AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೆಫಾಲಿ ಸಾಯುವುದಕ್ಕೂ ಮೊದಲು ಆ ಕೆಲಸ ಮಾಡಿದ್ದಳು’; ವಿವರಿಸಿದ ಗೆಳತಿ

ನಟಿ ಶೆಫಾಲಿ ಜರಿವಾಲಾ ಅವರ ಅಕಾಲಿಕ ಮರಣದ ಬಗ್ಗೆ ಅವರ ಆಪ್ತ ಸ್ನೇಹಿತೆ ಪೂಜಾ ಘಾಯ್ ಮಾಹಿತಿ ನೀಡಿದ್ದಾರೆ. ಶೆಫಾಲಿ ಅವರ ಕೊನೆಯ ದಿನದ ಘಟನೆಗಳನ್ನು ಪೂಜಾ ವಿವರಿಸಿದ್ದಾರೆ. ಮನೆಯಲ್ಲಿ ನಡೆದ ಪೂಜೆ, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲು ಅವರ ಸ್ಥಿತಿ ಹಾಗೂ ಅವರು ತೆಗೆದುಕೊಳ್ಳುತ್ತಿದ್ದ ವಿಟಮಿನ್ ಸಿ ಡ್ರಿಪ್ಸ್ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಶೆಫಾಲಿ ಸಾಯುವುದಕ್ಕೂ ಮೊದಲು ಆ ಕೆಲಸ ಮಾಡಿದ್ದಳು’; ವಿವರಿಸಿದ ಗೆಳತಿ
ಶೆಫಾಲಿ-ಪರಾಗ್
ರಾಜೇಶ್ ದುಗ್ಗುಮನೆ
|

Updated on: Jul 01, 2025 | 12:46 PM

Share

ನಟಿ ಶೆಫಾಲಿ ಜರಿವಾಲಾ (Shefali Jariwala) ಅವರ ಸಾವು ಎಲ್ಲರಿಗೂ ದೊಡ್ಡ ಆಘಾತವನ್ನುಂಟು ಮಾಡಿದೆ. ಅವರು 42ನೇ ವಯಸ್ಸಿಗೆ ನಿಧನರಾದರು. ಜೂನ್ 27ರಂದು ಅವರು ಕೊನೆಯುಸಿರೆಳೆದರು. ಈಗ, ಅವರ ಆಪ್ತ ಸ್ನೇಹಿತೆ ಪೂಜಾ ಘಾಯ್ ಅವರು ಶೆಫಾಲಿ ಸಾವಿಗೂ ಮೊದಲು ಏನಾಗಿತ್ತು ಎಂಬುದನ್ನು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಆ ದಿನ ಏನಾಯಿತು ಎಂಬುದನ್ನು ಶೆಫಾಲಿ ಪತಿ ಪರಾಗ್ ತ್ಯಾಗಿ ಅವರು ಪೂಜಾ ಬಳಿ ಹೇಳಿದ್ದರಂತೆ.

‘ಶೆಫಾಲಿಗೆ ಏನಾಗಿತ್ತು ಎಂಬುದು ಮರಣೋತ್ತರ ಪರೀಕ್ಷೆ ಬಳಿಕವೇ ಗೊತ್ತಾಗಬೇಕಿದೆ. ಆದರೆ, ಪರಾಗ್ ಹಾಗೂ ಅವರ ಕುಟುಂಬದಿಂದ ಕೆಲವು ವಿಚಾರ ತಿಳಿದಿದೆ. ಅಂದು ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಇತ್ತು. ಮನೆಯನ್ನು ಬೆಳಕಿನಿಂದ ಅಲಂಕರಿಸಲಾಗಿತ್ತು. ಅವರನ್ನು ಆಸ್ಪತ್ರೆಗೆ ತರುವಾಗ ಮನೆ ಹಾಗೆಯೇ ಅಲಂಕಾರಗೊಂಡಿತ್ತು. ಸಾಯುವ ಮೊದಲು ಶೆಫಾಲಿ ಸಾಮಾನ್ಯ ಊಟವನ್ನೇ ಮಾಡಿದ್ದರು. ಪರಾಗ್ ಬಳಿ ನಾಯಿಯನ್ನು ವಾಕ್ ಕರೆದುಕೊಂಡು ಹೊಗುವಂತೆ ಅವಳು ಕೇಳಿದಳು. ಅವನು ಕೆಳಗೆ ಹೋಗುತ್ತಿದ್ದಂತೆ ಶೆಫಾಲಿ ಅಸ್ವಸ್ಥಳಾದಳು’ ಎಂದು ಪೂಜಾ ವಿವರಿಸಿದ್ದಾರೆ.

‘ಮನೆ ಕೆಲಸದವರು ಪರಾಗ್ ಬಳಿ ಈ ವಿಚಾರ ಹೇಳಿದರು. ಆ ಕೂಡಲೇ ಪರಾಗ್ ಮೇಲೆ ಬಂದ. ಆಗ ಶೆಫಾಲಿಗೆ ಜೀವ ಇತ್ತು. ನಾಡಿ ಮಿಡಿಯುತ್ತಿತ್ತು. ಆದರೆ, ಕಣ್ಣುಗಳು ಓಪನ್ ಆಗುತ್ತಿರಲಿಲ್ಲ. ದೇಹ ಭಾರ ಎನಿಸುತ್ತಿತ್ತು. ಆ ಕ್ಷಣ ಅವಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆಸ್ಪತ್ರೆ ತಲುಪುವಾಗ ಅವಳು ಮೃತಪಟ್ಟಿದ್ದಳು’ ಎಂದು ಪೂಜಾ ಹೇಳಿದ್ದಾರೆ.

ಇದನ್ನೂ ಓದಿ
Image
‘ತನ್ನದೇ ಮೂತ್ರ ಕುಡಿಯುವ ವ್ಯಕ್ತಿ, ಪ್ರಚಾರಕ್ಕಾಗಿ ಇಷ್ಟು ಮಾಡಲ್ವಾ?’
Image
‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚನ ನೇರ ಮಾತು
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

ಇದನ್ನೂ ಓದಿ: ಹೃದಯಾಘಾತ, ಇಂಜಂಕ್ಷನ್ ಎರಡೂ ಅಲ್ಲ; ಶೆಫಾಲಿ ಸಾವಿನ ಹಿಂದಿನ ರಹಸ್ಯ ತಿಳಿಸಿದ ವೈದ್ಯರು

ವಿಟಾಮಿನ್ ಸಿ IV ಡ್ರಿಪ್ಸ್​​ನ ಶೆಫಾಲಿ ತೆಗೆದುಕೊಳ್ಳುತ್ತಿದ್ದರು ಎಂಬುದನ್ನು ಅವರು ಖಚಿತಪಡಿಸಿದ್ದಾರೆ. ಸಾಯುವ ದಿನವೂ ಅವರು ಡ್ರಿಪ್ಸ್ ಹಾಕಿಕೊಂಡಿದ್ದರಂತೆ. ‘ಶೆಫಾಲಿ ಆ ದಿನ ಡ್ರಿಪ್ಸ್ ಹಾಕಿಕೊಂಡಿದ್ದು ನಿಜ. ಇದು ಸುರಕ್ಷಿತವಲ್ಲ. ಆದರೆ, ದುಬೈನಲ್ಲಿ ಇದು ಕಾಮನ್’ ಎಂದು ವಿವರಿಸಿದ್ದಾರೆ. ಸದ್ಯ ಶೆಫಾಲಿ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿಯಲ್ಲಿ ಏನಿದೆ ಎಂಬ ವಿಚಾರ ಇನ್ನೂ ರಿವೀಲ್ ಆಗಿಲ್ಲ. ಶೀಘ್ರವೇ ಈ ಬಗ್ಗೆ ಮಾಹಿತಿ ಹೊರ ಬೀಳೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!