AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆಯಾಗಿ ನೀವೇನು ಸಾಧಿಸಿದ್ದೀರಾ?’: ಮದುವೆ ವಿಷಯದಲ್ಲಿ ಟ್ರೋಲ್ ಮಾಡಿದವರಿಗೆ ಶಮಿತಾ ಶೆಟ್ಟಿ ಖಡಕ್ ಉತ್ತರ

47 ವರ್ಷದ ಬಾಲಿವುಡ್ ನಟಿ ಶಮಿತಾ ಶೆಟ್ಟಿ ಮದುವೆಯಾಗದ ಕಾರಣ ಟ್ರೋಲ್‌ಗೆ ಒಳಗಾಗಿದ್ದರು. ಸಮಾಜದ ನಿರೀಕ್ಷೆಗೆ ಬಗ್ಗದೆ, ತಮ್ಮ ವೈಯಕ್ತಿಕ ಆಯ್ಕೆಯನ್ನು ಸಮರ್ಥಿಸಿಕೊಂಡಿರುವ ಅವರು, ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ವಯಸ್ಸು ಮತ್ತು ಮದುವೆಯ ಬಗ್ಗೆ ಟೀಕಿಸಿದ ಟ್ರೋಲರ್‌ಗಳಿಗೆ ಖಡಕ್ ಉತ್ತರ ನೀಡಿದ್ದಾರೆ. ಪಿತೃಪ್ರಧಾನ ಆಲೋಚನೆಗಳನ್ನು ಪ್ರಶ್ನಿಸುವ ಮೂಲಕ ಅನಗತ್ಯ ಕಾಮೆಂಟ್‌ಗಳಿಗೆ ಶಮಿತಾ ದಿಟ್ಟ ತಿರುಗೇಟು ನೀಡಿದ್ದಾರೆ.

‘ಮದುವೆಯಾಗಿ ನೀವೇನು ಸಾಧಿಸಿದ್ದೀರಾ?’: ಮದುವೆ ವಿಷಯದಲ್ಲಿ ಟ್ರೋಲ್ ಮಾಡಿದವರಿಗೆ ಶಮಿತಾ ಶೆಟ್ಟಿ ಖಡಕ್ ಉತ್ತರ
ಶಮಿತಾ
ರಾಜೇಶ್ ದುಗ್ಗುಮನೆ
|

Updated on: May 28, 2026 | 6:35 AM

Share

ಬಾಲಿವುಡ್ ನಟಿ ಶಮಿತಾ ಶೆಟ್ಟಿ ಅವರಿಗೆ ಈಗ 47 ವಯಸ್ಸು. ಅವರ ಅಕ್ಕ, ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಈಗಾಗಲೇ 14 ವರ್ಷದ ಮಗನಿದ್ದರೂ, ಶಮಿತಾ ಮಾತ್ರ ಮದುವೆಯಾಗಲು ಯಾವುದೇ ಗಡಿಬಿಡಿ ಮಾಡಿಕೊಂಡಿಲ್ಲ. ಸಮಾಜ ಹೇಳುತ್ತದೆ ಎಂಬ ಕಾರಣಕ್ಕೆ ತಮಗೆ ಮದುವೆ ಆಗಲು ಇಷ್ಟವಿಲ್ಲ ಎಂಬುದನ್ನು ಅವರು ಮೊದಲಿನಿಂದಲೂ ಹೇಳುತ್ತಾ ಬಂದಿದ್ದಾರೆ. ಆದರೆ, ಇದನ್ನೇ ನೆಪವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಟ್ರೋಲ್ ಮಾಡಲಾಗಿದೆ. ಟ್ರೋಲರ್‌ಗಳಿಗೆ ಶಮಿತಾ ಈಗ ತಕ್ಕ ಶಾಸ್ತಿ ಮಾಡಿದ್ದಾರೆ.

ಟ್ರೋಲರ್‌ಗಳ ಬಾಯಿ ಮುಚ್ಚಿಸಿದ ನಟಿ

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕಾಮೆಂಟ್ ಒಂದರ ಸ್ಕ್ರೀನ್‌ಶಾಟ್ ಹಂಚಿಕೊಂಡಿರುವ ಶಮಿತಾ, ಟ್ರೋಲ್ ಮಾಡಿದ ವ್ಯಕ್ತಿಗೆ ಸುದೀರ್ಘವಾದ ಮತ್ತು ಖಡಕ್ ಆದ ಸಂದೇಶವೊಂದನ್ನು ಬರೆದಿದ್ದಾರೆ. ‘ನಿಮ್ಮ ಅದ್ಭುತವಾದ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಲು ನಾನು ಈ ಉತ್ತಮ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ನಿಮಗೆ ವಯಸ್ಸಾಗಿದೆ, ಹಳೇ ಕಳೆ ಈಗ ಉಳಿದಿಲ್ಲ ಎಂದು ನೀವು ಬರೆದಿದ್ದೀರಿ. ಹೌದು, ವಯಸ್ಸಾದಂತೆ ನಾನು ವಿಭಿನ್ನವಾಗಿ ಕಾಣುತ್ತಿರುವುದು ನಿಜ. ಸಮಯದೊಂದಿಗೆ ಎಲ್ಲವೂ ಬದಲಾಗುತ್ತದೆ. ಇದು ಪ್ರಕೃತಿಯ ನಿಯಮ. ದೈಹಿಕ ರೂಪ ಸೇರಿದಂತೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ. ಆದರೆ ಈ ವಯಸ್ಸಿನಲ್ಲೂ ನಾನು ಆರೋಗ್ಯವಾಗಿದ್ದೇನೆ, ಫಿಟ್ ಆಗಿದ್ದೇನೆ ಮತ್ತು ಭಗವಂತ ನನಗೆ ನೀಡಿರುವ ಎಲ್ಲದಕ್ಕೂ ಕೃತಜ್ಞತೆಯಿಂದ ಸಂತೋಷವಾಗಿದ್ದೇನೆ. ನನಗೆ ಅಷ್ಟೇ ಸಾಕು,’ ಎಂದು ಶಮಿತಾ ಬರೆದಿದ್ದಾರೆ.

‘ಮದುವೆಯಾಗಿ ನೀವೇನು ಕಿತ್ತಾಕಿದ್ದೀರಾ?’

‘ಸಮಯಕ್ಕೆ ಸರಿಯಾಗಿ ಮದುವೆಯಾಗಿದ್ದರೆ ನಿಮ್ಮ ಮಕ್ಕಳು ಇಷ್ಟೊತ್ತಿಗೆ ದೊಡ್ಡವರಾಗುತ್ತಿದ್ದರು’ ಎಂಬ ಕಾಮೆಂಟ್‌ಗೆ ಉತ್ತರಿಸಿದ ಅವರು, ‘ಅದಕ್ಕೀಗೇನು? ನೀವು ಎಲ್ಲರಿಗೂ ಗೊತ್ತಿರುವ ವಿಷಯವನ್ನೇ ಹೇಳಿದ್ದೀರಿ. ಆದರೆ ಮದುವೆಯಾಗಿ ನೀವೇನು ಸಾಧಿಸಿದ್ದೀರಾ? ಎಲ್ಲದಕ್ಕಿಂತ ಮುಖ್ಯವಾಗಿ, ಒಂಟಿ ಮಹಿಳೆಯರನ್ನು ಈ ರೀತಿ ವಯಸ್ಸಿನ ಹೆಸರಿನಲ್ಲಿ ಅವಮಾನಿಸಲು ಮತ್ತು ನಿಮ್ಮ ಪಿತೃಪ್ರಧಾನ, ಹಳಸಲು ಆಲೋಚನೆಗಳನ್ನು ನಮ್ಮ ಮೇಲೆ ಹೇರಲು ನೀವು ನಮ್ಮನ್ನು ಏಕೆ ಫಾಲೋ ಮಾಡುತ್ತೀರಿ? ದಯವಿಟ್ಟು ನನಗೊಂದು ಉಪಕಾರ ಮಾಡಿ, ತಕ್ಷಣ ನನ್ನನ್ನು ಅನ್‌ಫಾಲೋ ಮಾಡಿ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಚಿತ್ರರಂಗದಿಂದ ರಿಯಾಲಿಟಿ ಶೋಗಳವರೆಗೆ…

2000ನೇ ಇಸವಿಯಲ್ಲಿ ಆದಿತ್ಯ ಚೋಪ್ರಾ ಅವರ ಬ್ಲಾಕ್‌ಬಸ್ಟರ್ ಸಿನಿಮಾ ‘ಮೊಹಬ್ಬತೇನ್’ ಮೂಲಕ ಶಮಿತಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರು. ತದನಂತರ ‘ಜೆಹರ್’, ‘ಫರೇಬ್’ ಮತ್ತು ‘ಕ್ಯಾಶ್’ ನಂತಹ ಸಿನಿಮಾಗಳಲ್ಲಿ ನಟಿಸಿದರು. ಆ ಬಳಿಕ ಚಿತ್ರರಂಗದಿಂದ ಬ್ರೇಕ್ ಪಡೆದು ಇಂಟೀರಿಯರ್ ಡಿಸೈನಿಂಗ್ ಕಡೆ ಗಮನ ಹರಿಸಿದ್ದ ಶಮಿತಾ, ನಂತರದ ದಿನಗಳಲ್ಲಿ ರಿಯಾಲಿಟಿ ಶೋಗಳ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿದರು.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಬಾಳಲ್ಲಿ ಬ್ರೇಕಪ್​; ರಾಕೇಶ್​ ಬಾಪಟ್​ ಜತೆಗಿನ ಸಂಬಂಧ ಅಂತ್ಯ

‘ಝಲಕ್ ದಿಖ್ಲಾ ಜಾ 8’, ‘ಖತ್ರೋನ್ ಕೆ ಕಿಲಾಡಿ 9’, ‘ಬಿಗ್ ಬಾಸ್ ಒಟಿಟಿ’ ಮತ್ತು ‘ಬಿಗ್ ಬಾಸ್ 15’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಭಾರಿ ಜನಪ್ರಿಯತೆ ಗಳಿಸಿದರು. ‘ಬಿಗ್ ಬಾಸ್’ ಮನೆಯಲ್ಲಿದ್ದಾಗ ಸಹ-ಸ್ಪರ್ಧಿ ರಾಕೇಶ್ ಬಾಪಟ್ ಜೊತೆಗಿನ ಇವರ ಪ್ರೇಮಕಥೆ ಭಾರಿ ಸದ್ದು ಮಾಡಿತ್ತಾದರೂ, 2022ರಲ್ಲಿ ತಾವಿಬ್ಬರು ಪರಸ್ಪರ ಒಪ್ಪಿಗೆಯಿಂದ ದೂರಾಗಿರುವುದಾಗಿ ಶಮಿತಾ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ