AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿಪಾತ್ರದಲ್ಲಿ ಮಿಂಚಿದ ರಣಬೀರ್ ಕಪೂರ್​; ನಿರೀಕ್ಷೆ ಹೆಚ್ಚಿಸಿದ ‘ಶಂಷೇರಾ’ ಟ್ರೇಲರ್

Shamshera Trailer: ಇಡೀ ಸಿನಿಮಾದ ಕಥೆ 1800ರಲ್ಲಿ ಸಾಗಲಿದೆ. ಕಥಾ ನಾಯಕ ಶಂಷೇರಾ ಡಕಾಯಿತಿ ಮಾಡುವ ಪಂಗಡಕ್ಕೆ ಸೇರಿದವನು. ಅವನು ಬ್ರಿಟಿಷರ ವಿರುದ್ಧ ಹೋರಾಟ ಮಾಡುತ್ತಾನೆ. ಇದಿಷ್ಟು ವಿಚಾರವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ.

ದ್ವಿಪಾತ್ರದಲ್ಲಿ ಮಿಂಚಿದ ರಣಬೀರ್ ಕಪೂರ್​; ನಿರೀಕ್ಷೆ ಹೆಚ್ಚಿಸಿದ ‘ಶಂಷೇರಾ’ ಟ್ರೇಲರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 24, 2022 | 2:31 PM

Share

ರಣಬೀರ್ ಕಪೂರ್ (Ranbir Kapoor) ಅವರು ನಾಲ್ಕು ವರ್ಷಗಳ ಬಳಿಕ ಬೆಳ್ಳಿ ಪರದೆಗೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ಶಂಷೇರಾ’ ಚಿತ್ರ (Shamshera) ಜುಲೈ 22ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ರಿಲೀಸ್​ಗೆ ಒಂದು ತಿಂಗಳು ಬಾಕಿ ಇರುವಾಗ ಚಿತ್ರದ ಟ್ರೇಲರ್ ರಿಲೀಸ್ ಮಾಡಲಾಗಿದೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಪೋಸ್ಟರ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿತ್ತು. ಈಗ ರಿಲೀಸ್ ಆದ ಟ್ರೇಲರ್​ನಲ್ಲಿ ಈ ನಿರೀಕ್ಷೆಯನ್ನು ದ್ವಿಗುಣ ಮಾಡಿದೆ. ಈ ಚಿತ್ರದಲ್ಲಿ ರಣಬೀರ್ ಅವರು ದ್ವಿಪಾತ್ರ ಮಾಡುತ್ತಿದ್ದಾರೆ. ತಂದೆ ಹಾಗೂ ಮಗನಾಗಿ ರಣಬೀರ್ ಕಾಣಿಸಿಕೊಳ್ಳುತ್ತಿದ್ದಾರೆ.

ಇಡೀ ಸಿನಿಮಾದ ಕಥೆ 1800ರಲ್ಲಿ ಸಾಗಲಿದೆ. ಕಥಾ ನಾಯಕ ಶಂಷೇರಾ ಡಕಾಯಿತಿ ಮಾಡುವ ಪಂಗಡಕ್ಕೆ ಸೇರಿದವನು. ಅವನು ಬ್ರಿಟಿಷರ ವಿರುದ್ಧ ಹೋರಾಟ ಮಾಡುತ್ತಾನೆ. ಇದಿಷ್ಟು ವಿಚಾರವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಸಂಜಯ್ ದತ್ ಅವರು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಟ್ರೇಲರ್​ನಲ್ಲಿ ಹೈಲೈಟ್ ಆಗಿದೆ.

‘ಶಂಷೇರಾ’ ಟ್ರೇಲರ್​ನಲ್ಲಿ ರಣಬೀರ್ ಅವರ ಲುಕ್ ಭಯಾನಕವಾಗಿದೆ. ರಣಬೀರ್ ಉದ್ದನೆಯ ಕೂದಲು ಬಿಟ್ಟಿದ್ದಾರೆ. ಅವರ ಗಡ್ಡ ಕೂಡ ಹೇಗೇಗೋ ಬೆಳೆದುಕೊಂಡಿದೆ. ಕೈಯಲ್ಲಿ ಕೊಡಲಿ ರೀತಿಯ ಆಯುಧ ಒಂದನ್ನು ಹಿಡಿದಿದ್ದಾರೆ. ವಾಣಿ ಕಪೂರ್ ಅವರು ಬೋಲ್ಡ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ
Image
Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
Image
​‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಗಮನ ಸೆಳೆದ ಪಾತ್ರವರ್ಗ; ಆಲಿಯಾ, ರಣಬೀರ್​ ಜತೆ ಬಚ್ಚನ್​, ನಾಗಾರ್ಜುನ ಮಿಂಚಿಂಗ್​
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?

ಈ ಸಿನಿಮಾ ರಣಬೀರ್ ಕಪೂರ್ ಹಾಗೂ ನಿರ್ಮಾಪಕ ಯಶ್ ಚೋಪ್ರಾ ಇಬ್ಬರಿಗೂ ಬಹುಮುಖ್ಯವಾಗಿದೆ. 2018ರಲ್ಲಿ ತೆರೆಗೆ ಬಂದ ‘ಸಂಜು’ ಸಿನಿಮಾ ಬಳಿಕ ರಣಬೀರ್ ಸಿನಿಮಾ ಒಪ್ಪಿಕೊಳ್ಳಲು ಆತುರ ಮಾಡಲಿಲ್ಲ. ತುಂಬಾನೇ ಆಲೋಚಿಸಿ ಸಿನಿಮಾ ಒಪ್ಪಿಕೊಂಡರು. ನಾಲ್ಕು ವರ್ಷಗಳ ಗ್ಯಾಪ್​ನ ನಂತರ ಬರುತ್ತಿರುವುದರಿಂದ ಅವರಿಗೆ ಗೆಲ್ಲುವ ಅನಿವಾರ್ಯತೆ ಇದೆ. ಇನ್ನು, ಈ ಚಿತ್ರಕ್ಕೆ ಯಶ್​ ಚೋಪ್ರಾ ಅವರು ಬಂಡವಾಳ ಹೂಡಿದ್ದಾರೆ. ಈ ವರ್ಷ ತೆರೆಗೆ ಬಂದ ಅವರ ನಿರ್ಮಾಣದ ‘ಜಯೇಶ್​ಭಾಯ್​ ಜೋರ್ದಾರ್​’ ಹಾಗೂ ‘ಸಾಮ್ರಾಟ್ ಪೃಥ್ವಿರಾಜ್​’ ಚಿತ್ರಗಳು ಸೋತವು. ಈ ಚಿತ್ರಗಳಿಂದ ಆದಿತ್ಯ ಚೋಪ್ರಾಗೆ ದೊಡ್ಡ ನಷ್ಟ ಉಂಟಾಗಿದೆ. ‘ಶಂಷೇರಾ’ ಚಿತ್ರ 150 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಹೀಗಾಗಿ, ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡಲೇಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: ಭಯ ಬೀಳಿಸುವಂತಿದೆ ರಣಬೀರ್ ಕಪೂರ್ ಹೊಸ ಲುಕ್; ಯಾವ ಸಿನಿಮಾ? 

ಶೂ ಧರಿಸಿ ರಣಬೀರ್ ದೇವಸ್ಥಾನಕ್ಕೆ ಬಂದಿರಲಿಲ್ಲ; ‘ಬ್ರಹ್ಮಾಸ್ತ್ರ’ ತಂಡದಿಂದ ಬಂತು ಸ್ಪಷ್ಟನೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ