AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shamita Shetty: ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ

ರಾಜ್ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಶೆಟ್ಟಿ ಕುಗ್ಗಿ ಹೋಗಿದ್ದರು. ಅವರಿಗೆ ಈ ಘಟನೆ ನಿಜಕ್ಕೂ ಶಾಕಿಂಗ್​ ಆಗಿತ್ತು. ಈ ಘಟನೆಯಿಂದ ಹೊರ ಬರೋದು ಹೇಗೆ ಎನ್ನುವ ಚಿಂತೆ ಕಾಡಿತ್ತು.

Shamita Shetty: ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ
ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ
TV9 Web
| Edited By: |

Updated on:Sep 19, 2021 | 7:54 PM

Share

 ಶಿಲ್ಪಾ ಶೆಟ್ಟಿ ಹಾಗೂ ಅವರ ಸಹೋದರಿ ಶಮಿತಾ ಶೆಟ್ಟಿ ನಡುವೆ ಆಪ್ತತೆ ಇದೆ. ಶಿಲ್ಪಾ ಎಲ್ಲಾ ವಿಚಾರಗಳನ್ನು ಶಮಿತಾ ಜತೆ ಹಂಚಿಕೊಳ್ಳುತ್ತಾರೆ. ಒಬ್ಬರ ಕಷ್ಟಕ್ಕೆ ಮತ್ತೊಬ್ಬರು ಆಗುತ್ತಾರೆ. ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಅರೆಸ್ಟ್​ ಆದಾಗ ಶಿಲ್ಪಾಗೆ ಶಮಿತಾ ಧೈರ್ಯ ತುಂಬಿದ್ದರು. ಈ ಬೆಳವಣಿಗೆ ಆದ ಕೆಲವೇ ದಿನಗಳಲ್ಲಿ ಶಮಿತಾ ಬಿಗ್​ ಬಾಸ್​ ಒಟಿಟಿಗೆ ಹೋಗುವ ಪ್ರಸಂಗ ಬಂದಿತ್ತು. ಈಗ ಶಮಿತಾ ಬಿಗ್​ ಬಾಸ್​ ಒಟಿಟಿಯಿಂದ ಹೊರ ಬಂದು ಶಿಲ್ಪಾ ಅವರನ್ನು ಭೇಟಿ ಆಗಿ ಮಾತನಾಡಿದ್ದಾರೆ.

ರಾಜ್ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಶೆಟ್ಟಿ ಕುಗ್ಗಿ ಹೋಗಿದ್ದರು. ಅವರಿಗೆ ಈ ಘಟನೆ ನಿಜಕ್ಕೂ ಶಾಕಿಂಗ್​ ಆಗಿತ್ತು. ಈ ಘಟನೆಯಿಂದ ಹೊರ ಬರೋದು ಹೇಗೆ ಎನ್ನುವ ಚಿಂತೆ ಕಾಡಿತ್ತು. ಆ ಸಂದರ್ಭದಲ್ಲಿ ಶಿಲ್ಪಾಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು ತಂಗಿ ಶಮಿತಾ ಶೆಟ್ಟಿ. ಆದರೆ, ಕೆಲವೇ ದಿನಗಳಲ್ಲಿ ಅವರು ಬಿಗ್​ ಬಾಸ್​ ಮನೆ ಒಳಗೆ ಹೋಗೋ ಪರಿಸ್ಥಿತಿ ಬಂದಿತ್ತು. ಇದರಿಂದ ಶಿಲ್ಪಾ ಸ್ವಲ್ಪ ಬೇಸರಪಟ್ಟಿಕೊಂಡಿದ್ದರು. ಆದರೆ, ಈಗ ಇಬ್ಬರೂ ಮತ್ತೆ ಒಂದಾಗಿದ್ದಾರೆ.

ರೀಯೂನಿಯನ್​ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ. ಶಮಿತಾ ಶೆಟ್ಟಿ ಕೆಂಪು ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಶಮಿತಾಗೆ ಶಿಲ್ಪಾ ಕಿಸ್ ಮಾಡಿದ್ದಾರೆ. ಸದ್ಯ ಈ ಫೋಟೋಗೆ ಅಭಿಮಾನಿಗಳು ಸಾಕಷ್ಟು ಪ್ರೀತಿ ತೋರಿಸುತ್ತಿದ್ದಾರೆ.

‘ಬಿಗ್​ ಬಾಸ್​ ಒಟಿಟಿ’ ವಿನ್ನರ್​ ಆಗಿ ದಿವ್ಯಾ ಅಗರ್​ವಾಲ್​ ಹೊರಹೊಮ್ಮಿದ್ದಾರೆ. ಭಾನುವಾರ (ಸೆಪ್ಟೆಂಬರ್​ 18) ನಡೆದ ಫಿನಾಲೆ ಎಪಿಸೋಡ್​ನಲ್ಲಿ ದಿವ್ಯಾ ಹೆಸರನ್ನು ವಿನ್ನರ್​ ಎಂದು ನಿರೂಪಕ ಕರಣ್​ ಜೋಹರ್​ ಘೋಷಣೆ ಮಾಡಿದ್ದಾರೆ. ಶಮಿತಾ ಶೆಟ್ಟಿ ಎರಡನೇ ರನ್ನರ್​ ಅಪ್​ ಆಗಿದ್ದಾರೆ. ನಿಶಾಂತ್​ ಭಟ್​ ಮೊದಲ ರನ್ನರ್​ ಅಪ್​ ಆಗಿದ್ದಾರೆ.

ಇದನ್ನೂ ಓದಿ: ದಿವ್ಯಾ ಅಗರ್​ವಾಲ್​ಗೆ ಒಲಿದ ಬಿಗ್​ ಬಾಸ್​ ಒಟಿಟಿ; ಶಮಿತಾ ಶೆಟ್ಟಿಗೆ ನಿರಾಸೆ, ಇವರಿಗೆ ಸಿಗ್ತಿರೋ ಹಣ ಎಷ್ಟು?

Published On - 7:53 pm, Sun, 19 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ