ಒಂದೇ ಒಂದು ಫೋಟೋದಿಂದ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಪ್ರೇಮ್​​ ಕಹಾನಿ ಬಯಲು; ಇಬ್ಬರ ಕಥೆ ಮುಂದೇನು?

ಬಿಗ್​ ಬಾಸ್​ ಓಟಿಟಿ ಶೋನಲ್ಲಿ ಪರಸ್ಪರ ಕಿಸ್​ ಮಾಡಿಕೊಳ್ಳುವ ಮಟ್ಟಕ್ಕೆ ರಾಕೇಶ್​ ಬಾಪಟ್​ ಮತ್ತು ಶಮಿತಾ ಶೆಟ್ಟಿ ನಡುವೆ ಆಪ್ತತೆ ಬೆಳೆದಿತ್ತು. ಅಚ್ಚರಿ ಎಂದರೆ ಬಿಗ್​ ಬಾಸ್​ನಿಂದ ಹೊರಬಂದ ಬಳಿಕವೂ ಅವರು ತಮ್ಮ ಲವ್ವಿ-ಡವ್ವಿ ಮುಂದುವರಿಸಿದ್ದಾರೆ.

ಒಂದೇ ಒಂದು ಫೋಟೋದಿಂದ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಪ್ರೇಮ್​​ ಕಹಾನಿ ಬಯಲು; ಇಬ್ಬರ ಕಥೆ ಮುಂದೇನು?
ಶಮಿತಾ ಶೆಟ್ಟಿ, ರಾಕೇಶ್ ಬಾಪಟ್
Follow us
| Updated By: ಮದನ್​ ಕುಮಾರ್​

Updated on: Sep 26, 2021 | 8:37 AM

ನಟಿ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಬಿಗ್​ ಬಾಸ್​ ಓಟಿಟಿ ಶೋಗೆ ಕಾಲಿಟ್ಟ ದಿನದಿಂದಲೂ ಅವರ ಬಗ್ಗೆ ಹತ್ತು ಹಲವು ಸುದ್ದಿಗಳು ಹರಿದಾಡುತ್ತಲೇ ಇವೆ. ಸಿನಿಮಾದಲ್ಲಿ ಸಾಧನೆ ಮಾಡಲು ಸಾಧ್ಯವಾಗದ ಅವರು ಈ ರಿಯಾಲಿಟಿ ಶೋ ಮೂಲಕ ಭರ್ಜರಿ ಜನಪ್ರಿಯತೆ ಗಳಿಸಿಕೊಂಡರು. ಅಲ್ಲದೇ ಅವರಿಗೆ ಬಾಯ್​ಫ್ರೆಂಡ್​ ಸಿಕ್ಕಿರುವುದು ಕೂಡ ಇದೇ ಬಿಗ್​ ಬಾಸ್​ ಓಟಿಟಿ ಮೂಲಕ! ಹೌದು, ಬಿಗ್​ ಬಾಸ್​ ಓಟಿಟಿಯಲ್ಲಿ ತಮ್ಮ ಜೊತೆ ಸ್ಪರ್ಧಿಸಿದ್ದ ರಾಕೇಶ್​ ಬಾಪಟ್​ ಮೇಲೆ ಶಮಿತಾಗೆ ಪ್ರೀತಿ ಚಿಗುರಿದೆ. ಅದಕ್ಕೀಗ ಖಡಕ್​ ಸಾಕ್ಷಿ ಕೂಡ ಸಿಕ್ಕಿದೆ.

ಬಿಗ್​ ಬಾಸ್​ ಮನೆಯಲ್ಲಿ ರಾಕೇಶ್​ ಬಾಪಟ್​ ಮತ್ತು ಶಮಿತಾ ಶೆಟ್ಟಿ ತುಂಬ ಆಪ್ತವಾಗಿದ್ದರು. ಪರಸ್ಪರ ಕಿಸ್​ ಮಾಡಿಕೊಳ್ಳುವ ಮಟ್ಟಕ್ಕೆ ಅವರ ನಡುವೆ ಆಪ್ತತೆ ಬೆಳೆದಿತ್ತು. ಅಚ್ಚರಿ ಎಂದರೆ ಬಿಗ್​ ಬಾಸ್​ ಶೋ ಮುಗಿದ ಬಳಿಕವೂ ಅವರು ತಮ್ಮ ಲವ್ವಿ-ಡವ್ವಿ ಮುಂದುವರಿಸಿದ್ದಾರೆ. ಇತ್ತೀಚೆಗೆ ರಾಕೇಶ್​ ಮತ್ತು ಶಮಿತಾ ಜೊತೆಯಾಗಿ ಸುತ್ತಾಡಿದ್ದಾರೆ. ಹಾಗಂತ ಇದು ಗಾಸಿಪ್​ ಅಲ್ಲ. ಸ್ವತಃ ರಾಕೇಶ್​ ಈ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಮುಂಬೈನ ಒಂದು ರೆಸ್ಟೋರೆಂಟ್​ನಲ್ಲಿ ಶಮಿತಾ ಮತ್ತು ರಾಕೇಶ್​ ಜೊತೆಯಾಗಿ ಊಟ ಮಾಡಿದ್ದಾರೆ. ಡಿನ್ನರ್​ ಡೇಟ್​ ಮಾಡಿದ ರಾಕೇಶ್ ಅವರು ಒಂದು ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ತುಂಬ ರೊಮ್ಯಾಂಟಿಕ್​ ಆಗಿದೆ. ಶಮಿತಾರ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿರುವ ರಾಕೇಶ್​, ಈ ಫೋಟೋಗೆ ‘ನೀನು-ನಾನು’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಜೊತೆಗೆ ಹಾರ್ಟ್​ ಸಿಂಬಲ್​ ಇಟ್ಟು ತಮ್ಮ ಪ್ರೀತಿಯನ್ನು ಜಗಜ್ಜಾಹೀರು ಮಾಡಿದ್ದಾರೆ.

ಇದೇ ವೇಳೆ ಮಾಧ್ಯಮದ ಕ್ಯಾಮರಾ ಕಣ್ಣಿಗೂ ಅವರಿಬ್ಬರು ಕಾಣಿಸಿಕೊಂಡರು. ಆದರೆ ಏನನ್ನೂ ಮಾತನಾಡದೇ, ಬರೀ ನಾಚುತ್ತ ಮುಂದೆ ಸಾಗಿದರು. ಶಮಿತಾ ಶೆಟ್ಟಿ ಅವರು ‘ಬಿಗ್​ ಬಾಸ್​ ಹಿಂದಿ ಸೀಸನ್​ 15’ರಲ್ಲೂ ಸ್ಪರ್ಧಿಸುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ಅ.2ರಂದು ಆ ಶೋ ಆರಂಭ ಆಗಲಿದೆ. ಒಮ್ಮೆ ಬಿಗ್​ ಬಾಸ್​ ಮನೆ ಪ್ರವೇಶಿಸಿದರೆ ಮತ್ತೆ ಹೊರಬರುವುದು ಯಾವಾಗ ಎಂಬ ಬಗ್ಗೆ ಖಚಿತತೆ ಇರುವುದಿಲ್ಲ. ಹಾಗಾಗಿ ಅವರು ದೊಡ್ಮನೆಗೆ ತೆರಳುವುದಕ್ಕೂ ಮುನ್ನ ರಾಕೇಶ್​ ಜೊತೆ ಆಪ್ತವಾಗಿ ಸಮಯ ಕಳೆದಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:

ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​​ ಸಂಬಂಧಕ್ಕೆ ಮನೆಯವರ ಒಪ್ಪಿಗೆ? ಶಿಲ್ಪಾ ಶೆಟ್ಟಿ ತಾಯಿಯಿಂದ ಹೊಗಳಿಕೆ​

ಶಮಿತಾ ಶೆಟ್ಟಿ ಬಿಗ್​ ಬಾಸ್​ ಆಟ ಇನ್ನೂ ನಿಂತಿಲ್ಲ; ದೊಡ್ಮನೆಯಲ್ಲಿ ಮತ್ತೆ ಸೌಂಡು ಮಾಡಲಿರುವ ಶಿಲ್ಪಾ ತಂಗಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ