AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ-ಝಹೀರ್​ ಇಖ್ಬಾಲ್​ ವಿವಾಹದ ಬಗ್ಗೆ ಖುಷಿಯಿಂದ ಮಾತಾಡಿದ ಶತ್ರುಘ್ನ ಸಿನ್ಹಾ

ಸೋನಾಕ್ಷಿ ಸಿನ್ಹಾ ಮತ್ತು ಶತ್ರುಘ್ನ ಸಿನ್ಹಾ ಅವರು ಜೂನ್​ 23ರಂದು ಮದುವೆ ಆಗಲಿದ್ದಾರೆ ಎಂಬ ಮಾಹಿತಿ ಇದೆ. ಅದೇ ದಿನ ಸಂಜೆ ಬಾಲಿವುಡ್​ನ ಆಪ್ತ ಸ್ನೇಹಿತರು ಮತ್ತು ಕುಟುಂಬದವರಿಗಾಗಿ ಅದ್ದೂರಿ ಔತಣಕೂಟ ಏರ್ಪಡಿಸಲು ಪ್ಲ್ಯಾನ್​ ಮಾಡಲಾಗಿದೆ. ಸೋನಾಕ್ಷಿ ಸಿನ್ಹಾ ಅವರ ಅಂತರ್​ಧರ್ಮೀಯ ವಿವಾಹದ ಬಗ್ಗೆ ತಂದೆ ಶತ್ರುಘ್ನ ಸಿನ್ಹಾ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದನ್ನು ಶತ್ರುಘ್ನ ಸಿನ್ಹಾ ತಳ್ಳಿಹಾಕಿದ್ದಾರೆ.

ಸೋನಾಕ್ಷಿ-ಝಹೀರ್​ ಇಖ್ಬಾಲ್​ ವಿವಾಹದ ಬಗ್ಗೆ ಖುಷಿಯಿಂದ ಮಾತಾಡಿದ ಶತ್ರುಘ್ನ ಸಿನ್ಹಾ
ಶತ್ರುಘ್ನ ಸಿನ್ಹಾ, ಝಹೀರ್​ ಇಖ್ಬಾಲ್​, ಸೋನಾಕ್ಷಿ ಸಿನ್ಹಾ
ಮದನ್​ ಕುಮಾರ್​
|

Updated on: Jun 20, 2024 | 11:03 PM

Share

ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಶೀಘ್ರದಲ್ಲೇ ಮದುವೆ ಆಗಲಿದ್ದಾರೆ. ನಟ ಝಹೀರ್​ ಇಖ್ಬಾಲ್​ (Zaheer Iqbal) ಜೊತೆ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರದ್ದು ಅಂತರ್​ಧರ್ಮೀಯ ವಿವಾಹ ಆಗಲಿರುವುದರಿಂದ ಕುಟುಂಬದವರಿಗೆ ಪೂರ್ಣ ಸಮ್ಮತಿ ಇಲ್ಲ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದರು. ಅಲ್ಲದೇ, ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಈ ಮದುವೆಗೆ ಕಾಟಾಚಾರಕ್ಕೆ ಹೋಗಿ ಬರಲಿದ್ದಾರೆ, ಅದು ಕೂಡ ಆಮಂತ್ರಣ ಬಂದರೆ ಮಾತ್ರ ಎಂದು ಗಾಸಿಪ್​ ಹಬ್ಬಿತ್ತು. ಆ ಬಗ್ಗೆ ಶತ್ರುಘ್ನ ಸಿನ್ಹಾ (Shatrughan Sinha) ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಮಗಳ ಮದುವೆ ಬಗ್ಗೆ ಅವರು ಖುಷಿಯಿಂದ ಮಾತನಾಡಿದ್ದಾರೆ.

‘ಜೂಮ್​’ ಟಿವಿಗೆ ನೀಡಿದ ಸಂದರ್ಶನದಲ್ಲಿ ಶತ್ರುಘ್ನ ಸಿನ್ಹಾ ಅವರು ಮಗಳ ಮದುವೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಖಂಡಿತವಾಗಿ ಮದುವೆಗೆ ಹೋಗುತ್ತೇನೆ. ಯಾಕೆ ಹೋಗಬಾರದು? ಸೋನಾಕ್ಷಿ ಮತ್ತು ಝಹೀರ್​ ಒಟ್ಟಿಗೆ ಬಾಳಬೇಕು. ಅವರಿಬ್ಬರ ಜೋಡಿ ತುಂಬ ಚೆನ್ನಾಗಿದೆ’ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ. ಆ ಮೂಲಕ ಗಾಸಿಪ್​ ಮಂದಿಯ ಬಾಯಿ ಮುಚ್ಚಿಸಿದ್ದಾರೆ.

‘ಸುಳ್ಳು ಸುದ್ದಿ ಹಬ್ಬಿಸುವವರು ಈ ಮದುವೆ ಬಗ್ಗೆ ಹತಾಶರಾಗಿದ್ದಾರೆ ಅಷ್ಟೇ. ಅದಕ್ಕಾಗಿ ಅವರು ಸುಳ್ಳು ಹಬ್ಬಿಸುತ್ತಿದ್ದಾರೆ. ಈ ಮದುವೆ ಅವರಿಗೆ ಸಂಬಂಧಿಸಿದ್ದಲ್ಲ. ಅಂಥವರೆಲ್ಲ ತಮ್ಮ ತಮ್ಮ ಕೆಲಸ ನೋಡಿಕೊಂಡರೆ ಸಾಕು’ ಎಂದು ಶತ್ರುಘ್ನ ಸಿನ್ಹಾ ಖಡಕ್​ ಆಗಿ ಹೇಳಿದ್ದಾರೆ. ಬಾಲಿವುಡ್​ನಲ್ಲಿ ನಟಿ ಸೋನಾಕ್ಷಿ ಸಿನ್ಹಾ ಅವರು ಖ್ಯಾತಿ ಗಳಿಸಿದ್ದಾರೆ. ಅವರು ನಟಿಸಿದ ‘ಹೀರಾಮಂಡಿ’ ವೆಬ್​ ಸರಣಿ ಇತ್ತೀಚೆಗೆ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿದೆ.

ಇದನ್ನೂ ಓದಿ: 90 ಕೆಜಿ ಇದ್ದ ಸೋನಾಕ್ಷಿ ಸಿನ್ಹಾ; 30 ಕೆಜಿ ದೇಹ ತೂಕ ಇಳಿಸಿಕೊಂಡಿದ್ದು ಹೇಗೆ?  

ಜೂನ್​ 23ರಂದು ಸೋನಾಕ್ಷಿ ಸಿನ್ಹಾ ಮತ್ತು ಶತ್ರುಘ್ನ ಸಿನ್ಹಾ ಅವರ ಮದುವೆ ನಡೆಯಲಿದೆ ಎಂಬ ಮಾಹಿತಿ ಇದೆ. ಅದೇ ದಿನ ಸಂಜೆ ಬಾಲಿವುಡ್ ಮಂದಿಗೆ ಅದ್ದೂರಿ ಔತಣಕೂಟ ಏರ್ಪಡಿಸಲಾಗುವುದು. ಅದರಲ್ಲಿ ಕುಟುಂಬದವರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗಿ ಆಗಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು