AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯ ಬೀಳಿಸುವಂತಿದೆ ರಣಬೀರ್ ಕಪೂರ್ ಹೊಸ ಲುಕ್; ಯಾವ ಸಿನಿಮಾ?

‘ಬ್ರಹ್ಮಾಸ್ತ್ರ’ ಸಿನಿಮಾ ಕೆಲಸಗಳಲ್ಲಿ ರಣಬೀರ್ ಕಪೂರ್ ತೊಡಗಿಕೊಂಡಿದ್ದಾರೆ. ವಿಶೇಷ ಎಂದರೆ ಈ ಚಿತ್ರದ ಮಧ್ಯೆ ‘ಶಂಷೇರಾ’ ಸಿನಿಮಾ ಕೆಲಸಗಳನ್ನು ಮುಗಿಸಿದ್ದಾರೆ ರಣಬೀರ್​.

ಭಯ ಬೀಳಿಸುವಂತಿದೆ ರಣಬೀರ್ ಕಪೂರ್ ಹೊಸ ಲುಕ್; ಯಾವ ಸಿನಿಮಾ?
ರಣಬೀರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 18, 2022 | 8:08 PM

Share

ನಟ ರಣಬೀರ್ ಕಪೂರ್ ಅವರಿಗೆ (Ranbir Kapoor) ‘ಸಂಜು’ ಸಿನಿಮಾ ದೊಡ್ಡ ಮಟ್ಟದ ಹಿಟ್ ಕೊಟ್ಟಿತ್ತು. ಈ ಚಿತ್ರದಲ್ಲಿ ಹಲವು ಗೆಟಪ್​ನಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ಸಿನಿಮಾ ತೆರೆಕಂಡ ಬಳಿಕ ರಣಬೀರ್ ಕಪೂರ್ ಮೇಲಿದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ಈ ನಿರೀಕ್ಷೆಗೆ ತಕ್ಕಂತೆಯೇ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಸೆಪ್ಟೆಂಬರ್​ನಲ್ಲಿ ರಿಲೀಸ್ ಆಗಲಿರುವ ‘ಬ್ರಹ್ಮಾಸ್ತ್ರ’ ಸಿನಿಮಾ (Brahmastra Movie) ಮೂಲಕ ರಣಬೀರ್ ಫ್ಯಾಂಟಸಿ ಕಥೆ ಹೇಳುತ್ತಿದ್ದಾರೆ. ಈಗ ಅವರ ನಟನೆಯ ‘ಶಂಷೇರಾ’ ಸಿನಿಮಾದ (Shamshera) ಲುಕ್ ಅನಾವರಣಗೊಂಡಿದೆ. ಈ ಲುಕ್ ಭಯ ಬೀಳಿಸುವಂತಿದೆ. ಅವರ ಟ್ರಾನ್ಸ್​ಫಾರ್ಮೇಷನ್ ನೋಡಿ ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದಾರೆ.

ಸದ್ಯ, ‘ಬ್ರಹ್ಮಾಸ್ತ್ರ’ ಸಿನಿಮಾ ಕೆಲಸಗಳಲ್ಲಿ ರಣಬೀರ್ ಕಪೂರ್ ತೊಡಗಿಕೊಂಡಿದ್ದಾರೆ. ವಿಶೇಷ ಎಂದರೆ ಈ ಚಿತ್ರದ ಮಧ್ಯೆ ‘ಶಂಷೇರಾ’ ಸಿನಿಮಾ ಕೆಲಸಗಳನ್ನು ಮುಗಿಸಿದ್ದಾರೆ ರಣಬೀರ್​. ವಾಣಿ ಕಪೂರ್ ಹಾಗೂ ಸಂಜಯ್ ದತ್ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅನೇಕ ವದಂತಿಗಳು ಹಬ್ಬಿದ್ದವು. ಕೆಲ ಫ್ಯಾನ್​ ಮೇಡ್ ಪೋಸ್ಟರ್​ಗಳು ಕೂಡ ವೈರಲ್ ಆಗಿತ್ತು. ಈಗ ನಿರ್ದೇಶಕ ಕರಣ್ ಮಲ್ಹೋತ್ರಾ ಅವರು ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಿ, ಚಿತ್ರದ ಬಗ್ಗೆ ಇರುವ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ.

ಇದನ್ನೂ ಓದಿ
Image
Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
Image
​‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಗಮನ ಸೆಳೆದ ಪಾತ್ರವರ್ಗ; ಆಲಿಯಾ, ರಣಬೀರ್​ ಜತೆ ಬಚ್ಚನ್​, ನಾಗಾರ್ಜುನ ಮಿಂಚಿಂಗ್​
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?

ರಣಬೀರ್ ಅವರ ‘ಶಂಷೇರಾ’ ಲುಕ್ ಭಯಾನಕವಾಗಿದೆ. ರಣಬೀರ್ ಉದ್ದನೆಯ ಕೂದಲು ಬಿಟ್ಟಿದ್ದಾರೆ. ಅವರ ಗಡ್ಡ ಕೂಡ ಹೇಗೇಗೋ ಬೆಳೆದುಕೊಂಡಿದೆ. ಕೈಯಲ್ಲಿ ಕೊಡಲಿ ರೀತಿಯ ಆಯುಧ ಒಂದನ್ನು ಹಿಡಿದಿದ್ದಾರೆ. ಅವರ ಮುಖ ತುಂಬಾನೇ ಸಿಟ್ಟಿನಿಂದ ಕೂಡಿದೆ. ಈ ಚಿತ್ರ ಜುಲೈ 22 ರಂದು ತೆರೆಗೆ ಬರುವ ಬಗ್ಗೆಯೂ ಈ ಪೋಸ್ಟರ್​ನಲ್ಲಿ ಘೋಷಣೆ ಮಾಡಲಾಗಿದೆ.

‘ಮತ್ತೊಂದು ಬ್ಲಾಕ್​ಬಸ್ಟರ್​ ಸಿನಿಮಾ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಆರ್​ಕೆ ಅವರು ಕಂಬ್ಯಾಕ್ ಮಾಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟರ್​ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಂತೂ ನಿಜ.

ಇದನ್ನೂ ಓದಿ: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು

2018ರಲ್ಲಿ ತೆರೆಗೆ ಬಂದ ‘ಸಂಜು’ ಸಿನಿಮಾ ಬಳಿಕ ರಣಬೀರ್ ಸಿನಿಮಾ ಒಪ್ಪಿಕೊಳ್ಳಲು ಆತುರ ಮಾಡಲಿಲ್ಲ. ತುಂಬಾನೇ ಆಲೋಚಿಸಿ ಸಿನಿಮಾ ಒಪ್ಪಿಕೊಂಡರು. ಈಗ ‘ಬ್ರಹ್ಮಾಸ್ತ್ರ’ ಚಿತ್ರ ತೆರೆಗೆ ಬರುವುದಕ್ಕೂ ಮೊದಲೇ ‘ಶಂಷೇರಾ’ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:57 pm, Sat, 18 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ