AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ

ಶೆಹನಾಜ್ ಗಿಲ್ ಹೆಚ್ಚು ಖ್ಯಾತಿ ಪಡೆದಿದ್ದು ‘ಬಿಗ್ ಬಾಸ್ ಹಿಂದಿ ಸೀಸನ್ 13’ಕ್ಕೆ ಬಂದ ಬಳಿಕ. ಆ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತು. ಪಂಜಾಬ್ ಮೂಲದ ಅವರು ಕಿರುತೆರೆ ಮೂಲಕ ಫೇಮಸ್ ಆದರು.

Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ
ಸಲ್ಲು-ಶೆಹನಾಜ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 03, 2023 | 12:39 PM

Share

ನಟ ಸಲ್ಮಾನ್ ಖಾನ್ (Salman Khan) ಅವರ ಜೊತೆಗೆ ನಟಿಸಬೇಕು ಅನ್ನೋದು ಅನೇಕರ ಕನಸು. ಆದರೆ, ಎಲ್ಲರಿಗೂ ಈ ಅವಕಾಶ ಸಿಗೋದಿಲ್ಲ. ನಟಿ ಶೆಹನಾಜ್ ಗಿಲ್​ ಅವರಿಗೆ ಈ ರೀತಿಯ ಅಪರೂಪದ ಅವಕಾಶ ಸಿಕ್ಕಿತ್ತು. ಈ ಅವಕಾಶ ಸಿಕ್ಕ ಬಳಿಕ ಅವರ ಅದೃಷ್ಟ ಬದಲಾಗಿದೆ. ಅವರು ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿದ್ದಾರೆ ಎಂದು ವರದಿ ಆಗಿದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ (Kisi Ka Bhai Kisi Ki Jaan Movie) ಬಳಿಕ ಅವರಿಗೆ ಆಫರ್ ಹೆಚ್ಚಾಗಿದೆ. ಹೀಗಾಗಿ, ಒಂದು ಸ್ವಂತ ಮನೆ ಹೊಂದುವ ಕನಸು ಅವರಿಗೆ ಇತ್ತು. ಆ ಕನಸು ಈಗ ನನಸಾಗಿದೆ.

ಶೆಹನಾಜ್ ಗಿಲ್ ಹೆಚ್ಚು ಖ್ಯಾತಿ ಪಡೆದಿದ್ದು ‘ಬಿಗ್ ಬಾಸ್ ಹಿಂದಿ ಸೀಸನ್ 13’ಕ್ಕೆ ಬಂದ ಬಳಿಕ. ಆ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತು. ಪಂಜಾಬ್ ಮೂಲದ ಅವರು ಕಿರುತೆರೆ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಿರುವಾಗಲೇ ಅವರು ಮುಂಬೈನಲ್ಲಿ ಮನೆ ಖರೀದಿಸಿದ್ದಾರೆ ಎನ್ನಲಾಗಿದೆ. ಈ ಮನೆ ಮುಂಬೈನಲ್ಲಿ ಎಲ್ಲಿದೆ? ಅದರ ಬೆಲೆ ಎಷ್ಟು? ಎಂಬಿತ್ಯಾದಿ ವಿಚಾರಗಳ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯ ಆಗಬೇಕಿದೆ.

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಏಪ್ರಿಲ್ 21ರಂದು ತೆರೆಗೆ ಬಂತು. ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತು. ಈ ಚಿತ್ರದಿಂದ ಶೆಹನಾಜ್ ಜನಪ್ರಿಯತೆ ಹೆಚ್ಚಿತು. ಶೆಹನಾಜ್ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ಸ್ಟಾರ್ ನಟಿ ಆಗಿ ಮಿಂಚಲಿ ಎಂಬುದು ಅನೇಕರ ಕೋರಿಕೆ.

ಇದನ್ನೂ ಓದಿ: 100 ಕೋಟಿ ರೂಪಾಯಿ ಕ್ಲಬ್​ ಸೇರಿವೆ ಸಲ್ಮಾನ್​ ಖಾನ್​ ನಟನೆಯ 16 ಚಿತ್ರಗಳು; ಇಲ್ಲಿದೆ ಪಟ್ಟಿ

ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರಿಗೆ ಸಿದ್ದಾರ್ಥ್ ಶುಕ್ಲಾ ಜೊತೆ ಪ್ರೀತಿ ಮೂಡಿತು. ಅವರು ಇನ್ನೇನು ಮದುವೆ ಆಗಬೇಕಿತ್ತು. ಆದರೆ, ಶೆಹನಾಜ್ ಹೃದಯಾಘಾತದಿಂದ ನಿಧನ ಹೊಂದಿದರು. ಇದಾದ ಬಳಿಕ ಅವರು ಕಣ್ಣೀರಲ್ಲಿ ಕೈತೊಳೆದರು. ಶೆಹನಾಜ್ ಗಿಲ್ ಅವರನ್ನು ಸಲ್ಮಾನ್ ಖಾನ್ ಅನೇಕ ಬಾರಿ ಸಮಾಧಾನ ಮಾಡಿದ್ದಿದೆ. ಈಗ ಅವರು ದುಃಖ ಮರೆತು ಚೇತರಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ