AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ನಿನ್ನ ಜತೆ ಸದಾ ನಾನಿರುತ್ತೇನೆ‘; ಶಿಲ್ಪಾ ಶೆಟ್ಟಿಗೆ ಧೈರ್ಯ ತುಂಬಿದ ಸಹೋದರಿ ಶಮಿತಾ ಶೆಟ್ಟಿ

ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ‘ಹಂಗಾಮಾ 2’ ಚಿತ್ರದ ಮೂಲಕ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ.

’ನಿನ್ನ ಜತೆ ಸದಾ ನಾನಿರುತ್ತೇನೆ‘; ಶಿಲ್ಪಾ ಶೆಟ್ಟಿಗೆ ಧೈರ್ಯ ತುಂಬಿದ ಸಹೋದರಿ ಶಮಿತಾ ಶೆಟ್ಟಿ
ಶಮಿತಾ ಶೆಟ್ಟಿಗೆ ಆಂಟಿ ಎಂದ ನಟಿ; ಜಗಳಕ್ಕೆ ಇಳಿದ ಶಿಲ್ಪಾ ಶೆಟ್ಟಿ ತಂಗಿ
TV9 Web
| Edited By: |

Updated on: Jul 24, 2021 | 6:39 PM

Share

ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ (Raj Kundra) ನೀಲಿ ಚಿತ್ರಗಳ ದಂಧೆಯಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇದರಿಂದ ಶಿಲ್ಪಾ ಶೆಟ್ಟಿಗೂ ಕೆಟ್ಟ ಹೆಸರು ಬಂದಿದೆ. ಮಾಡೆಲ್​ ಮತ್ತು ನಟಿಯರನ್ನು ಬಳಸಿಕೊಂಡು ರಾಜ್​ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು (Porn) ಮಾಡುತ್ತಿದ್ದರು ಎಂಬ ಆರೋಪ ಎದುರಾಗಿದೆ. ಇದರ ಮಧ್ಯೆಯೇ ಶಿಲ್ಪಾ ಶೆಟ್ಟಿ ನಟನೆಯ ಹಂಗಾಮಾ 2 ಸಿನಿಮಾ ರಿಲೀಸ್​ ಆಗಿದೆ. ಈ ಸಿನಿಮಾಗೆ ಶುಭಾಶಯಗಳ ಸುರಿಮಳೆ ಹರಿದು ಬಂದಿದೆ.

ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ‘ಹಂಗಾಮಾ 2’ ಚಿತ್ರದ ಮೂಲಕ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಓಟಿಟಿ ಮೂಲಕ ರಿಲೀಸ್​ ಆಗಿರುವ ಈ ಚಿತ್ರಕ್ಕೆ ಶಿಲ್ಪಾ ಸಹೋದರಿ ಶಮಿತಾ ಶೆಟ್ಟಿ ಶುಭ ಕೋರಿದ್ದಾರೆ.

’14 ವರ್ಷಗಳ ನಂತರ ನಿನ್ನ ನಟನೆಯ ಹಂಗಾಮಾ 2 ರಿಲೀಸ್​ ಆಗುತ್ತಿದೆ. ನಿನಗೆ ಶುಭವಾಗಲಿ. ನೀನು ಇದಕ್ಕಾಗಿ ಸಾಕಷ್ಟು ಪರಿಶ್ರಮ ಪಟ್ಟಿದ್ದೀಯಾ ಎನ್ನುವುದು ಗೊತ್ತು. ನಾನು ನಿನ್ನ ಜತೆ ಸದಾ ಇರುತ್ತೇನೆ. ನೀನು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದೀಯಾ. ಪ್ರತಿ ಬಾರಿ ಮತ್ತಷ್ಟು ಸ್ಟ್ರಾಂಗ್​ ಆಗುತ್ತಿದ್ದೀಯಾ. ಈ ಕಷ್ಟವೂ ಕಳೆದು ಹೋಗುತ್ತದೆ. ಹಂಗಾಮಾ 2 ತಂಡಕ್ಕೆ ಆಲ್​ ದಿ ಬೆಸ್ಟ್​ ಎಂದಿದ್ದಾರೆ’ ಶಿಲ್ಪಾ.

‘ಯೋಗ ಕಲಿಸಿದ ಪಾಠಗಳನ್ನು ನಾನು ನಂಬುತ್ತೇನೆ ಮತ್ತು ಪಾಲಿಸುತ್ತೇನೆ. ಬದುಕು ಇರುವುದೇ ಈ ಕ್ಷಣದಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಲು ‘ಹಂಗಮಾ 2’ ತಂಡ ಶ್ರಮಿಸಿದೆ. ಎಂದಿಗೂ ಸಿನಿಮಾಗೆ ತೊಂದರೆ ಆಗಬಾರದು. ಹಾಗಾಗಿ, ಇಂದು ನೀವು ನಿಮ್ಮ ಕುಟುಂಬ ಸಮೇತ ಈ ಸಿನಿಮಾ ನೋಡಿ ಅಂತ ನಾನು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್​ ಮಾಡಿದ್ದರು.

ಜು.27ರವರೆಗೂ ರಾಜ್​ ಕುಂದ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆ ಮೇಲೂ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ತನಿಖೆ ವೇಳೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತನಿಖೆಗೆ ರಾಜ್​ ಕುಂದ್ರಾ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಪೂನಂ ಪಾಂಡೆ ಸೇರಿದಂತೆ ಅನೇಕ ನಟಿಯರು ಅವರ ಮೇಲೆ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು