲೂ ತಾನೇ ಶಕ್ತಿಮಾನ್ ಆಗ್ತೀನಿ ಎಂದು ಅವರು ಹಠ ಮಾಡುತ್ತಿದ್ದಾರೆ.

66ನೇ ವಯಸ್ಸಿನಲ್ಲೂ ‘ಶಕ್ತಿಮಾನ್’ ಪಾತ್ರ ಮಾಡುವ ಆಸೆ; ಟ್ರೋಲ್ ಆದ ನಟ
ಮುಖೇಶ್ ಖನ್ನಾ
ಮದನ್​ ಕುಮಾರ್​
|

Updated on: Nov 14, 2024 | 6:33 PM

Share

1997ರಿಂದ 2005ನೇ ಇಸವಿ ತನಕ ‘ಶಕ್ತಿಮಾನ್’ ಸೀರಿಯಲ್ ಪ್ರಸಾರ ಆಗಿತ್ತು. ಆ ಪಾತ್ರವನ್ನು ಮಾಡುವ ಮೂಲಕ ಮುಖೇಶ್ ಖನ್ನಾ ಅವರು ಅಪಾರ ಖ್ಯಾತಿ ಗಳಿಸಿದ್ದರು. ಭಾರತದ ಸೂಪರ್​ ಹೀರೋ ‘ಶಕ್ತಿಮಾನ್’ ಪಾತ್ರವನ್ನು ಇಟ್ಟುಕೊಂಡು ಈಗ ಹೊಸ ಸಿನಿಮಾ ಮಾಡಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ‘ಶಕ್ತಿಮಾನ್’ ಸಿನಿಮಾ ಸಿದ್ಧವಾಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ತಡ ಆಗುತ್ತಿದೆ. ಈಗ ಯಾರು ಶಕ್ತಿಮಾನ್ ಪಾತ್ರವನ್ನು ಮಾಡುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಅಚ್ಚರಿ ಏನೆಂದರೆ, ಮತ್ತೆ ತಾವೇ ಆ ಪಾತ್ರವನ್ನು ಮಾಡಲು ಮುಖೇಶ್​ ಖನ್ನಾ ಮುಂದಾಗಿದ್ದಾರೆ. ಇತ್ತೀಚೆಗೆ ಅವರು ಈ ಬಗ್ಗೆ ಅನೌನ್ಸ್ ಮಾಡಿದರು.

ಈ ಮೊದಲು ರಣವೀರ್​ ಸಿಂಗ್​, ಟೈಗರ್​ ಶ್ರಾಫ್ ಮುಂತಾದ ಕಲಾವಿದರ ಹೆಸರುಗಳನ್ನು ಪರಿಗಣಿಸಲಾಗಿತ್ತು. ಆದರೆ ಆ ನಟರ ಇಮೇಜ್​ನಿಂದ ‘ಶಕ್ತಿಮಾನ್’ ಪಾತ್ರಕ್ಕೆ ಅಗೌರವ ತೋರಿದಂತೆ ಆಗುತ್ತದೆ ಎಂದು ಮುಖೇಶ್ ಖನ್ನಾ ಅವರು ಅಡ್ಡಗಾಲು ಹಾಕಿದರು. ಅವರಿಂದಾಗಿ ಈ ಸಿನಿಮಾ ವಿಳಂಬ ಆಗುತ್ತಿದೆ. ಹಾಗಾಗಿ ಪ್ರೇಕ್ಷಕರು ಮುಖೇಶ್ ಖನ್ನಾ ಮೇಲೆ ಮುನಿಸು ತೋರಿಸುತ್ತಿದ್ದಾರೆ.

ಇನ್ನು, ಸೂಪರ್​ ಹೀರೋ ಪಾತ್ರವನ್ನು ಮಾಡುವ ನಟ ಯಂಗ್ ಆಗಿದ್ದರೆ ಉತ್ತಮ. ಆಗ ತೆರೆ ಮೇಲೆ ಆ ಪಾತ್ರ ರಿಯಲಿಸ್ಟಿಕ್ ಆಗಿ ಮೂಡಿಬರುತ್ತದೆ. ಆದರೆ ಮುಖೇಶ್ ಖನ್ನಾ ಅವರು ಬೇರೆ ಎಲ್ಲ ಯುವ ನಟರನ್ನು ಬಿಟ್ಟು, 66ನೇ ವಯಸ್ಸಿನಲ್ಲೇ ತಾನೇ ಶಕ್ತಿಮಾನ್ ಆಗುತ್ತೇನೆ ಎಂದು ಪಟ್ಟು ಹಿಡಿದಿರುವುದರಿಂದ ನೆಟ್ಟಿಗರು ಬೇಸತ್ತಿದ್ದಾರೆ. ‘ಅಯ್ಯೋ ಸಾಕು ಬಿಡು ಮಾರಾಯ’ ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಬೆತ್ತಲೆಯಾದ ನಟ ಶಕ್ತಿಮಾನ್​ ಆಗೋದು ಬೇಡ’: ಖಡಕ್​ ಆಗಿ ಹೇಳಿದ ಮುಖೇಶ್​ ಖನ್ನಾ

ಎಷ್ಟೇ ಟ್ರೋಲ್ ಆದರೂ ಕೂಡ ಮುಖೇಶ್ ಖನ್ನಾ ಅವರು ಹಿಂಜರಿಯುತ್ತಿಲ್ಲ. ತಮ್ಮ ಹೇಳಿಕೆಗಳಿಗೆ ಅವರು ಸಮರ್ಥನೆ ನೀಡುತ್ತಲೇ ಇದ್ದಾರೆ. ಆ ಸಮರ್ಥನೆಗಳನ್ನು ಇಟ್ಟುಕೊಂಡು ಕೂಡ ಜನರು ಮತ್ತೆ ಟ್ರೋಲ್ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮುಖೇಶ್ ಖನ್ನಾ ಮನಸ್ಸು ಬದಲಾಯಿಸಿ ಬೇರೆ ನಟರಿಗೆ ಅವಕಾಶ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ